ರಜನಿಕಾಂತ್ 
ದೇಶ

2021ರ ವಿಧಾನಸಭೆ ಚುನಾವಣೆಯಲ್ಲಿ ಪವಾಡ ನಡೆಯಲಿದೆ: ಚುನಾವಣಾ ರಾಜಕೀಯದ ಸುಳಿವು ನೀಡಿದ ರಜನಿ

2021ರಲ್ಲಿ ನಡೆಯಲಿರುವ ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಪವಾಡ ನಡೆಯಲಿದೆ ಮತ್ತು ತಮಿಳು ಜನ ಅಂತಹ ಅದ್ಭುತ ಸೃಷ್ಟಿಸಲಿದ್ದಾರೆ ಎಂದು ತಮಿಳು ಸೂಪರ್ ಸ್ಟಾರ್ ರಜನಿಕಾಂತ್ ಅವರು ಗುರುವಾರ ಹೇಳಿದ್ದಾರೆ.

ಚೆನ್ನೈ: 2021ರಲ್ಲಿ ನಡೆಯಲಿರುವ ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಪವಾಡ ನಡೆಯಲಿದೆ ಮತ್ತು ತಮಿಳು ಜನ ಅಂತಹ ಅದ್ಭುತ ಸೃಷ್ಟಿಸಲಿದ್ದಾರೆ ಎಂದು ತಮಿಳು ಸೂಪರ್ ಸ್ಟಾರ್ ರಜನಿಕಾಂತ್ ಅವರು ಗುರುವಾರ ಹೇಳಿದ್ದಾರೆ.

ತಮಿಳುನಾಡಿನಲ್ಲಿ ಆಧ್ಯಾತ್ಮಿಕ ರಾಜಕೀಯಕ್ಕೆ ಅವಕಾಶ ಇಲ್ಲ ಎಂಬ ಮೀನುಗಾರಿಕೆ ಸಚಿವ ಡಿ ಜಯಕುಮಾರ್ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ರಜನಿಕಾಂತ್, 2021ರಲ್ಲಿ ತಮಿಳುನಾಡಿನ ಜನ ಒಂದು ದೊಡ್ಡ ಪವಾಡ ಸೃಷ್ಟಿಸಲಿದ್ದಾರೆ. ಇದು ಶೇ.100ರಷ್ಟು ಖಚಿತ ಎಂದು ಹೇಳುವ ಮೂಲಕ 2021ರಲ್ಲಿ ಚುನಾವಣಾ ಅಖಾಡಕ್ಕಿಳಿಯುವ ಸೂಚನೆ ನೀಡಿದ್ದಾರೆ.

ಚೆನ್ನೈ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ತಮಿಳು ಹಿರಿಯ ನಟ, ರಾಜಕಾರಣದಲ್ಲಿ ಅದ್ಭುತಗಳು ಮತ್ತು ಪವಾಡಗಳು ಸಂಭವಿಸುತ್ತಲೇ ಇರುತ್ತವೆ ಎಂದು ಹೇಳಿದ್ದಾರೆ.

ಇನ್ನು ರಜನಿಕಾಂತ್ ಹೇಳಿಕೆಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಇಕೆ ಪಳನಿಸ್ವಾಮಿ ಅವರು, ಅವರು ಯಾವ ಪವಾಡದ ಬಗ್ಗೆ ಮಾತನಾಡಿದ್ದಾರೆ ಎಂಬುದು ನನಗೆ ಗೊತ್ತಿಲ್ಲ ಮತ್ತು ಯಾವ ಆಧಾರದ ಮೇಲೆ ಪವಾಡ ನಡೆಯುತ್ತದೆ ಎಂಬುದು ನನಗೆ ಗೊತ್ತಿಲ್ಲ. 2021ರಲ್ಲಿ ಮತ್ತೆ ಎಐಎಡಿಎಂಕೆ ಮತ್ತೆ ಅಧಿಕಾರಕ್ಕೆ ಬರುತ್ತದೆ ಮತ್ತು ಇದು ಪವಾಡಕ್ಕಾಗಿ ನಾನು ಕಾಯುತ್ತಿದ್ದೇವೆ ಎಂದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತದ ಚುನಾವಣಾ ವ್ಯವಸ್ಥೆಯ ವಿಶ್ವಾಸಾರ್ಹತೆ ಬಗ್ಗೆ ಜಾಗತಿಕವಾಗಿ ಅತ್ಯುತ್ತಮ ಸ್ಪಷ್ಟ ಅಭಿಪ್ರಾಯ- ಟ್ರಂಪ್ ಹೇಳಿಕೆ ಬೆನ್ನಲ್ಲೇ MEA ಪ್ರತಿಕ್ರಿಯೆ!

ಮಾಜಿ ಸಚಿವ ಬಿ. ಸಿ. ನಾಗೇಶ್ ನಿಧನ: ನಾಳೆ ತಿಪಟೂರಿನಲ್ಲಿ ಅಂತ್ಯಕ್ರಿಯೆ!

ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ನಕಲಿ ಔಷಧಿ ಮರುಪ್ಯಾಕಿಂಗ್ ಬೃಹತ್ ಜಾಲ ಪತ್ತೆ: 5 ಕೋಟಿ ರೂ. ಮೌಲ್ಯದ ವಸ್ತುಗಳು ವಶಕ್ಕೆ!

ಪಸಿಂದು ಗೋಲ್ಡನ್ ಡಕೌಟ್: ಆಡಿದ 2ನೇ ಪಂದ್ಯದಲ್ಲೇ ಕುಂಬ್ಳೆ ದಾಖಲೆ ಸರಿಗಟ್ಟಿದ Team India ಯುವ ಸ್ಪಿನ್ನರ್ ಮಾನವ್ ಸುತಾರ್!

ದೇವೇಗೌಡರ ಕೂಸನ್ನು ಹಾದಿ ತಪ್ಪಿಸಿ ಯಾರಪ್ಪನಿಗೆ ಕೊಡಲು ಹೊರಟಿದ್ದೀರಿ ಮಿಸ್ಟರ್ ಡಿ.ಕೆ. ಶಿವಕುಮಾರ್? ತಾಕತ್ ಇದ್ರೆ ಚರ್ಚೆಗೆ ಬನ್ನಿ, ಕುಮಾರಸ್ವಾಮಿ ಸವಾಲು!