ರಜನಿಕಾಂತ್ 
ದೇಶ

2021ರ ವಿಧಾನಸಭೆ ಚುನಾವಣೆಯಲ್ಲಿ ಪವಾಡ ನಡೆಯಲಿದೆ: ಚುನಾವಣಾ ರಾಜಕೀಯದ ಸುಳಿವು ನೀಡಿದ ರಜನಿ

2021ರಲ್ಲಿ ನಡೆಯಲಿರುವ ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಪವಾಡ ನಡೆಯಲಿದೆ ಮತ್ತು ತಮಿಳು ಜನ ಅಂತಹ ಅದ್ಭುತ ಸೃಷ್ಟಿಸಲಿದ್ದಾರೆ ಎಂದು ತಮಿಳು ಸೂಪರ್ ಸ್ಟಾರ್ ರಜನಿಕಾಂತ್ ಅವರು ಗುರುವಾರ ಹೇಳಿದ್ದಾರೆ.

ಚೆನ್ನೈ: 2021ರಲ್ಲಿ ನಡೆಯಲಿರುವ ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಪವಾಡ ನಡೆಯಲಿದೆ ಮತ್ತು ತಮಿಳು ಜನ ಅಂತಹ ಅದ್ಭುತ ಸೃಷ್ಟಿಸಲಿದ್ದಾರೆ ಎಂದು ತಮಿಳು ಸೂಪರ್ ಸ್ಟಾರ್ ರಜನಿಕಾಂತ್ ಅವರು ಗುರುವಾರ ಹೇಳಿದ್ದಾರೆ.

ತಮಿಳುನಾಡಿನಲ್ಲಿ ಆಧ್ಯಾತ್ಮಿಕ ರಾಜಕೀಯಕ್ಕೆ ಅವಕಾಶ ಇಲ್ಲ ಎಂಬ ಮೀನುಗಾರಿಕೆ ಸಚಿವ ಡಿ ಜಯಕುಮಾರ್ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ರಜನಿಕಾಂತ್, 2021ರಲ್ಲಿ ತಮಿಳುನಾಡಿನ ಜನ ಒಂದು ದೊಡ್ಡ ಪವಾಡ ಸೃಷ್ಟಿಸಲಿದ್ದಾರೆ. ಇದು ಶೇ.100ರಷ್ಟು ಖಚಿತ ಎಂದು ಹೇಳುವ ಮೂಲಕ 2021ರಲ್ಲಿ ಚುನಾವಣಾ ಅಖಾಡಕ್ಕಿಳಿಯುವ ಸೂಚನೆ ನೀಡಿದ್ದಾರೆ.

ಚೆನ್ನೈ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ತಮಿಳು ಹಿರಿಯ ನಟ, ರಾಜಕಾರಣದಲ್ಲಿ ಅದ್ಭುತಗಳು ಮತ್ತು ಪವಾಡಗಳು ಸಂಭವಿಸುತ್ತಲೇ ಇರುತ್ತವೆ ಎಂದು ಹೇಳಿದ್ದಾರೆ.

ಇನ್ನು ರಜನಿಕಾಂತ್ ಹೇಳಿಕೆಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಇಕೆ ಪಳನಿಸ್ವಾಮಿ ಅವರು, ಅವರು ಯಾವ ಪವಾಡದ ಬಗ್ಗೆ ಮಾತನಾಡಿದ್ದಾರೆ ಎಂಬುದು ನನಗೆ ಗೊತ್ತಿಲ್ಲ ಮತ್ತು ಯಾವ ಆಧಾರದ ಮೇಲೆ ಪವಾಡ ನಡೆಯುತ್ತದೆ ಎಂಬುದು ನನಗೆ ಗೊತ್ತಿಲ್ಲ. 2021ರಲ್ಲಿ ಮತ್ತೆ ಎಐಎಡಿಎಂಕೆ ಮತ್ತೆ ಅಧಿಕಾರಕ್ಕೆ ಬರುತ್ತದೆ ಮತ್ತು ಇದು ಪವಾಡಕ್ಕಾಗಿ ನಾನು ಕಾಯುತ್ತಿದ್ದೇವೆ ಎಂದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬಿಡದಿ ಟೌನ್​​ಶಿಪ್​​ಗೆ ಒಪ್ಪಿದ ರೈತರು; HDK ವಿರೋಧದ ನಡುವೆ ಜೂನ್ 1 ರಿಂದಲೇ ಹಣ ಬಿಡುಗಡೆ: ಡಿಕೆಶಿ ಮಹತ್ವದ ಘೋಷಣೆ

43 ವರ್ಷಗಳ ಹಿಂದೆ ಕಳುವಾಗಿದ್ದ 19 ಕೋಟಿ ರೂ. ಮೌಲ್ಯದ 'ಅವಲೋಕಿತೇಶ್ವರ' ಪ್ರತಿಮೆ ಭಾರತಕ್ಕೆ ಹಿಂದಿರುಗಿಸುತ್ತಿದೆ ಅಮೆರಿಕ!

'ಸುಪ್ರೀಂ' ಸಿಜೆಐ ಹೇಳಿಕೆಗೆ ಟಕ್ಕರ್: 'Cockroach Janta Party' ಕಟ್ಟಿದ ಜೆನ್‌ ಝೀಗಳು: 40,000ಕ್ಕೂ ಹೆಚ್ಚು ಯುವಕರ ಸೇರ್ಪಡೆ, ಸಂಚಲನ!

ಕೇರಳದಲ್ಲಿ ಖಾತೆ ಹಂಚಿಕೆ ಗೊಂದಲ: ಕಾಂಗ್ರೆಸ್ ಹೈಕಮಾಂಡ್ ಸಲಹೆ ತಿರಸ್ಕರಿಸಿದ CM ಸತೀಶನ್; ಭಿನ್ನಮತ ಸ್ಫೋಟ..!

ದೇಶದ ಪ್ರತಿಷ್ಠೆ ಹೆಚ್ಚಿಸಲು ಮೋದಿ ಶ್ರಮಿಸ್ತಿದ್ದಾರೆ; PM ವಿದೇಶ ಪ್ರವಾಸಕ್ಕೆ ಪವಾರ್ ಮೆಚ್ಚುಗೆ; ಟೀಕಿಸಿದ್ದ ಕಾಂಗ್ರೆಸ್ ಗೆ ತೀವ್ರ ಮುಖಭಂಗ!

SCROLL FOR NEXT