ದೇಶ

ನಿತ್ಯಾನಂದ ದೇಶ ಬಿಟ್ಟು ಪರಾರಿ; ಅಗತ್ಯಬಿದ್ದರೆ ಬಂಧಿಸುತ್ತೇವೆ: ಗುಜರಾತ್ ಪೊಲೀಸರು 

Sumana Upadhyaya

ಅಹ್ಮದಾಬಾದ್; ಆಶ್ರಮಕ್ಕೆ ಸಂಬಂಧಿಸಿದ ಕ್ರಿಮಿನಲ್ ಪ್ರಕರಣ ಬೆಳಕಿಗೆ ಬಂದ ನಂತರ ಸ್ವಘೋಷಿತ ದೇವಮಾನವ ಸ್ವಾಮಿ ನಿತ್ಯಾನಂದ ದೇಶ ಬಿಟ್ಟು ಪಲಾಯನಗೈದಿದ್ದು ಆತನ ವಿರುದ್ಧ ಸಾಕ್ಷಿ ಸಂಗ್ರಹಿಸಲು ಗುಜರಾತ್ ಪೊಲೀಸರು ಸತತ ಪ್ರಯತ್ನ ಮುಂದುವರಿಸಿದ್ದಾರೆ.

 
ನಿತ್ಯಾನಂದನ ಇಬ್ಬರು ಶಿಷ್ಯರನ್ನು ಈಗಾಗಲೇ ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ. ತಮ್ಮ ಆಶ್ರಮವನ್ನು ನಡೆಸಲು ಅನುಯಾಯಿಗಳಿಂದ ಹಣ ಸಂಗ್ರಹಿಸಲು ಇಬ್ಬರು ಮಕ್ಕಳನ್ನು ಅಪಹರಿಸಿ ಬಂಧಿಸಿಟ್ಟ ಆರೋಪದ ಮೇಲೆ ಈಗಾಗಲೇ ನಿತ್ಯಾನಂದನ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.


ನಿತ್ಯಾನಂದ ದೇಶ ಬಿಟ್ಟು ಹೋಗಿದ್ದು ಅಗತ್ಯಬಿದ್ದರೆ ಪೊಲೀಸರು ಆತನನ್ನು ಬಂಧಿಸಿ ವಿಚಾರಣೆ ನಡೆಸುತ್ತಾರೆ ಎಂದು ಅಹ್ಮದಾಬಾದ್ ಗ್ರಾಮೀಣ ಎಸ್ ಪಿ ಆರ್ ವಿ ಅಸರಿ ತಿಳಿಸಿದ್ದಾರೆ. ಕರ್ನಾಟಕದಲ್ಲಿ ಅತ್ಯಾಚಾರ ಆರೋಪದ ಮೇಲೆ ನಿತ್ಯಾನಂದನ ವಿರುದ್ಧ ಕೇಸು ದಾಖಲಿಸಲಾಗಿದ್ದು ಆತ ದೇಶ ಬಿಟ್ಟು ಪರಾರಿಯಾಗಿದ್ದಾನೆ, ಇಲ್ಲಿ ಆತನನ್ನು ಹುಡುಕುವುದು ಸಮಯ ವ್ಯರ್ಥ ಎಂದು ಅವರು ಹೇಳಿದರು.


ಅಗತ್ಯಬಿದ್ದರೆ ವಿದೇಶದ ಸೂಕ್ತ ಸಂಪರ್ಕದ ಮೂಲಕ ಆತನನ್ನು ಪತ್ತೆಹಚ್ಚಿ ಬಂಧಿಸಿ ಕರೆತರಲಾಗುವುದು ಎಂದು ಅಸರಿ ಹೇಳಿದರು.

SCROLL FOR NEXT