ಶವ ಹೂತಿಟ್ಟ ಸ್ಥಳ 
ದೇಶ

ಪತಿಯನ್ನು ಕೊಂದು ಅಡುಗೆ ಮನೆಯಲ್ಲಿ ಹೂತಿಟ್ಟ ಪತ್ನಿ ಮಾಡಿದ್ದೇನು ಗೊತ್ತಾ?

ಪತಿಯೊಬ್ಬಳು ತನ್ನ ಗಂಡನನ್ನು ಕೊಂದು ಶವವನ್ನು ಅಡುಗೆ ಮನೆಯಲ್ಲಿ ಹೂತು ಹಾಕಿ ಸುಮಾರು ಒಂದು ತಿಂಗಳ ಕಾಲ ಶವವನ್ನು ಹೂತ ಸ್ಥಳದಲ್ಲಿಯೇ ಅಡುಗೆ ಮಾಡಿರುವ ಘಟನೆ ಮಧ್ಯಪ್ರದೇಶದ ಅನುಪ್ಪುರ್ ಜಿಲ್ಲೆಯಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ

ಭೂಪಾಲ್: ಪತಿಯೊಬ್ಬಳು ತನ್ನ ಗಂಡನನ್ನು ಕೊಂದು ಶವವನ್ನು ಅಡುಗೆ ಮನೆಯಲ್ಲಿ ಹೂತು ಹಾಕಿ ಸುಮಾರು ಒಂದು ತಿಂಗಳ ಕಾಲ ಶವವನ್ನು ಹೂತ ಸ್ಥಳದಲ್ಲಿಯೇ ಅಡುಗೆ ಮಾಡಿರುವ ಘಟನೆ ಮಧ್ಯಪ್ರದೇಶದ ಅನುಪ್ಪುರ್ ಜಿಲ್ಲೆಯಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಅಕ್ಟೋಬರ್ 22ರಂದು ಕಾರೋಂಡಿ ಗ್ರಾಮದಲ್ಲಿರುವ ತನ್ನ ಮನೆಯಿಂದ ವಕೀಲ ಮಹೇಶ್ ಬಾನ್ವಾಲ್ (35ವರ್ಷ) ನಾಪತ್ತೆಯಾಗಿದ್ದರು. ತನ್ನ ಪತಿ ಮಹೇಶ್ ನಾಪತ್ತೆಯಾಗಿರುವುದಾಗಿ ಪತ್ನಿ ಪ್ರಮೀಳಾ (32ವರ್ಷ) ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಳು.

ಏತನ್ಮಧ್ಯೆ ನವೆಂಬರ್ 21ರಂದು ಮಹೇಶ್ ಹಿರಿಯ ಅಣ್ಣ ಪೊಲೀಸರನ್ನು ಭೇಟಿಯಾದ ನಂತರ ಪ್ರಕರಣ ತಿರುವು ಪಡೆದುಕೊಂಡಿರುವುದಾಗಿ ವರದಿ ತಿಳಿಸಿದೆ. ಮಹೇಶ್ ಅಣ್ಣ ಅರ್ಜುನ್ ಬಾನ್ವಾಲ್ ವ್ಯಕ್ತಪಡಿಸಿದ ಸಂಶಯದಿಂದ ಪೊಲೀಸರಿಗೆ ಈ ಪ್ರಕರಣ ಬೇಧಿಸಲು ಸಾಧ್ಯವಾಗಿದೆ ಎಂದು ವರದಿ ವಿವರಿಸಿದೆ.

ನನ್ನ ತಮ್ಮ ನಾಪತ್ತೆಯಾದ ನಂತರ ನಾನು ಹಾಗೂ ನಮ್ಮ ಕುಟುಂಬದ ಸದಸ್ಯರು ಮನೆಗೆ ಭೇಟಿ ನೀಡಲು ಪ್ರಯತ್ನಿಸಿದಾಗ ಪತ್ನಿ ಪ್ರಮೀಳಾ ತಡೆಯೊಡ್ಡುತ್ತಿದ್ದಳು. ಹೀಗೆ ಹಲವು ಬಾರಿ ಮನೆಗೆ ಭೇಟಿ ನೀಡುತ್ತೇವೆ ಎಂದು ಹೋದಾಗ ಪ್ರಮಿಳಾ ಅವಾಚ್ಯ ಶಬ್ದಗಳಿಂದ ನಿಂದಿಸಿ ವಾಪಸ್ ಕಳುಹಿಸುತ್ತಿದ್ದಳು ಎಂದು ಅರ್ಜುನ್ ಪೊಲೀಸರಿಗೆ ಮಾಹಿತಿ ನೀಡಿದ್ದರು.

ಅರ್ಜುನ್ ಹೇಳಿಕೆ ಆಧಾರದ ಮೇಲೆ ಪೊಲೀಸ್ ತಂಡ ಗುರುವಾರ ಗ್ರಾಮಕ್ಕೆ ತೆರಳಿದಾಗ ಮನೆಯಿಂದ ಕೆಟ್ಟ ವಾಸನೆ ಹೊರಬರುತ್ತಿತ್ತು. ಇಡೀ ಮನೆಯನ್ನು ಶೋಧಿಸಿದಾಗ ಏನೂ ಸಿಗಲಿಲ್ಲವಾಗಿತ್ತು. ಕೊನೆಗೆ ಅಡುಗೆ ಮನೆಯ ಸ್ಲ್ಯಾಬ್ ಅನ್ನು ತೆಗೆದು ಅಗೆದಾಗ ಕೊಳೆತ ಶವ ಪತ್ತೆಯಾಗಿತ್ತು ಎಂದು ಪೊಲೀಸ್ ಠಾಣಾಧಿಕಾರಿ ಅಮರಕಂಠಕ್ ಭಾನುಪ್ರತಾಪ್ ಸಿಂಗ್ ತಿಳಿಸಿದ್ದಾರೆ.

ಗಂಡನ ಶವವನ್ನು ಹೂತು ಹಾಕಿದ್ದ ಸ್ಥಳದಲ್ಲಿಯೇ ಪತ್ನಿ ಪ್ರಮೀಳಾ ಕಳೆದ ಒಂದು ತಿಂಗಳ ಕಾಲ ಅಡುಗೆ ಮಾಡುತ್ತಿದ್ದಳು ಎಂದು ಪೊಲೀಸರು ವಿವರಿಸಿದ್ದಾರೆ. ತನ್ನ ಹಿರಿಯ ಭಾವ ಗಂಗಾರಾಮ್ ಬಾನ್ವಾಲ್ ಅವರ ಪತ್ನಿ ಜತೆ ಮಹೇಶ್ ಅನೈತಿಕ ಸಂಬಂಧ ಹೊಂದಿದ್ದು, ಗಂಗಾರಾಮ್ ಮತ್ತು ನಾನು ಸೇರಿ ಗಂಡನನ್ನು ಹತ್ಯೆಗೈಯುವ ಸಂಚು ರೂಪಿಸಿದ್ದಾಗಿ ವಿಚಾರಣೆ ವೇಳೆ ಆಕೆ ಬಾಯಿ ಬಿಟ್ಟಿದ್ದಾಳೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

20 ವರ್ಷ ಸಾಕಿ ಬೆಳೆಸಿದ 'ಅಶ್ವತ್ಥ'ಕ್ಕೆ ಕಿಡಿಗೇಡಿಗಳ ಕೊಡಲಿ ಪೆಟ್ಟು, ಬಿಕ್ಕಿ ಬಿಕ್ಕಿ ಅತ್ತ 'ವೃಕ್ಷಮಾತೆ', ಇಬ್ಬರ ಬಂಧನ, video viral

2nd Test, Day 3: ಮೊದಲ ಇನ್ನಿಂಗ್ಸ್ ನಲ್ಲಿ 248 ರನ್ ಗೆ ವಿಂಡೀಸ್ ಆಲೌಟ್, ಫಾಲೋಆನ್ ಹೇರಿದ ಭಾರತ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

SCROLL FOR NEXT