ಸಂಜಯ್ ರಾವತ್ 
ದೇಶ

ಅಜಿತ್ ಪವಾರ್ ಮಹಾರಾಷ್ಟ್ರ ಜನತೆಯ ಬೆನ್ನಿಗೆ ಚೂರಿ ಹಾಕಿದ್ದಾರೆ: ಸಂಜಯ್ ರಾವತ್ 

ಮಹಾರಾಷ್ಟ್ರದಲ್ಲಿ ರಾತ್ರೋರಾತ್ರಿ ಅಚ್ಚರಿಯ ರಾಜಕೀಯ ಬೆಳವಣಿಗೆ ಕಂಡು ಎನ್ ಸಿಪಿ ಬೆಂಬಲ ಪಡೆದು ಬಿಜೆಪಿ ಸರ್ಕಾರ ರಚಿಸಿದೆ. ಈ ಮೂಲಕ ಶತಾಯಗತಾಯ ಸರ್ಕಾರ ರಚಿಸಿ ಸಿಎಂ ಆಗಬೇಕೆಂದು ಕನಸು ಕಾಣುತ್ತಿದ್ದ ಶಿವಸೇನೆಗೆ ಮಾಸ್ಟರ್ ಸ್ಟ್ರೋಕ್ ನೀಡಿದೆ. 

ನವದೆಹಲಿ: ಮಹಾರಾಷ್ಟ್ರದಲ್ಲಿ ರಾತ್ರೋರಾತ್ರಿ ಅಚ್ಚರಿಯ ರಾಜಕೀಯ ಬೆಳವಣಿಗೆ ಕಂಡು ಎನ್ ಸಿಪಿ ಬೆಂಬಲ ಪಡೆದು ಬಿಜೆಪಿ ಸರ್ಕಾರ ರಚಿಸಿದೆ. ಈ ಮೂಲಕ ಶತಾಯಗತಾಯ ಸರ್ಕಾರ ರಚಿಸಿ ಸಿಎಂ ಆಗಬೇಕೆಂದು ಕನಸು ಕಾಣುತ್ತಿದ್ದ ಶಿವಸೇನೆಗೆ ಮಾಸ್ಟರ್ ಸ್ಟ್ರೋಕ್ ಆಗಿದೆ. 


ಸಿಎಂ ಮತ್ತು ಡಿಸಿಎಂ ಪ್ರಮಾಣವಚನ ಸ್ವೀಕರಿಸಿದ ಕೂಡಲೇ ಇತ್ತ ಶಿವಸೇನೆ ನಾಯಕ ಸಂಜಯ್ ರಾವತ್ ಮುಂಬೈಯಲ್ಲಿ ತುರ್ತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದಾರೆ.


ಅಜಿತ್ ಪವಾರ್ ಅವರು ಮಹಾರಾಷ್ಟ್ರ ಜನತೆಯ ಬೆನ್ನಿಗೆ ಚೂರಿ ಹಾಕಿದ್ದಾರೆ. ಬಿಜೆಪಿ ಜೊತೆ ಸೇರಿಕೊಂಡು ಸರ್ಕಾರ ರಚನೆ ಮಾಡುವ ಮೂಲಕ ದ್ರೋಹವೆಸಗಿದ್ದಾರೆ.ಬಿಜೆಪಿ ಜೊತೆ ಕೈಜೋಡಿಸಿದ್ದು ಅಜಿತ್ ಪವಾರ್ ಅವರ ನಿರ್ಧಾರವೇ ಹೊರತು ಇದಕ್ಕೆ ಎನ್ ಸಿಪಿ ನಾಯಕ ಶರದ್ ಪವಾರ್ ಅವರ ಒಪ್ಪಿಗೆಯಿರಲಿಲ್ಲ ಎಂದಿದ್ದಾರೆ.


ಶರದ್ ಪವಾರ್ ಮತ್ತು ಉದ್ಧವ್ ಠಾಕ್ರೆಯವರು ಇಂದು ಮಧ್ಯಾಹ್ನ ಜಂಟಿ ಸುದ್ದಿಗೋಷ್ಠಿ ನಡೆಸಿ ಎಲ್ಲವನ್ನೂ ತಿಳಿಸಲಿದ್ದಾರೆ. ಅಜಿತ್ ಪವಾರ್ ಮತ್ತು ಅವರ ಬೆಂಬಲಿತ ಶಾಸಕರು ಬಿಜೆಪಿಗೆ ಬೆಂಬಲ ನೀಡಿ ಛತ್ರಪತಿ ಶಿವಾಜಿ ಮಹಾರಾಜ ಮತ್ತು ಮಹಾರಾಷ್ಟ್ರ ಜನತೆಯನ್ನು ಅವಮಾನಿಸಿದ್ದಾರೆ ಎಂದರು.


ನಂತರ ಇದೇ ಸಂದರ್ಭದಲ್ಲಿ ರಾವತ್ ನಿನ್ನೆ ರಾತ್ರಿ ಅಜಿತ್ ಪವಾರ್ ಅವರ ಸಂಶಯಾತ್ಮಕ ನಡೆಯನ್ನು ವಿವರಿಸಿದರು. ನಿನ್ನೆ ರಾತ್ರಿಯವರೆಗೂ ಅಜಿತ್ ಪವಾರ್ ನಮ್ಮ ಜೊತೆಗೇ ಇದ್ದರು. ಹಠಾತ್ತಾಗಿ ನಮ್ಮಿಂದ ಕಾಣೆಯಾದರು. ಅದಕ್ಕೂ ಮುನ್ನ ಅವರು ನಮ್ಮ ಮುಂದೆ ಬರಲು ತಪ್ಪಿಸುತ್ತಿದ್ದರು. ಕಣ್ಣಿಗೆ ಕಣ್ಣು ಕೊಟ್ಟು ಮಾತನಾಡಲು ಹಿಂಜರಿಯುತ್ತಿದ್ದರು. ಅವರ ವರ್ತನೆಯಿಂದ ನಮಗೆ ಸಂಶಯವುಂಟಾಗಿತ್ತು ಎಂದು ಸುದ್ದಿಗಾರರಿಗೆ ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

SCROLL FOR NEXT