ಸಂಜಯ್ ರಾವತ್ 
ದೇಶ

ಅಜಿತ್ ಪವಾರ್ ಮಹಾರಾಷ್ಟ್ರ ಜನತೆಯ ಬೆನ್ನಿಗೆ ಚೂರಿ ಹಾಕಿದ್ದಾರೆ: ಸಂಜಯ್ ರಾವತ್ 

ಮಹಾರಾಷ್ಟ್ರದಲ್ಲಿ ರಾತ್ರೋರಾತ್ರಿ ಅಚ್ಚರಿಯ ರಾಜಕೀಯ ಬೆಳವಣಿಗೆ ಕಂಡು ಎನ್ ಸಿಪಿ ಬೆಂಬಲ ಪಡೆದು ಬಿಜೆಪಿ ಸರ್ಕಾರ ರಚಿಸಿದೆ. ಈ ಮೂಲಕ ಶತಾಯಗತಾಯ ಸರ್ಕಾರ ರಚಿಸಿ ಸಿಎಂ ಆಗಬೇಕೆಂದು ಕನಸು ಕಾಣುತ್ತಿದ್ದ ಶಿವಸೇನೆಗೆ ಮಾಸ್ಟರ್ ಸ್ಟ್ರೋಕ್ ನೀಡಿದೆ. 

ನವದೆಹಲಿ: ಮಹಾರಾಷ್ಟ್ರದಲ್ಲಿ ರಾತ್ರೋರಾತ್ರಿ ಅಚ್ಚರಿಯ ರಾಜಕೀಯ ಬೆಳವಣಿಗೆ ಕಂಡು ಎನ್ ಸಿಪಿ ಬೆಂಬಲ ಪಡೆದು ಬಿಜೆಪಿ ಸರ್ಕಾರ ರಚಿಸಿದೆ. ಈ ಮೂಲಕ ಶತಾಯಗತಾಯ ಸರ್ಕಾರ ರಚಿಸಿ ಸಿಎಂ ಆಗಬೇಕೆಂದು ಕನಸು ಕಾಣುತ್ತಿದ್ದ ಶಿವಸೇನೆಗೆ ಮಾಸ್ಟರ್ ಸ್ಟ್ರೋಕ್ ಆಗಿದೆ. 


ಸಿಎಂ ಮತ್ತು ಡಿಸಿಎಂ ಪ್ರಮಾಣವಚನ ಸ್ವೀಕರಿಸಿದ ಕೂಡಲೇ ಇತ್ತ ಶಿವಸೇನೆ ನಾಯಕ ಸಂಜಯ್ ರಾವತ್ ಮುಂಬೈಯಲ್ಲಿ ತುರ್ತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದಾರೆ.


ಅಜಿತ್ ಪವಾರ್ ಅವರು ಮಹಾರಾಷ್ಟ್ರ ಜನತೆಯ ಬೆನ್ನಿಗೆ ಚೂರಿ ಹಾಕಿದ್ದಾರೆ. ಬಿಜೆಪಿ ಜೊತೆ ಸೇರಿಕೊಂಡು ಸರ್ಕಾರ ರಚನೆ ಮಾಡುವ ಮೂಲಕ ದ್ರೋಹವೆಸಗಿದ್ದಾರೆ.ಬಿಜೆಪಿ ಜೊತೆ ಕೈಜೋಡಿಸಿದ್ದು ಅಜಿತ್ ಪವಾರ್ ಅವರ ನಿರ್ಧಾರವೇ ಹೊರತು ಇದಕ್ಕೆ ಎನ್ ಸಿಪಿ ನಾಯಕ ಶರದ್ ಪವಾರ್ ಅವರ ಒಪ್ಪಿಗೆಯಿರಲಿಲ್ಲ ಎಂದಿದ್ದಾರೆ.


ಶರದ್ ಪವಾರ್ ಮತ್ತು ಉದ್ಧವ್ ಠಾಕ್ರೆಯವರು ಇಂದು ಮಧ್ಯಾಹ್ನ ಜಂಟಿ ಸುದ್ದಿಗೋಷ್ಠಿ ನಡೆಸಿ ಎಲ್ಲವನ್ನೂ ತಿಳಿಸಲಿದ್ದಾರೆ. ಅಜಿತ್ ಪವಾರ್ ಮತ್ತು ಅವರ ಬೆಂಬಲಿತ ಶಾಸಕರು ಬಿಜೆಪಿಗೆ ಬೆಂಬಲ ನೀಡಿ ಛತ್ರಪತಿ ಶಿವಾಜಿ ಮಹಾರಾಜ ಮತ್ತು ಮಹಾರಾಷ್ಟ್ರ ಜನತೆಯನ್ನು ಅವಮಾನಿಸಿದ್ದಾರೆ ಎಂದರು.


ನಂತರ ಇದೇ ಸಂದರ್ಭದಲ್ಲಿ ರಾವತ್ ನಿನ್ನೆ ರಾತ್ರಿ ಅಜಿತ್ ಪವಾರ್ ಅವರ ಸಂಶಯಾತ್ಮಕ ನಡೆಯನ್ನು ವಿವರಿಸಿದರು. ನಿನ್ನೆ ರಾತ್ರಿಯವರೆಗೂ ಅಜಿತ್ ಪವಾರ್ ನಮ್ಮ ಜೊತೆಗೇ ಇದ್ದರು. ಹಠಾತ್ತಾಗಿ ನಮ್ಮಿಂದ ಕಾಣೆಯಾದರು. ಅದಕ್ಕೂ ಮುನ್ನ ಅವರು ನಮ್ಮ ಮುಂದೆ ಬರಲು ತಪ್ಪಿಸುತ್ತಿದ್ದರು. ಕಣ್ಣಿಗೆ ಕಣ್ಣು ಕೊಟ್ಟು ಮಾತನಾಡಲು ಹಿಂಜರಿಯುತ್ತಿದ್ದರು. ಅವರ ವರ್ತನೆಯಿಂದ ನಮಗೆ ಸಂಶಯವುಂಟಾಗಿತ್ತು ಎಂದು ಸುದ್ದಿಗಾರರಿಗೆ ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಬ್ರೇಕ್ ಫಾಸ್ಟ್ ಮೀಟಿಂಗ್: ಮುಂದಿನ CM ಡಿ.ಕೆ ಶಿವಕುಮಾರ್; ಸಿದ್ದರಾಮಯ್ಯ ಮಾಹಿತಿ; ಮಧ್ಯಾಹ್ನ 2.30ಕ್ಕೆ ರಾಜೀನಾಮೆ

ಮೋದಿಯವರ ಇತ್ತೀಚಿನ ಫಾರಿನ್ ಟ್ರಿಪ್ಪಿನಿಂದ ಭಾರತಕ್ಕೇನು ಲಾಭ? (ಹಣಕ್ಲಾಸು)

ಕಾಂಗ್ರೆಸ್‌ ಪವರ್ ಪಾಲಿಟಿಕ್ಸ್‌ಗೆ ಮತ್ತೊಂದು ಟ್ವಿಸ್ಟ್: ರಾಜ್ಯಪಾಲರ ಭೇಟಿಗೆ ಸಿದ್ದರಾಮಯ್ಯ ಸಮಯ ಕೇಳಿಲ್ಲ; ರಾಜೀನಾಮೆ ಊಹಾಪೋಹಕ್ಕೆ ಲೋಕಭವನ ಸ್ಪಷ್ಟನೆ..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

SCROLL FOR NEXT