ರಾಮನಾಥ ಕೋವಿಂದ್ 
ದೇಶ

ಸಾಂವಿಧಾನಿಕ ವ್ಯವಸ್ಥೆಯಲ್ಲಿ ರಾಜ್ಯಪಾಲರು ಪ್ರಮುಖ ಪಾತ್ರ ವಹಿಸುತ್ತಾರೆ: ರಾಮನಾಥ್ ಕೋವಿಂದ್

ಸಾಂವಿಧಾನಿಕ ವ್ಯವಸ್ಥೆಯಲ್ಲಿ ರಾಜ್ಯಪಾಲರು ‘ಪ್ರಮುಖ ಪಾತ್ರ’ ವಹಿಸುತ್ತಾರೆ ಎಂದಿರುವ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್, ಅಭಿವೃದ್ಧಿಯಲ್ಲಿ ಹಿಂದೆ ಉಳಿದಿರುವ  ಜನರ ಜೀವನವನ್ನು ಸುಧಾರಿಸಲು ರಾಜ್ಯಪಾಲರು ಸರಿಯಾದ ಮಾರ್ಗದರ್ಶನ ನೀಡುವ ಅವಕಾಶ ಹೊಂದಿದ್ದಾರೆ ಎಂದು ಹೇಳಿದ್ದಾರೆ.

ನವದೆಹಲಿ: ಸಾಂವಿಧಾನಿಕ ವ್ಯವಸ್ಥೆಯಲ್ಲಿ ರಾಜ್ಯಪಾಲರು ‘ಪ್ರಮುಖ ಪಾತ್ರ’ ವಹಿಸುತ್ತಾರೆ ಎಂದಿರುವ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್, ಅಭಿವೃದ್ಧಿಯಲ್ಲಿ ಹಿಂದೆ ಉಳಿದಿರುವ  ಜನರ ಜೀವನವನ್ನು ಸುಧಾರಿಸಲು ರಾಜ್ಯಪಾಲರು ಸರಿಯಾದ ಮಾರ್ಗದರ್ಶನ ನೀಡುವ ಅವಕಾಶ ಹೊಂದಿದ್ದಾರೆ ಎಂದು ಹೇಳಿದ್ದಾರೆ.

ಶನಿವಾರ ರಾಷ್ಟ್ರಪತಿ ಭವನದಲ್ಲಿ ಆಯೋಜಿಸಲಾಗಿದ್ದ ರಾಜ್ಯಪಾಲರು ಮತ್ತು ಲೆಫ್ಟಿನೆಂಟ್ ಗವರ್ನರ್‌ಗಳ ಎರಡು ದಿನಗಳ ಸಮ್ಮೇಳನದ ಆರಂಭಿಕ ಭಾಷಣದಲ್ಲಿ ಅವರು,  ಬುಡಕಟ್ಟು ಜನಾಂಗದವರ ಅಭಿವೃದ್ಧಿ ಮತ್ತು ಸಬಲೀಕರಣವು ಎಲ್ಲರನ್ನೂ ಒಳಗೊಳ್ಳುವಿಕೆಯ ಪ್ರಗತಿ ಮತ್ತು ಆಂತರಿಕ ಭದ್ರತೆಗೆ ಸಂಬಂಧಿಸಿದೆ. ಅಭಿವೃದ್ದಿಯಲ್ಲಿ ಹಿಂದುಳಿದಿರುವ ಜನರ ಜೀವನ ಸುಧಾರಣೆಗಾಗಿ ತಮಗೆ ನೀಡಿರುವ ಸಾಂವಿಧಾನಿಕ ಅಧಿಕಾರಗಳನ್ನು ಬಳಸಿಕೊಂಡು ರಾಜ್ಯಪಾಲರು  ಸರಿಯಾದ ಎಲ್ಲ ಮಾರ್ಗದರ್ಶನ ನೀಡಬಹುದು ಎಂದು ಅವರು ಹೇಳಿದ್ದಾರೆ.

‘ದೇಶದ ಅಭಿವೃದ್ಧಿ ಹಿತದೃಷ್ಟಿಯಿಂದ ನಾವು ಆರೋಗ್ಯಕರ ಒಕ್ಕೂಟ ವ್ಯವಸ್ಥೆಗೆ ಒತ್ತು ನೀಡುತ್ತಿರುವಾಗ ರಾಜ್ಯಪಾಲರ ಪಾತ್ರ ಹೆಚ್ಚು ಮಹತ್ವದ್ದಾಗಿದೆ. ಎಲ್ಲ ರಾಜ್ಯಪಾಲರು ಸಾರ್ವಜನಿಕ ಜೀವನದ ಅಪಾರ ಅನುಭವವನ್ನು ಹೊಂದಿದ್ದಾರೆ. ಈ ಅನುಭವದ ಗರಿಷ್ಠ ಲಾಭವನ್ನು ದೇಶದ ಜನರು ಪಡೆಯಬೇಕು.

ರಾಜ್ಯಪಾಲರ ಪಾತ್ರವು ಸಂವಿಧಾನದ ರಕ್ಷಣೆಗೆ ಮಾತ್ರ ಸೀಮಿತವಾಗಿಲ್ಲ . ತಮ್ಮ ರಾಜ್ಯಗಳ ಜನರ ಸೇವೆ ಮತ್ತು ಕಲ್ಯಾಣದಲ್ಲಿ ನಿರಂತರವಾಗಿ ತೊಡಗಿಸಿಕೊಳ್ಳಲು ಸಾಂವಿಧಾನಿಕ ಬದ್ಧತೆಯನ್ನು ಹೊಂದಿದ್ದಾರೆ.’ ಎಂದು ರಾಷ್ಟ್ರಪತಿ ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

SCROLL FOR NEXT