ಶರದ್ ಪವಾರ್-ನರೇಂದ್ರ ಮೋದಿ-ಅಮಿತ್ ಶಾ 
ದೇಶ

ಪ್ರಧಾನಿ ಮೋದಿ - ಅಮಿತ್ ಶಾ ಹೆಣೆದ ಸೂತ್ರಕ್ಕೆ ಶರದ್ ಪವಾರ್ ಪಂಕ್ಚರ್ ಆಗಿದ್ದೇಗೆ?

ಮಹಾರಾಷ್ಟ್ರ ರಾಜಕೀಯಲದಲ್ಲಿ ಹೊಸ ಮತ್ತು ಅನಿರೀಕ್ಷಿತ ಬೆಳವಣಿಗೆಗೆ ನಡೆದಿದ್ದು ಇದರ ಹಿಂದೆ ಬಿಜೆಪಿ ಹೈಕಮಾಂಡ್ ನ ಕಾಣದ ಕೈಗಳು ಬಹಳ ಸೈಲೆಂಟ್ ಆಗಿ ಕೆಲಸ ಮಾಡಿ ಮುಗಿಸಿದೆ.

ನವದೆಹಲಿ: ಮಹಾರಾಷ್ಟ್ರ ರಾಜಕೀಯಲದಲ್ಲಿ ಹೊಸ ಮತ್ತು ಅನಿರೀಕ್ಷಿತ ಬೆಳವಣಿಗೆಗೆ ನಡೆದಿದ್ದು ಇದರ ಹಿಂದೆ ಬಿಜೆಪಿ ಹೈಕಮಾಂಡ್ ನ ಕಾಣದ ಕೈಗಳು ಬಹಳ ಸೈಲೆಂಟ್ ಆಗಿ ಕೆಲಸ ಮಾಡಿ ಮುಗಿಸಿದೆ. 

ಮೊನ್ನೆಯಷ್ಟೆ ಉದ್ದವ ಠಾಕ್ರೆ ಮುಂದಿನ ಮುಂದಿನ ಮುಖ್ಯಮಂತ್ರಿ ಎಂದು ಹೇಳಿದ್ದ ಶರದ್ ಪವಾರ್ ಕೊನೆಯಲ್ಲಿ ನಿಲುವು ಬದಲಿಸಲು ಕಾರಣವೇನು? ಇದರ ಹಿಂದಿನ  ಶಕ್ತಿ ಯಾರು? ಎಂಬ ಚರ್ಚೆಗಳು ನಡೆಯುತ್ತಿವೆ . 

ಇದರ ಹಿಂದೆ ಪ್ರಧಾನಿ ಮೋದಿ ಮತ್ತು ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರ ಕಾಣದ ಕೈಗಳು ಕೆಲಸ ಮಾಡಿವೆ ಎಂಬ ಮಾತು ಕೇಳಿಬಂದಿದೆ.

ಹೌದು ರಾಜಕೀಯ ವಿಶ್ಲೇಷಕರ ಪ್ರಕಾರ, ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆ ಕಸರತ್ತು ಮುಂದುವರೆದಿತ್ತು. ಎನ್ಸಿಪಿ ಮತ್ತು ಕಾಂಗ್ರೆಸ್ ಜೊತೆ ಸೇರಿ ಶಿವಸೇನೆ ಸರ್ಕಾರ ರಚಿಸುವ ಕನಸು ಕಾಣುತ್ತಿತ್ತು. ಅಲ್ಲದೆ ಈ ಸಂಬಂಧ ಹಲವು ಮಹತ್ವದ ಚರ್ಚೆಗಳನ್ನು ಮೂರು ಪಕ್ಷಗಳು ನಡೆಸುತ್ತಿದ್ದವು. ಆದರೆ ಬಿಜೆಪಿ ಮಾತ್ರ ಯಾವುದೇ ರೀತಿಯ ಹೇಳಿಕೆಗಳನ್ನು ಕೊಡದೇ ಒಳಗೊಳಗೆ ತಾನು ಅಂದುಕೊಂಡ ಕೆಲಸವನ್ನು ನಾಜೂಕಾಗಿ ಮಾಡಿ ಮುಗಿಸಿದೆ. 

ಎನ್ಸಿಪಿ ವರಿಷ್ಠ ಶರದ್ ಪವಾರ್ ಅವರಿಗೂ ತಿಳಿಯದಂತೆ ಅವರ ಸಹೋದರನ ಪುತ್ರ ಅಜಿತ್ ಪವಾರ್ ಜೊತೆ ಬಿಜೆಪಿ ಗುಪ್ತ ಮಾತುಕತೆ ನಡೆಸಿ ಬೆಂಬಲ ಪಡೆದು ಇಂದು ದಿಢೀರ್ ಅಂತಾ ಮಹಾರಾಷ್ಟ್ರ ಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವಿಸ್ ಮತ್ತು ಉಪಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪ್ರಮಾಣವಚನ ಸ್ವೀಕರಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT