ಅಶೋಕ್ ಚವಾಣ್ 
ದೇಶ

ಮಹಾರಾಷ್ಟ್ರದಲ್ಲಿ ರೆಸಾರ್ಟ್ ರಾಜಕೀಯ: ಬಿಜೆಪಿಯಿಂದ ಶಾಸಕರ ಕುದುರೆ ವ್ಯಾಪಾರ - ಕಾಂಗ್ರೆಸ್

ಮಹಾರಾಷ್ಟ್ರದಲ್ಲಿ ಬಿಜೆಪಿ 'ಆಪರೇಷನ್ ಕಮಲ' ನಡೆಸುತ್ತಿದೆ ಎಂದು ಆರೋಪಿಸಿರುವ ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ನಾಯಕ ಅಶೋಕ್ ಚವಾಣ್ ಅವರು, ತಮ್ಮ ಪಕ್ಷದ ಶಾಸಕರನ್ನು ಖರೀದಿಸುವ....

ಮುಂಬೈ: ಮಹಾರಾಷ್ಟ್ರದಲ್ಲಿ ಬಿಜೆಪಿ 'ಆಪರೇಷನ್ ಕಮಲ' ನಡೆಸುತ್ತಿದೆ ಎಂದು ಆರೋಪಿಸಿರುವ ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ನಾಯಕ ಅಶೋಕ್ ಚವಾಣ್ ಅವರು, ತಮ್ಮ ಪಕ್ಷದ ಶಾಸಕರನ್ನು ಖರೀದಿಸುವ ಆತಂಕ ವ್ಯಕ್ತಪಡಿಸಿದ್ದಾರೆ.

ಬಿಜೆಪಿ ನಮ್ಮ ಶಾಸಕರನ್ನು ಸಂಪರ್ಕಿಸಿದೆ. ಅವರಿಗೆ ಫೋನ್ ಕಾಲ್ ಬರುತ್ತಿವೆ ಮತ್ತು ಬಿಜೆಪಿ ಜನ ನಮ್ಮ ಶಾಸಕರಿಗಾಗಿ ಹೋಟೆಲ್ ರೂಮ್ ಬುಕ್ ಮಾಡಿದ್ದಾರೆ. ಆದರೂ ನಮ್ಮ ಶಾಸಕರ ಮೇಲೆ ನಮಗೆ ವಿಶ್ವಾಸವಿದೆ ಎಂದು ಅಶೋಕ್ ಚವಾಣ್ ಹೇಳಿದ್ದಾರೆ.

ಶಾಸಕರ ಕುದುರೆ ವ್ಯಾಪಾರದ ಭಯದಿಂದ ಮಹಾರಾಷ್ಟ್ರದ ಈಗ ರೆಸಾರ್ಟ್ ರಾಜಕೀಯ ಆರಂಭವಾಗಿದ್ದು, ಕಾಂಗ್ರೆಸ್ ತನ್ನ ಶಾಸಕರನ್ನು ರಾಜಸ್ಥಾನಕ್ಕೆ ಶಿಫ್ಟ್ ಮಾಡಿದರೆ, ಎನ್ ಸಿಪಿ ಮುಂಬೈನ ರೆನೈಸನ್ಸ್ ಹೋಟೆಲ್ ಗೆ ಸ್ಥಳಾಂತರ ಮಾಡಿದೆ.

ತಮ್ಮ ಪಕ್ಷದ ಶಾಸಕರನ್ನು ಉದ್ದೇಶಿಸಿ ಮಾತನಾಡಿದ ಶಿವಸೇನಾ ಮುಖ್ಯಸ್ಥ ಉದ್ಧವ್ ಠಾಕ್ರೆ ಅವರು, ಬಿಜೆಪಿ ಹಿಂಬಾಗಿಲ ಮೂಲಕ ಅಧಿಕಾರ ಹಿಡಿದಿದ್ದು, ಈಗ ಶಾಸಕರ ಖರೀದಿಗೆ ಯತ್ನಿಸುತ್ತಿದೆ ಎಂದು ದೂರಿದ್ದಾರೆ.

ಇನ್ನು ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರು ಅತಿ ಹೆಚ್ಚು ಸಮಯ ತಮ್ಮ ಶಾಸಕರೊಂದಿಗೆ ಕಳೆಯುತ್ತಿದ್ದು, ಶಾಸಕರ ಮನಸ್ಥಿತಿ ತಿಳಿಯಲು ಯತ್ನಿಸುತ್ತಿದ್ದಾರೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT