ದೇಶ

'ಮಹಾ' ರಾಮಾಯಣ: ನಾವು 10 ನಿಮಿಷದಲ್ಲಿ ಬಹುಮತ ಸಾಬೀತುಪಡಿಸುತ್ತೇವೆ; ಶಿವಸೇನೆ ಸಂಸದ ಸಂಜಯ್ ರಾವತ್

Vishwanath S

ಮುಂಬೈ: ಮಹಾರಾಷ್ಟ್ರದಲ್ಲಿ ರಾತ್ರೋರಾತ್ರಿ ಎನ್ಸಿಪಿ ಕೆಲ ನಾಯಕರ ಜೊತೆ ಸೇರಿ ಬಿಜೆಪಿ ಸರ್ಕಾರ ರಚನೆ ಮಾಡಿದ್ದರಿಂದ ಕಂಗಾಲಾಗಿರುವ ಶಿವಸೇನೆ ಸಂಸದ ಸಂಜಯ್ ರಾವತ್ ಅವರು ನಮಗೆ ಅವಕಾಶ ಕೊಟ್ಟರೆ 10 ನಿಮಿಷದಲ್ಲಿ ಬಹುಮತ ಸಾಬೀತುಪಡಿಸುತ್ತೇವೆ ಎಂದು ಹೇಳಿದ್ದಾರೆ. 

ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಬಹುಮತ ಸಾಬೀತಿಗೆ 24 ಗಂಟೆ ತೆಗೆದುಕೊಂಡರೆ ನಾವು 10 ನಿಮಿಷದಲ್ಲಿ ಬಹುಮತ ಸಾಬೀತು ಪಡಿಸುತ್ತೇವೆ ಎಂದು ಸವಾಲು ಹಾಕಿದ್ದಾರೆ. 

ಮಹಾರಾಷ್ಟ್ರ ರಾಜ್ಯಪಾಲರು ಬಹುಮತ ಸಾಬೀತು ಪಡಿಸಲು ಬಿಜೆಪಿಗೆ ಸುದೀರ್ಘ ಸಮಯವನ್ನು(ನವೆಂಬರ್ 30) ನೀಡಲಾಗಿದೆ. ಆದರೆ ನಮಗೆ ಅವಕಾಶ ಕೊಟ್ಟರೆ ನಾವು ಹತ್ತೇ ನಿಮಿಷದಲ್ಲಿ ಸಾಬೀತುಪಡಿಸುತ್ತೇವೆ ಎಂದರು.

ದೇವೇಂದ್ರ ಫಡ್ನವಿಸ್ ಅವರಿಗೆ ಬಹುಮತವಿದ್ದರೆ ತರಾತುರಿಯಲ್ಲಿ ಸರ್ಕಾರ ರಚನೆ ಮಾಡುವ ಆತುರಯಾಕ್ಕಿತ್ತು. ಇದು ಮಹಾರಾಷ್ಟ್ರದ ಮಹಾ ಜನತೆ ಮಲಗಿದ್ದಾಗ ಪ್ರಮಾಣ ವಚನ ಸ್ವೀಕರಿಸಬೇಕಿತ್ತಾ ಎಂದು ಪ್ರಶ್ನಿಸಿದ್ದಾರೆ.

SCROLL FOR NEXT