ಬಿಜೆಪಿ ಅಭ್ಯರ್ಥಿ 
ದೇಶ

ಉಪ ಚುನಾವಣೆ ಮತದಾನ; ಬಿಜೆಪಿ ಅಭ್ಯರ್ಥಿಯನ್ನು ಹಿಗ್ಗಾಮುಗ್ಗ ಥಳಿಸಿದ ಟಿಎಂಸಿ ಕಾರ್ಯಕರ್ತರು!

ಪಶ್ಚಿಮ ಬಂಗಾಳದಲ್ಲಿ 3 ಕ್ಷೇತ್ರಗಳಿಗೆ ಉಪ ಚುನಾವಣೆ ಮತದಾನ ನಡೆಯುತ್ತಿದ್ದು ಈ ವೇಳೆ ಬಿಜೆಪಿ ಅಭ್ಯರ್ಥಿಯನ್ನು ಟಿಎಂಸಿ ಕಾರ್ಯಕರ್ತರು ಹಿಗ್ಗಾಮುಗ್ಗ ಥಳಿಸಿರುವ ದೃಶ್ಯಗಳು ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ 3 ಕ್ಷೇತ್ರಗಳಿಗೆ ಉಪ ಚುನಾವಣೆ ಮತದಾನ ನಡೆಯುತ್ತಿದ್ದು ಈ ವೇಳೆ ಬಿಜೆಪಿ ಅಭ್ಯರ್ಥಿಯನ್ನು ಟಿಎಂಸಿ ಕಾರ್ಯಕರ್ತರು ಹಿಗ್ಗಾಮುಗ್ಗ ಥಳಿಸಿರುವ ದೃಶ್ಯಗಳು ಕ್ಯಾಮೆರಾದಲ್ಲಿ ಸೆರೆಯಾಗಿದೆ. 

ಕರೀಂಪುರ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿಯಿಂದ ಜಯ್ ಪ್ರಕಾಶ್ ಮಜುಂದಾರ್ ಸ್ಪರ್ಧಿಸಿದ್ದು ಅವರನ್ನು ಟಿಎಂಸಿಯ ಕಾರ್ಯಕರ್ತರು ಥಳಿಸಿದ್ದಾರೆ. ಈ ವೇಳೆ ಅರೆ ಸೇನಾ ಪಡೆ ಬಂದು ಅವರನ್ನು ರಕ್ಷಿಸಿದ್ದಾರೆ. 

ಈ ಸಂಬಂಧ ತನಿಖೆ ನಡೆಸುವಂತೆ ಚುನಾವಣಾ ಆಯೋಗಕ್ಕೆ ಬೆಂಗಾಳದ ಬಿಜೆಪಿ ಮುಖಂಡ ಮುಕುಲ್ ರಾಯ್ ಪತ್ರ ಬರೆದಿದ್ದು ಹಲ್ಲೆ ನಡೆಸಿರುವ ಟಿಎಂಸಿ ಕಾರ್ಯಕರ್ತರ ವಿರುದ್ಧ ಕ್ರಮಕೈಗೊಳ್ಳುಂತೆ ಮನವಿ ಮಾಡಿದ್ದಾರೆ. 

ಇದಕ್ಕೆ ಪ್ರತಿಕ್ರಿಯಿಸಿರುವ ಟಿಎಂಸಿ ಮಜುಂದಾರ್ ಮತಕಟ್ಟೆಯ ಆವರಣವನ್ನು ಪ್ರವೇಶಿಸುತ್ತಿದ್ದರು ಈ ಹಿನ್ನೆಲೆಯಲ್ಲಿ ಅವರ ಮೇಲೆ ಮತದಾದರೇ ಹಲ್ಲೆ ನಡೆಸಿದ್ದಾರೆ ಎಂದು ಹೇಳಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಗೆ ರೂ.10 ಕೋಟಿ: ಸುರಂಗ ರಸ್ತೆ ಯೋಜನೆಯಿಂದ 'ಸಸ್ಯೋದ್ಯಾನ'ದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ- ಡಿಕೆ ಶಿವಕುಮಾರ್

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

Shocking: ಹೆಣ್ಣಿನ ಶವ ಎಳೆದೊಯ್ದು ಶವಾಗಾರದಲ್ಲೇ ಅತ್ಯಾಚಾರ, 25ರ ಯುವಕನಿಂದ ಪೈಶಾಚಿಕ ಕೃತ್ಯ, CCTV Video

Belagavi: ಲವರ್ ಜೊತೆ ಮಗಳು ಪರಾರಿ; ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

SCROLL FOR NEXT