ತೃಪ್ತಿ ದೇಸಾಯಿ 
ದೇಶ

ಇಂದು ಶಬರಿಮಲೆ ದೇಗುಲ ಪ್ರವೇಶಿಸಲು ಸಜ್ಜಾಗಿರುವ ತೃಪ್ತಿ ದೇಸಾಯಿ 

ಮಹಿಳಾ ಕಾರ್ಯಕರ್ತೆ ತೃಪ್ತಿ ದೇಸಾಯಿ ಮಂಗಳವಾರ ಬೆಳಗ್ಗೆ ಕೊಚ್ಚಿಗೆ ಆಗಮಿಸಿದ್ದು ಇಲ್ಲಿಂದ ಶಬರಿಮಲೆ ಅಯ್ಯಪ್ಪ ದೇವಸ್ಥಾನಕ್ಕೆ ಪ್ರವೇಶಿಸಲು ಸಜ್ಜಾಗಿ ನಿಂತಿದ್ದಾರೆ.

ಕೊಚ್ಚಿ: ಮಹಿಳಾ ಕಾರ್ಯಕರ್ತೆ ತೃಪ್ತಿ ದೇಸಾಯಿ ಮಂಗಳವಾರ ಬೆಳಗ್ಗೆ ಕೊಚ್ಚಿಗೆ ಆಗಮಿಸಿದ್ದು ಇಲ್ಲಿಂದ ಶಬರಿಮಲೆ ಅಯ್ಯಪ್ಪ ದೇವಸ್ಥಾನಕ್ಕೆ ಪ್ರವೇಶಿಸಲು ಸಜ್ಜಾಗಿ ನಿಂತಿದ್ದಾರೆ.


ಅವರ ಜೊತೆ ಇನ್ನೂ ಕೆಲವು ಮಹಿಳಾ ಕಾರ್ಯಕರ್ತರು ಇಂದು ಮುಂಜಾನೆ ಕೊಚ್ಚಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿದರು. ಅವರನ್ನು ಕೊಚ್ಚಿ ನಗರ ಪೊಲೀಸ್ ಆಯುಕ್ತರ ಬಳಿ ಕರೆದೊಯ್ಯಲಾಯಿತು.


ಇಂದು ದೇಶದ ಸಂವಿಧಾನ ದಿನವಾಗಿರುವುದರಿಂದ ಶಬರಿಮಲೆ ದೇವಸ್ಥಾನಕ್ಕೆ ಪ್ರವೇಶಿಸಲು ಇಂದಿನ ದಿನವನ್ನೇ ಆಯ್ಕೆ ಮಾಡಿಕೊಂಡಿದ್ದೇವೆ. ಎಲ್ಲಾ ವಯಸ್ಸಿನ ಮಹಿಳೆಯರು ಶಬರಿಮಲೆ ದೇಗುಲ ಪ್ರವೇಶಿಸಬಹುದು ಎಂದು ಕಳೆದ ವರ್ಷ ಸುಪ್ರೀಂ ಕೋರ್ಟ್ ಆದೇಶ ನೀಡಿರುವುದರಿಂದ ಅದರ ಪ್ರಕಾರ ಇಂದು ದೇಗುಲ ಪ್ರವೇಶಿಸುತ್ತಿದ್ದೇನೆ, ದೇವಸ್ಥಾನಕ್ಕೆ ಭೇಟಿ ನೀಡಿ ದೇವರಿಗೆ ಪೂಜೆ ಸಲ್ಲಿಸಿದ ನಂತರವಷ್ಟೇ ನಾನು ಕೇರಳ ತೊರೆಯುವುದು ಎಂದರು.


ಕಳೆದ ವರ್ಷ ತೀವ್ರ ಪ್ರತಿಭಟನೆ ನಡುವೆ ಶಬರಿಮಲೆ ಪ್ರವೇಶಿಸಿದ್ದ ಬಿಂದು ಅಮ್ಮಿನಿ ಅವರು ಕೂಡ ತೃಪ್ತಿ ದೇಸಾಯಿ ಜೊತೆಗೆ ಇರುತ್ತಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT