ಎನ್ ಸಿಪಿ, ಶಿವಸೇನಾ, ಕಾಂಗ್ರೆಸ್ ನಾಯಕರು 
ದೇಶ

ನಾಳೆ ವಿಶೇಷ ಅಧಿವೇಶನದ ಕರೆದ ಮಹಾ ರಾಜ್ಯಪಾಲ, ಮುಖ್ಯಮಂತ್ರಿಯಾಗಲು ಉದ್ಧವ್ ಸಿದ್ಧತೆ

ಬಹುಮತ ಸಾಬೀತುಪಡಿಸುವ ಮುನ್ನವೇ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರು ಮಂಗಳವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಇದರ ಬೆನ್ನಲ್ಲೇ ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ಅವರು...

ಮುಂಬೈ: ಬಹುಮತ ಸಾಬೀತುಪಡಿಸುವ ಮುನ್ನವೇ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರು ಮಂಗಳವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಇದರ ಬೆನ್ನಲ್ಲೇ ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ಅವರು ಬುಧವಾರ ವಿಶೇಷ ಅಧಿವೇಶನ ಕರೆದಿದ್ದು, ಶಿವಸೇನಾ ಮುಖ್ಯಸ್ಥ ಉದ್ಧವ್ ಠಾಕ್ರೆ ಅವರು ಮಹಾ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳಲು ಭರ್ಜರಿ ಸಿದ್ಧತೆ ನಡೆಸಿದ್ದಾರೆ.

ಭಗತ್ ಸಿಂಗ್ ಕೋಶ್ಯಾರಿ ಅವರು ನಾಳೆ ಬೆಳಗ್ಗೆ 8 ಗಂಟೆಗೆ ವಿಧಾನಸಭಾ ವಿಶೇಷ ಅಧಿವೇಶನ ಕರೆದಿದ್ದು, ಹೊಸದಾಗಿ ವಿಧಾನಸಭೆ ಆಯ್ಕೆಯಾದ ಎಲ್ಲಾ 288 ಸದಸ್ಯರು ಶಾಸಕರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಶಾಸಕರಿಗೆ ಪ್ರಮಾಣವಚನ ಬೋಧಿಸುವುದಕ್ಕಾಗಿ ಬಿಜೆಪಿ ಶಾಸಕ ಕಾಳಿದಾಸ್ ಕೊಲಂಬಕರ್ ಅವರನ್ನು ಹಂಗಾಮಿ ಸ್ಪೀಕರ್ ಆಗಿ ರಾಜ್ಯಪಾಲರು ನೇಮಕ ಮಾಡಿದ್ದಾರೆ.

ಬಹುಮತ ಸಾಬೀತು ಪಡಿಸಲು ಸಾಕಷ್ಟು ಸರ್ಕಸ್​ ಮಾಡಿದ ಬಿಜೆಪಿ ಕೊನೆಗೂ ಸೋಲೊಪ್ಪಿಕೊಂಡಿದ್ದು, ಮುಖ್ಯಮಂತ್ರಿಯಾಗಿ ಮೂರೇ ದಿನಕ್ಕೆ ರಾಜೀನಾಮೆ ನೀಡಿದ್ದಾರೆ. ಫಡ್ನವಿಸ್ ರಾಜಿನಾಮೆ ನಂತರ ಶಿವಸೇನಾ, ಕಾಂಗ್ರೆಸ್ ಹಾಗೂ ಎನ್ ಸಿಪಿ ನಾಯಕರು ಸರ್ಕಾರ ರಚಿಸಲು ಮುಂದಾಗಿದ್ದು, ರಾಜ್ಯಪಾಲರ ಆಹ್ವಾನಕ್ಕಾಗಿ ಕಾಯುತ್ತಿದ್ದಾರೆ.

ಈ ಮಧ್ಯೆ ಮೂರು ಪಕ್ಷಗಳು ಇಂದು ರಾತ್ರಿ ಖಾಸಗಿ ಹೋಟೆಲ್ ನಲ್ಲಿ ಸಭೆ ಕರೆದಿದ್ದು, ಉದ್ಧವ್ ಠಾಕ್ರೆಯನ್ನು ಮುಖ್ಯಮಂತ್ರಿಯಾಗಿ ನೇಮಕ ಮಾಡುವ ಸಾಧ್ಯತೆ ಇದೆ.

ಇಂದು ರಾತ್ರಿಯೇ ರಾಜ್ಯಪಾಲರು ಸರ್ಕಾರ ರಚಿಸುವಂತೆ ಆಹ್ವಾನ ನೀಡುವ ಸಾಧ್ಯತೆ ಇದ್ದು, ನಾಳೆ ಶಿವಾಜಿ ಪಾರ್ಕ್ ನಲ್ಲಿ ಉದ್ಧವ್ ಠಾಕ್ರೆ ಮೊದಲ ಬಾರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ಇದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

SCROLL FOR NEXT