ಅಜಿತ್ ಪವಾರ್ 
ದೇಶ

ನೀರಾವರಿ ಹಗರಣದಿಂದ ಅಜಿತ್ ಪವಾರ್ ಗೆ ಕ್ಲೀನ್ ಚಿಟ್: ಸುಪ್ರೀಂ ಮೆಟ್ಟಿಲೇರಲು ಶಿವಸೇನೆ-ಎನ್ ಸಿಪಿ-ಕಾಂಗ್ರೆಸ್ ನಿರ್ಧಾರ 

ದೇವೇಂದ್ರ ಫಡ್ನವೀಸ್ ಜೊತೆ ಎನ್ ಸಿಪಿಯ ನಾಯಕ ಅಜಿತ್ ಪವಾರ್ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿ ಬಿಜೆಪಿಗೆ ಸರ್ಕಾರ ರಚನೆ ಮಾಡಲು ಸಹಕರಿಸಿದ್ದ ಬೆನ್ನಲ್ಲೇ ಮಹಾರಾಷ್ಟ್ರದಲ್ಲಿ ಅಜಿತ್ ಪವಾರ್ ಮುಖ್ಯ ಆರೋಪಿಯಾಗಿದ್ದ 70,000 ಕೋಟಿ ರೂಪಾಯಿ ಮೊತ್ತದ ನೀರಾವರಿ ಹಗರಣ ಕೇಸನ್ನು ಇತ್ಯರ್ಥಗೊಳಿಸಿರುವುದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೊರೆ ಹೋಗಲು ಶಿವಸೇನೆ, 

ಮುಂಬೈ: ದೇವೇಂದ್ರ ಫಡ್ನವೀಸ್ ಜೊತೆ ಎನ್ ಸಿಪಿಯ ನಾಯಕ ಅಜಿತ್ ಪವಾರ್ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿ ಬಿಜೆಪಿಗೆ ಸರ್ಕಾರ ರಚನೆ ಮಾಡಲು ಸಹಕರಿಸಿದ್ದ ಬೆನ್ನಲ್ಲೇ ಮಹಾರಾಷ್ಟ್ರದಲ್ಲಿ ಅಜಿತ್ ಪವಾರ್ ಮುಖ್ಯ ಆರೋಪಿಯಾಗಿದ್ದ 70,000 ಕೋಟಿ ರೂಪಾಯಿ ಮೊತ್ತದ ನೀರಾವರಿ ಹಗರಣ ಕೇಲನ್ನು ಇತ್ಯರ್ಥಗೊಳಿಸಿರುವುದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೊರೆ ಹೋಗಲು ಶಿವಸೇನೆ, ಕಾಂಗ್ರೆಸ್ ಮತ್ತು ಎನ್ ಸಿಪಿ ತೀರ್ಮಾನಿಸಿವೆ.


ನೀರಾವರಿ ಹಗರಣದಿಂದ ಮುಕ್ತಗೊಳಿಸಿ ಅಜಿತ್ ಪವಾರ್ ಗೆ ಕ್ಲೀನ್ ಚಿಟ್ ನೀಡಲಾಗಿದ್ದು ಅವರ ಅಕ್ರಮವನ್ನು ಮುಚ್ಚಿಹಾಕುವ ಯತ್ನವಿದು ಎಂದು ಮೂರೂ ಪಕ್ಷಗಳು ಆರೋಪಿಸಿವೆ.


ಸುಪ್ರೀಂ ಕೋರ್ಟ್ ನಲ್ಲಿ ಕೇಸು ಹಾಕಲು ಸಜ್ಜಾಗಿರುವ ಪಕ್ಷಗಳು ಅಜಿತ್ ಪವಾರ್ ವಿರುದ್ಧ ಕೈಬಿಟ್ಟಿರುವ ಎಸಿಬಿ ಆದೇಶಕ್ಕೆ ತಡೆಯೊಡ್ಡಬೇಕೆಂದು ಮತ್ತು ಸದನದಲ್ಲಿ ಬಹುಮತ ಸಾಬೀತು ಆಗುವವರೆಗೆ ದೇವೇಂದ್ರ ಫಡ್ನವಿಸ್ ಇಂತಹ ಯಾವುದೇ ನಿರ್ಧಾರ ತೆಗೆದುಕೊಳ್ಳದಂತೆ ತಡೆ ತರಬೇಕೆಂದು ಸಹ ಅರ್ಜಿಯಲ್ಲಿ ಒತ್ತಾಯಿಸಲಿವೆ.


ಇಂದು ಬೆಳಗ್ಗೆ ಮಹಾ ಸರ್ಕಾರದ ತೀರ್ಪನ್ನು ಸುಪ್ರೀಂ ಕೋರ್ಟ್ ಪ್ರಕಟಿಸಿದ ನಂತರ ಶಿವಸೇನೆ-ಎನ್ ಸಿಪಿ-ಕಾಂಗ್ರೆಸ್ ಈ ಅರ್ಜಿಯನ್ನು ಸುಪ್ರೀಂ ಕೋರ್ಟ್ ಗೆ ಸಲ್ಲಿಸಲು ನಿರ್ಧರಿಸಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

SCROLL FOR NEXT