ಬಾಳಾಸಾಹೇಬ್ ಥೋರತ್ 
ದೇಶ

ಮೂರೂ ಪಕ್ಷಗಳು ಇನ್ನೆರಡು ದಿನಗಳಲ್ಲಿ ಖಾತೆ ಹಂಚಿಕೆ ನಿರ್ಧರಿಸಲಿವೆ: ಕಾಂಗ್ರೆಸ್ ಮುಖ್ಯಸ್ಥ ಬಾಳಾಸಾಹೇಬ್ ಥೋರತ್

ಶಿವಸೇನೆ, ಎನ್ ಸಿಪಿ ಮತ್ತು ಕಾಂಗ್ರೆಸ್ ನಡುವೆ ಖಾತೆ ಹಂಚಿಕೆ ಇನ್ನು ಎರಡು ದಿನಗಳಲ್ಲಿ ತೀರ್ಮಾನವಾಗಲಿದೆ ಎಂದು ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ಬಾಳಾ ಸಾಹೇಬ್ ಥೋರತ್ ತಿಳಿಸಿದ್ದಾರೆ. 

ಮುಂಬೈ: ಶಿವಸೇನೆ, ಎನ್ ಸಿಪಿ ಮತ್ತು ಕಾಂಗ್ರೆಸ್ ನಡುವೆ ಖಾತೆ ಹಂಚಿಕೆ ಇನ್ನು ಎರಡು ದಿನಗಳಲ್ಲಿ ತೀರ್ಮಾನವಾಗಲಿದೆ ಎಂದು ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ಬಾಳಾ ಸಾಹೇಬ್ ಥೋರತ್ ತಿಳಿಸಿದ್ದಾರೆ.


ಮೂರೂ ಮೈತ್ರಿಕೂಟಗಳನ್ನು ಒಟ್ಟಾಗಿ ಮಹಾರಾಷ್ಟ್ರ ವಿಕಾಸ್ ಅಘಾಡಿ ಎಂದು ಕರೆಯಲಾಗುತ್ತಿದ್ದು ಇವುಗಳು ಸಣ್ಣ ಪಕ್ಷಗಳು ಮತ್ತು ಸ್ವತಂತ್ರ ಶಾಸಕರ ಸಹಾಯದಿಂದ ನಾಳೆ ಸರ್ಕಾರ ರಚಿಸಲಿದ್ದಾರೆ.


ಇಂದು ಶಾಸಕರ ಪ್ರಮಾಣವಚನ ಬಳಿಕ ಮುಂಬೈಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇನ್ನೆರಡು ದಿನಗಳಲ್ಲಿ ಯಾವ ಪಕ್ಷಗಳಿಗೆ ಎಷ್ಟು ಖಾತೆ ಎಂದು ಅಂತಿಮಗೊಳಿಸಲಾಗುವುದು. ಸಂಪುಟ ದರ್ಜೆ ಮತ್ತು ರಾಜ್ಯ ಸಚಿವ ಹುದ್ದೆಗಳನ್ನು ಪ್ರತಿ ಪಕ್ಷಗಳಿಗೆ ನೀಡಲಾಗುತ್ತದೆ ಎಂದರು.


ಶಿವಸೇನೆಯ ಮುಖ್ಯಸ್ಥ ಉದ್ಧವ್ ಠಾಕ್ರೆ ಮುಂದಿನ ಮುಖ್ಯಮಂತ್ರಿಯಾಗಲಿದ್ದು, ನಾಳೆ ಸಂಜೆ ದಾದಾರ್ ನಲ್ಲಿರುವ ಶಿವಾಜಿ ಪಾರ್ಕ್ ನಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಈ ಸಮಾರಂಭಕ್ಕೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅಥವಾ ರಾಹುಲ್ ಗಾಂಧಿ ಭಾಗವಹಿಸುವುದು ಇನ್ನೂ ನಿರ್ಧಾರವಾಗಿಲ್ಲ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

Video: 80 ಸಾವಿರ ಹಣವಿದ್ದ ಬ್ಯಾಗ್ ನಾಪತ್ತೆ, ಮೇಲಿಂದ ಕೋತಿಯಿಂದ ಹಣದ ಸುರಿಮಳೆ! ಸಿಕ್ಕಿದೆಷ್ಟು ಗೊತ್ತಾ?

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ; Indian Army ಹೆಲಿಕಾಪ್ಟರ್ ರೋಚಕ ಕಾರ್ಯಾಚರಣೆ! Video

SCROLL FOR NEXT