ಚಿದಂಬರಂ 
ದೇಶ

ಸುಪ್ರೀಂಕೋರ್ಟ್ ನಲ್ಲಿ ಚಿದಂಬರಂ ಜಾಮೀನಿಗೆ ವಿರೋಧ ವ್ಯಕ್ತಪಡಿಸಿದ ಇಡಿ

ಐಎನ್ಎಕ್ಸ್ ಮೀಡಿಯಾ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಕೇಂದ್ರದ ಮಾಜಿ ಸಚಿವ ಮತ್ತು ಕಾಂಗ್ರೆಸ್ ಹಿರಿಯ ನಾಯಕ ಪಿ ಚಿದಂಬರಂ ಅವರಿಗೆ ಜಾಮೀನು ನೀಡದಂತೆ ಸುಪ್ರೀಂಕೋರ್ಟ್ ಗೆ ಇಡಿ ಅಧಿಕಾರಿಗಳು ಮನವಿ ಮಾಡಿಕೊಂಡಿದ್ದಾರೆ.

ನವದೆಹಲಿ: ಐಎನ್ಎಕ್ಸ್ ಮೀಡಿಯಾ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಕೇಂದ್ರದ ಮಾಜಿ ಸಚಿವ ಮತ್ತು ಕಾಂಗ್ರೆಸ್ ಹಿರಿಯ ನಾಯಕ ಪಿ ಚಿದಂಬರಂ ಅವರಿಗೆ ಜಾಮೀನು ನೀಡದಂತೆ ಸುಪ್ರೀಂಕೋರ್ಟ್ ಗೆ ಇಡಿ ಅಧಿಕಾರಿಗಳು ಮನವಿ ಮಾಡಿಕೊಂಡಿದ್ದಾರೆ.

ಕೇಂದ್ರ ಮಾಜಿ ಸಚಿವ ಪಿ. ಚಿದಂಬರಂಗೆ ಜಾಮೀನು ನೀಡಬಾರದು. ಅವರಿಗೆ ಜಾಮೀನು ಕೊಟ್ಟರೆ ಸಾಕ್ಷ್ಯಾಧಾರಗಳು ನಾಶವಾಗುವ ಆತಂಕ ಇದೆ ಎಂದು ಇಡಿ ಅಧಿಕಾರಿಗಳು ವಿರೋಧ ವ್ಯಕ್ತಪಡಿಸಿದ್ದಾರೆ.

ಪ್ರಕರಣದ ವಿಚಾರಣೆಯನ್ನು ನ್ಯಾಯಮೂರ್ತಿ ಆರ್. ಭಾನುಮತಿ ನೇತೃತ್ವದ ಪೀಠ ನಡೆಸುತ್ತಿದೆ.

ಇಂದು ಪೀಠದ ಮುಂದೆ ಇಡಿ ಪರ ಸಾಲಿಸಿಟಿರ್ ಜನರಲ್ ತುಷಾರ್ ಮೆಹ್ತಾ ಹಾಜರಾಗಿ, ಜೈಲಿನಿಂದಲೇ ಚಿದಂಬರಂ ಪ್ರಕರಣಗಳ ಸಾಕ್ಷಿಗಳ ನಾಶಕ್ಕೆ ಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದರು.

ಒಂದು ವೇಳೆ ಜಾಮೀನು ದೊರಕಿ, ಜೈಲಿನಿಂದ ಹೊರಗೆ ಬಂದರೆ ಅವರು ಸಾಕ್ಷಿಗಳ ಮೇಲೆ ತಮ್ಮದೇ ಆದ ಪ್ರಭಾವ ಬೀರಲಿದ್ದಾರೆ ಎಂದು ವಾದ ಮಾಡಿ, ಜಾಮೀನು ನೀಡಬಾರದು ಎಂದು ಮನವಿ ಮಾಡಿದರು.

ಅಕ್ರಮ ಹಣಕಾಸು ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್ ಚಿದಂಬರಂ ಅವರ ಜಾಮೀನು ಮನವಿಯನ್ನು ತಿರಸ್ಕರಿಸಿದ್ದು, ಸುಪ್ರೀಂ ಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT