ದೇಶ

ಆಕೆ ತಂಗಿಗೆ ಕರೆ ಮಾಡುವ ಬದಲು ಪೊಲೀಸರಿಗೆ ಕರೆ ಮಾಡಬೇಕಿತ್ತು: ಅತ್ಯಾಚಾರ ಪ್ರಕರಣದ ಬಗ್ಗೆ ತೆಲಂಗಾಣ ಗೃಹ ಸಚಿವ 

Srinivas Rao BV

ತೆಲಂಗಾಣದಲ್ಲಿ ಪಶುವೈದ್ಯೆಯ ಮೇಲೆ ಅತ್ಯಾಚಾರವೆಸಗಿ ಆಕೆಯನ್ನು ಸುಟ್ಟು ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಲಂಗಾಣ ಗೃಹ ಸಚಿವರು ನೀಡಿರುವ ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದೆ. 

ಅತ್ಯಾಚಾರ ಘಟನೆ ನಡೆಯುವುದಕ್ಕೂ ಮುನ್ನ ಪ್ರಿಯಾಂಕ ರೆಡ್ಡಿ ತಾನು ಇರುವ ಸ್ಥಳದಲ್ಲಿ ವ್ಯಕ್ತಿಗಳು ಅನುಮಾನಾಸ್ಪದರಾಗಿದ್ದಾರೆ ಎಂದು ತನ್ನ ತಂಗಿಗೆ ಕರೆ ಮಾಡಿದ್ದರು. ಇದೇ ಅಂಶದ ಬಗ್ಗೆ ತೆಲಂಗಾಣ ಗೃಹ ಸಚಿವ ಮುಹಮ್ಮದ್ ಮಹಮೂದ್ ಅಲಿ ಮಾತನಾಡಿದ್ದು, ಸಂತ್ರಸ್ತ, ಮೃತ ಯುವತಿ ತನ್ನ ತಂಗಿಗೆ ಕರೆ ಮಾಡುವ ಬದಲು ಪೊಲೀಸರಿಗೆ ಕರೆ ಮಾಡಿದ್ದರೆ ಅಪಾಯದಿಂದ ಪಾರಾಗಬಹುದಿತ್ತು. ಈ ಅನಾಹುತ ಸಂಭವಿಸುತ್ತಿರಲಿಲ್ಲ ಎಂದು ಹೇಳಿದ್ದಾರೆ. ಹತ್ಯೆಯಾಗಿರುವ ಪ್ರಿಯಾಂಕ ರೆಡ್ಡಿ ಸುಶಿಕ್ಷಿತೆಯಾಗಿದ್ದು, ಅಪಾಯದ ಸುಳಿವು ಸಿಕ್ಕ ಬೆನ್ನಲ್ಲೇ 100 ಕ್ಕೆ ಕರೆ ಮಾಡುವ ಬದಲು ಆಕೆ ತನ್ನ ತಂಗಿಗೆ ಕರೆ ಮಾಡಿದ್ದು ದುರದೃಷ್ಟಕರ ಎಂದು ಹೇಳಿದ್ದಾರೆ.

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿರುವ ಘಟನೆಯ ಬಗ್ಗೆ ತೆಲಂಗಾಣ ಸಚಿವರು ಬೇಜವಾಬ್ದಾರಿ ಹೇಳಿಕೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

SCROLL FOR NEXT