ಗೋಟಬಯ ರಾಜಪಕ್ಸೆ - ನರೇಂದ್ರ ಮೋದಿ 
ದೇಶ

ಭಯೋತ್ಪಾದನೆ ವಿರುದ್ಧದ ಹೋರಾಟಕ್ಕೆ ಭಾರತದಿಂದ ಶ್ರೀಲಂಕಾಕ್ಕೆ 50 ಮಿಲಿಯನ್ ಡಾಲರ್ ನೆರವು

ಭಾರತ ಪ್ರವಾಸದಲ್ಲಿರುವ ಶ್ರೀಲಂಕಾ ಅಧ್ಯಕ್ಷ ಗೋಟಬಯ ರಾಜಪಕ್ಸೆ ಅವರೊಂದಿಗೆ ನಡೆದ ದ್ವಿಪಕ್ಷೀಯ ಮಾತುಕತೆಯ ಕೊನೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಭಯೋತ್ಪಾದನೆ ವಿರುದ್ಧದ ಹೋರಾಟಕ್ಕೆ....

ನವದೆಹಲಿ: ಭಾರತ ಪ್ರವಾಸದಲ್ಲಿರುವ ಶ್ರೀಲಂಕಾ ಅಧ್ಯಕ್ಷ ಗೋಟಬಯ ರಾಜಪಕ್ಸೆ ಅವರೊಂದಿಗೆ ನಡೆದ ದ್ವಿಪಕ್ಷೀಯ ಮಾತುಕತೆಯ ಕೊನೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಭಯೋತ್ಪಾದನೆ ವಿರುದ್ಧದ ಹೋರಾಟಕ್ಕೆ 50 ಮಿಲಿಯನ್ ಅಮೆರಿಕನ್ ಡಾಲರ್ ಸೇರಿದಂತೆ ಒಟ್ಟು 450 ಅಮೆರಿಕನ್ ಡಾಲರ್ ನೆರವನ್ನು ಶ್ರೀಲಂಕಾಕ್ಕೆ ಘೋಷಿಸಿದ್ದಾರೆ.

ಪರಸ್ಪರ ಭದ್ರತೆಗಾಗಿ ಮತ್ತು ಭಯೋತ್ಪಾದಕ ಭೀತಿಯ ವಿರುದ್ಧ ದೃಢವಾದ ಕ್ರಮಗಳನ್ನು ತೆಗೆದುಕೊಳ್ಳಲು ನಾನು ಅಧ್ಯಕ್ಷ ರಾಜಪಕ್ಸೆ ಅವರೊಂದಿಗೆ ವಿವರವಾದ ಮಾತುಕತೆ ನಡೆಸಿದ್ದೇನೆ. ಶ್ರೀಲಂಕಾದ ಪೊಲೀಸರು ಮತ್ತು ಭದ್ರತಾ ಸಿಬ್ಬಂದಿಗಳು ಭಯೋತ್ಪಾದನೆ ನಿಗ್ರಹಕ್ಕೆ ಸಂಬಂಧಿಸಿ ಭಾರತದ ವಿವಿಧ ಸಂಸ್ಥೆಗಳಲ್ಲಿ ತರಬೇತಿ ಪಡೆಯುತ್ತಿದ್ದಾರೆ ಎಂದು ಪ್ರಧಾನಿ ಮೋದಿ ಹೇಳಿದರು.

ಶಾಂತಿಯುತ ಮತ್ತು ಸಮೃದ್ಧವಾದ ಶ್ರೀಲಂಕಾವನ್ನು ಭಾರತ ಬಯಸುತ್ತದೆ. ಏಕೆಂದರೆ ಇದು ಇಡೀ ಹಿಂದೂ ಮಹಾಸಾಗರ ಪ್ರದೇಶದಲ್ಲಿ ಶಾಂತಿಯನ್ನು ಖಾತರಿಪಡಿಸುತ್ತದೆ ಎಂದು ಮೋದಿ ತಿಳಿಸಿದರು.

ಪ್ರಧಾನಿ ಮೋದಿಯವರೊಂದಿಗೆ ಮಾತುಕತೆ ನಡೆಸಿದ ನಂತರ ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದ ಗೊಟಬಯ ರಾಜಪಕ್ಸೆ, "ಪ್ರಧಾನಿ ನರೇಂದ್ರ ಮೋದಿ ಮತ್ತು ನಾನು ಇಂದು ಬೆಳಿಗ್ಗೆ ಹಲವಾರು ಪ್ರಮುಖ ವಿಷಯಗಳ ಬಗ್ಗೆ ಚರ್ಚಿಸಿದ್ದೇವೆ. ಚರ್ಚೆಯು ಅತ್ಯಂತ ಸೌಹಾರ್ದಯುತ ಮತ್ತು ಧೈರ್ಯ ತುಂಬುವಂತಿತ್ತು. ಇವುಗಳಲ್ಲಿ ಉಭಯ ದೇಶಗಳ ಸುರಕ್ಷತೆಗೆ ಸಂಬಂಧಿಸಿದಂತೆ ಸಹಕಾರಕ್ಕೆ ಹೆಚ್ಚಿನ ಆದ್ಯತೆ ನೀಡಬೇಕೆಂದು ನಿರ್ಧರಿಸಿರುವುದಾಗಿ" ತಿಳಿಸಿದರು.

"ನಾವು ಮೀನುಗಾರರ ಸಮಸ್ಯೆಯನ್ನು ದೀರ್ಘವಾಗಿ ಚರ್ಚಿಸಿದ್ದೇವೆ. ನಮ್ಮ ವಶದಲ್ಲಿರುವ ಭಾರತಕ್ಕೆ ಸೇರಿದ ದೋಣಿಗಳನ್ನು ಬಿಡುಗಡೆ ಮಾಡಲು ಕ್ರಮ ಕೈಗೊಳ್ಳುತ್ತೇವೆ" ಎಂದು ಅವರು ಭರವಸೆ ನೀಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

SCROLL FOR NEXT