ಸಂಗ್ರಹ ಚಿತ್ರ 
ದೇಶ

ಜಾರ್ಖಂಡ್ ಚುನಾವಣೆ: ಸೇತುವೆ ಸ್ಪೋಟಿಸಿದ ನಕ್ಸಲರು, ಮತದಾನಕ್ಕೆ ಅಡ್ಡಿ ಇಲ್ಲ ಎಂದ ಅಧಿಕಾರಿಗಳು!

ಜಾರ್ಖಂಡ್ ವಿಧಾನಸಭೆ ಚುನಾವಣೆಯ ಮೊದಲ ಹಂತದ ಮತದಾನ ನಡೆಯುತ್ತಿರುವಂತೆಯೇ ಅತ್ತ ಚುನಾವಣೆ ಬಹಿಷ್ಕರಿಸಿರುವ ನಕ್ಸಲೀಯರು ಸೇತುವೆಯೊಂದನ್ನು ಸ್ಫೋಟಿಸಿ ಎಚ್ಚರಿಕೆ ನೀಡಿದ್ದಾರೆ.

ರಾಂಚಿ: ಜಾರ್ಖಂಡ್ ವಿಧಾನಸಭೆ ಚುನಾವಣೆಯ ಮೊದಲ ಹಂತದ ಮತದಾನ ನಡೆಯುತ್ತಿರುವಂತೆಯೇ ಅತ್ತ ಚುನಾವಣೆ ಬಹಿಷ್ಕರಿಸಿರುವ ನಕ್ಸಲೀಯರು ಸೇತುವೆಯೊಂದನ್ನು ಸ್ಫೋಟಿಸಿ ಎಚ್ಚರಿಕೆ ನೀಡಿದ್ದಾರೆ.

ಹೌದು.. ಜಾರ್ಖಂಡ್ ನ ಒಟ್ಟು 13 ವಿಧಾನಸಭಾ ಕ್ಷೇತ್ರಗಳಲ್ಲಿ ಇಂದು ಮೊದಲ ಹಂತದ ಮತದಾನ ನಡೆಯುತ್ತಿದ್ದು, ಬೆಳಗ್ಗೆ 7 ಗಂಟೆಯಿಂದಲೇ ಮತದಾರರು ಸಾಲುಗಟ್ಟಿ ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ. ಏತನ್ಮಧ್ಯೆ ಮತದಾನ ಬಹಿಷ್ಕರಿಸುವಂತೆ ಎಚ್ಚರಿಕೆ ನೀಡಿದ್ದ ನಕ್ಸಲೀಯರು ಮತದಾನಕ್ಕೆ ಅಡ್ಡಿಪಡಿಸಲೆಂದು ಸೇತುವೆಯೊಂದನ್ನು ಸ್ಫೋಟಿಸಿದ್ದಾರೆ.

ಗುಮ್ಲಾ ಜಿಲ್ಲೆಯ ಬಿಶ್ಣುಪುರ್ ನಲ್ಲಿರುವ ಸೇತುವೆಯನ್ನು ನಕ್ಸಲರು ಸ್ಫೋಟಿಸಿದ್ದು, ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಾಪಾಯವಾಗಿಲ್ಲ. ಆದರೆ ಈ ಬಗ್ಗೆ ಸ್ಪಷ್ಟನೆ ನೀಡಿರುವ ಉಪ ಜಿಲ್ಲಾಧಿಕಾರಿ ಶಶಿ ರಂಜನ್ ಅವರು, ಸೇತುವೆ ಸ್ಫೋಟದಲ್ಲಿ ಯಾವುದೇ ರೀತಿಯ ಸಾವುನೋವು ಸಂಭವಿಸಿಲ್ಲ. ಅಂತೆಯೇ ಯಾವುದೇ ಕಾರಣಕ್ಕೂ ಮತದಾನ ಸ್ಥಗಿತವಾಗುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 30 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಡಿಕೆಶಿ RSS ಗೀತೆ ಹೇಳಿದ್ದೂ ರಾಹುಲ್‌ ಗಾಂಧಿಗೆ ತಲುಪಲಿ: ಶಾಕ್ ಕೊಟ್ಟ ಸತೀಶ್‌ ಜಾರಕಿಹೊಳಿ ಹೇಳಿಕೆ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

SCROLL FOR NEXT