ಮೃತ ವಿಜ್ಞಾನಿ ಸುರೇಶ್ 
ದೇಶ

ಹೈದರಾಬಾದ್: ಇಸ್ರೋ ವಿಜ್ಞಾನಿ ನಿಗೂಢ ಸಾವು, ಕೊಲೆ ಶಂಕೆ, ತನಿಖೆ ಆರಂಭ

ತೆಲಂಗಾಣ ರಾಜಧಾನಿ ಹೈದರಾಬಾದ್ ನಲ್ಲಿ ಭಾರತೀಯ ಬಾಹ್ಯಾಕಾಶ ಸಂಸ್ಥೆ (ಇಸ್ರೋ) ವಿಜ್ಞಾನಿ ನಿಗೂಢವಾಗಿ ಸಾವನ್ನಪ್ಪಿದ್ದು, ಕೊಲೆಯಾಗಿರುವ ಶಂಕೆ ವ್ಯಕ್ತವಾಗಿದೆ. 

ಹೈದರಾಬಾದ್: ತೆಲಂಗಾಣ ರಾಜಧಾನಿ ಹೈದರಾಬಾದ್ ನಲ್ಲಿ ಭಾರತೀಯ ಬಾಹ್ಯಾಕಾಶ ಸಂಸ್ಥೆ (ಇಸ್ರೋ) ವಿಜ್ಞಾನಿ ನಿಗೂಢವಾಗಿ ಸಾವನ್ನಪ್ಪಿದ್ದು, ಕೊಲೆಯಾಗಿರುವ ಶಂಕೆ ವ್ಯಕ್ತವಾಗಿದೆ. 

ಹೈದರಾಬಾದ್ ನ ಅಮೀರ್‌ಪೇಟ್‌ನಲ್ಲಿರುವ ಅನ್ನಪೂರ್ಣ ಅಪಾರ್ಟ್ಮೆಂಟ್ ನಲ್ಲಿರುವ ಅವರ ಫ್ಲ್ಯಾಟ್‌ನಲ್ಲಿ ಮಂಗಳವಾರ ಕೊಲೆಯಾಗಿರುವುದು ಪತ್ತೆಯಾಗಿದೆ. ಮೃತ ವಿಜ್ಞಾನಿ ಅವರ ಮನೆಗೆ ನುಗ್ಗಿ ದುಷ್ಕರ್ಮಿಗಳು ಹತ್ಯೆ ಮಾಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಮೃತ ವಿಜ್ಞಾನಿಯನ್ನು ಇಸ್ರೋದ ಎನ್‌ಆರ್‌ಎಸ್‌ಸಿ ಅಧಿಕಾರಿಯಾದ ಎಸ್.ಸುರೇಶ್(56 ವರ್ಷ) ಎಂದು ಗುರುತಿಸಲಾಗಿದೆ.  ಮೂಲಗಳ ಪ್ರಕಾರ ಕೇರಳ ಮೂಲದವರಾದ ಸುರೇಶ್, ತಮ್ಮ ಫ್ಲಾಟ್ ನಲ್ಲಿ ಒಬ್ಬರೇ ವಾಸವಿದ್ದರು. ಮಂಗಳವಾರ ಕಚೇರಿಗೆ ಆಗಮಿಸದಿರುವುದನ್ನು ಗಮನಿಸಿ ಸಹೋದ್ಯೋಗಿಯೊಬ್ಬರು ಅವರ ಮೊಬೈಲ್ ಗೆ ಕರೆ ಮಾಡಿದ್ದರು. ಆದರೆ ಯಾವುದೇ ಪ್ರತಿಕ್ರಿಯೆ ಬರದ ಕಾರಣ ಚೆನ್ನೈನಲ್ಲಿ ಬ್ಯಾಂಕ್ ಉದ್ಯೋಗಿಯಾಗಿರುವ ಅವರ ಪತ್ನಿ ಇಂದಿರಾ ಅವರಿಗೆ ಕರೆ ಮಾಡಿ ವಿಷಯ ತಿಳಿಸಿದ್ದರು ಎನ್ನಲಾಗಿದೆ. 

ಬಳಿಕ ಹೈದರಾಬಾದ್ ಗೆ ಆಗಮಿಸಿದ ಪತ್ನಿ ಮತ್ತವರ ಸಂಬಂಧಿಕರು ಪೊಲೀಸರಿಗೆ ಮಾಹಿತಿ ನೀಡಿ, ಮನೆಯ ಬಾಗಿಲು ಮುರಿದು ಪರಿಶೀಲಿಸಿದಾಗ ವಿಜ್ಞಾನಿ ಸುರೇಶ್ ಅವರು, ರಕ್ತದ ಮಡುವಿನಲ್ಲಿ ಬಿದ್ದಿರುವುದು ಪತ್ತೆಯಾಗಿದೆ.  ಪ್ರಕರಣ ಸಂಬಂಧ ಅಮೀರ್ ಪೇಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಸದ್ಯ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT