ಸಂಗ್ರಹ ಚಿತ್ರ 
ದೇಶ

ಒಂದಲ್ಲ, ಎರಡಲ್ಲ ಬರೋಬ್ಬರಿ 7 ಪತ್ನಿಯರು: ಆತ್ಮಹತ್ಯೆಗೆ ಶರಣಾಗಿದ್ದ ಗಂಡನ ಮೃತದೇಹಕ್ಕಾಗಿ ಪತ್ನಿಯರ ಕಿತ್ತಾಟ!

ಬರೋಬ್ಬರಿ 7 ಪತ್ನಿಯರ ಮುದ್ದಿನ ಗಂಡ 40ನೇ ವಯಸ್ಸಿಗೆ ಆತ್ಮಹತ್ಯೆಗೆ ಶರಣಾಗಿದ್ದು ಆತನ ಮೃತದೇಹಕ್ಕಾಗಿ ಪತ್ನಿಯರು ಕಿತ್ತಾಡಿಕೊಂಡಿರುವ ಘಟನೆ ನಡೆದಿದೆ.

ಹರಿದ್ವಾರ: ಬರೋಬ್ಬರಿ 7 ಪತ್ನಿಯರ ಮುದ್ದಿನ ಗಂಡ 40ನೇ ವಯಸ್ಸಿಗೆ ಆತ್ಮಹತ್ಯೆಗೆ ಶರಣಾಗಿದ್ದು ಆತನ ಮೃತದೇಹಕ್ಕಾಗಿ ಪತ್ನಿಯರು ಕಿತ್ತಾಡಿಕೊಂಡಿರುವ ಘಟನೆ ನಡೆದಿದೆ.

ಉತ್ತರಖಂಡ್ ನ ಹರಿದ್ವಾರದಲ್ಲಿ 40 ವರ್ಷದ ಪವನ್ ಕುಮಾರ್ ಆತ್ಮಹತ್ಯೆಗೆ ಶರಣಾಗಿದ್ದಾನೆ. ಈಗ ಗಂಡನ ಮೃತದೇಹಕ್ಕಾಗಿ ಐವರು ಪತ್ನಿಯರು ಆಸ್ಪತ್ರೆಯ ಹೊರಗೆ ಕಿತ್ತಾಡಿಕೊಂಡಿದ್ದಾರೆ. ಪ್ರತಿಯೊಬ್ಬರೂ ಆತ ತನ್ನ ಪತಿಯೆಂದು ವಾದ ಮಾಡುತ್ತಿದ್ದರು. ಇದನ್ನು ನೋಡಿದ ಪೊಲೀಸರು ಕಂಗಾಲಾಗಿದರು. ಕೊನೆಗೆ ಐವರು ಪತ್ನಿಯರು ಗಂಡನ ಅಂತ್ಯಕ್ರಿಯೆ ನಡೆಸಿದರು.

ತಮ್ಮ ಗಂಡ ಸತ್ತ ಸುದ್ದಿ ತಿಳಿದ ಇನ್ನಿಬ್ಬರು ಪತ್ನಿಯರು ಪೊಲೀಸ್ ಠಾಣೆಗೆ ಬಂದು ತಮಗೆ ತಿಳಿಸದೆ ತಮ್ಮ ಗಂಡನ ಅಂತ್ಯ ಸಂಸ್ಕಾರ ಮಾಡಿರುವುದು ಸರಿಯಲ್ಲ ಎಂದು ಗಲಾಟೆ ಮಾಡಿದರು. ಈ ಘಟನೆಯಿಂದ ವಿಚಲಿತರಾದ ಪೊಲೀಸರು ಇನ್ನು ಕೆಲ ದಿನ ಕಾದು ಬಿಟ್ಟು ಪ್ರಕರಣ ಇತ್ಯರ್ಥ ಮಾಡಲು ನಿರ್ಧರಿಸಿದ್ದಾರೆ.

ಪವನ್ ಕುಮಾರ್ ಹಣಕಾಸು ತೊಂದರೆ ಅನುಭವಿಸುತ್ತಿದ್ದು ತನ್ನ ರೂಂನಲ್ಲಿ ವಿಷ ಕುಡಿದು ಆತ್ಮಹತ್ಯೆಗೆ ಶರಣಾಗಿದ್ದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

ಪಾಕಿಸ್ತಾನ-ಅಫ್ಘಾನಿಸ್ತಾನ ಯುದ್ಧ: 58 ಪಾಕ್ ಸೈನಿಕರು ಹತ, ತಾಲಿಬಾನ್ ಸರ್ಕಾರದ 'ದೊಡ್ಡ' ಹೇಳಿಕೆ

ಭಾರತ- ಬಾಂಗ್ಲಾದೇಶ ಗಡಿ: ರೂ. 2.82 ಕೋಟಿ ಮೌಲ್ಯದ 'ಚಿನ್ನದ ಬಿಸ್ಕತ್ತು' ಜೊತೆಗೆ ಕಳ್ಳಸಾಗಣೆದಾರನನ್ನು ಬಂಧಿಸಿದ BSF!

ದೇಶದ ಮುಸ್ಲಿಂರನ್ನು ಗುರಿಯಾಗಿಸಿಕೊಳ್ಳುವ ಬಿಜೆಪಿ ಅಫ್ಘಾನಿಸ್ತಾನದ ಜೊತೆ ಸಂಬಂಧ ಬೆಳೆಸುವುದು 'ಬೂಟಾಟಿಕೆ': ಮೆಹಬೂಬಾ ಮುಫ್ತಿ

'ಬ್ಲೂ ಸ್ಟಾರ್ ಆಪರೇಷನ್' ಕಾರ್ಯಾಚರಣೆ ತಪ್ಪಿಗೆ ಇಂದಿರಾ ಗಾಂಧಿ ಪ್ರಾಣ ತೆತ್ತರು: ಪಿ ಚಿದಂಬರಂ

SCROLL FOR NEXT