ದೆಹಲಿಯ ರಾಜ್ ಘಾಟ್ ನಲ್ಲಿ ಗಾಂಧೀಜಿ ಸಮಾಧಿಗೆ ನಾಯಕರ ಪುಷ್ಪ ನಮನ 
ದೇಶ

ಬಾಪೂಜಿಯ ಹಿಂಬಾಲಕರು ಯಾರು? ಬಿಜೆಪಿ-ಕಾಂಗ್ರೆಸ್ ಮಧ್ಯೆ ಶುರುವಾಗಿದೆ ಹೊಸ ಕದನ 

ಮಹಾತ್ಮಾ ಗಾಂಧೀಜಿಯವರ 150ನೇ ಜನ್ಮದಿನಾಚರಣೆ ಸಂದರ್ಭದಲ್ಲಿ ಅವರ ಪರಂಪರೆಯನ್ನು ಮುಂದುವರಿಸಿಕೊಂಡು ಹೋಗುತ್ತಿರುವ ಬಗ್ಗೆ ಕಾಂಗ್ರೆಸ್ ಮತ್ತು ಬಿಜೆಪಿಯಲ್ಲಿ ವಾಕ್ಸಮರ, ಜಗಳ ಆರಂಭವಾಗಿದೆ. 

ನವದೆಹಲಿ:ಮಹಾತ್ಮಾ ಗಾಂಧೀಜಿಯವರ 150ನೇ ಜನ್ಮದಿನಾಚರಣೆ ಸಂದರ್ಭದಲ್ಲಿ ಅವರ ಪರಂಪರೆಯನ್ನು ಮುಂದುವರಿಸಿಕೊಂಡು ಹೋಗುತ್ತಿರುವ ಬಗ್ಗೆ ಕಾಂಗ್ರೆಸ್ ಮತ್ತು ಬಿಜೆಪಿಯಲ್ಲಿ ವಾಕ್ಸಮರ, ಜಗಳ ಆರಂಭವಾಗಿದೆ.


ಪ್ರಸ್ತುತ ಭಾರತದಲ್ಲಿ ಗಾಂಧೀಜಿಯವರ ತತ್ವ, ಆದರ್ಶಗಳನ್ನು ಮುಂದುವರಿಸಿಕೊಂಡು ಹೋಗುತ್ತಿರುವವರು ಯಾರು, ಗಾಂಧೀಜಿಯವರ ನಿಜವಾದ ವಾರಸುದಾರರು ಯಾರು ಎಂಬ ಬಗ್ಗೆ ಆಡಳಿತಾರೂಢ ಬಿಜೆಪಿ ಮತ್ತು ವಿರೋಧ ಪಕ್ಷ ಕಾಂಗ್ರೆಸ್ ಜಗಳದಲ್ಲಿ ನಿರತವಾಗಿದೆ. ಕಾಂಗ್ರೆಸ್ ಗಾಂಧಿ ಜಯಂತಿಯನ್ನು ಪಾದಯಾತ್ರೆ, ಸಭೆಗಳು, ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಕೈಗೊಂಡಿದೆ.


ಇತತ್ ಬಿಜೆಪಿ ಕಾರ್ಯಾಧ್ಯಕ್ಷ ಜೆ ಪಿ ನಡ್ಡಾ ಪಕ್ಷದ ನಾಯಕರಿಗೆ ಪತ್ರ ಬರೆದು, ಬಿಜೆಪಿಯು ಗಾಂಧೀಜಿಯವರ ತತ್ವ, ಆದರ್ಶಗಳನ್ನು ಪಾಲಿಸುವ ವಾರಸುದಾರನಾಗಿದೆ ಎಂದು ಸಮಾಜದಲ್ಲಿ ಬಿಂಬಿಸಲು ಪಕ್ಷದ ನಾಯಕರು ಶ್ರಮಿಸಬೇಕು. ಕೇಂದ್ರದ ಉಜ್ವಲ ಯೋಜನೆಯಂತಹ ಯೋಜನೆಗಳು ಅವರ ತತ್ವಗಳಿಗೆ ಹಿಡಿದ ಕೈಗನ್ನಡಿ ಎಂದಿದ್ದಾರೆ.


ಬಿಜೆಪಿ ಗಾಂಧೀಜಿಯವರ ಕನ್ನಡಕದ ಗುರುತನ್ನು ಸ್ವಚ್ಛ ಭಾರತ ಅಭಿಯಾನದ ಚಿಹ್ನೆಯಾಗಿ ಪ್ರಚಾರಕ್ಕೆ ಮಾತ್ರ ಬಳಸಿಕೊಂಡಿದೆ, ಆದರೆ ಅವರ ತತ್ವ, ಆದರ್ಶಗಳನ್ನು ಪಾಲಿಸುವಲ್ಲಿ ವಿಫಲವಾಗಿದೆ ಎಂದು ಹೇಳಿದೆ.ಗಾಂಧೀಜಿಯವರ ಬೋಧನೆಗಳು ಮತ್ತು ಅವರ ಆದರ್ಶಗಳಿಗೆ ವಿರುದ್ಧವಾಗಿ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಾಡುತ್ತಿದೆ. 


ಪ್ರಧಾನಿ ನರೇಂದ್ರ ಮೋದಿಯವರು ಗಾಂಧೀಜಿ ಬಗ್ಗೆ ಹಲವು ಕಡೆ ಪ್ರಸ್ತಾಪಿಸುತ್ತಾರೆ. ಕಳೆದ ವಾರ ಅಮೆರಿಕಾದಲ್ಲಿ ಸಹ  ಮಾತನಾಡಿದ್ದರು. ಇತ್ತೀಚೆಗೆ ಭೋಪಾಲ್ ನಲ್ಲಿ ಬಿಜೆಪಿ ಸಂಸದೆ ಪ್ರಗ್ಯಾ ಸಿಂಗ್ ಠಾಕೂರ್ ನಾಥೂರಾಮ್ ಗೋಡ್ಸೆಯನ್ನು ದೇಶಭಕ್ತ ಎಂದು ಹೊಗಳಿದಾಗ ಪಕ್ಷ ತೀವ್ರ ಮುಜುಗರಕ್ಕೆ ಈಡಾಗಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನೀವೇನ್ ಮುಚ್ಚೋದು ನಾವೇ ಬಂದ್ ಮಾಡ್ತೀವಿ: Hormuz ಜಲಸಂಧಿ ದಾಟುವ ಹಡಗುಗಳಿಗೆ US ನೌಕಾಪಡೆ ತಡೆ- ಇರಾನ್ ಗೆ ಟ್ರಂಪ್ ಶಾಕ್!

ಅತ್ಯಂತ ಸುಂದರ 'ಮದುವೆ ಹೆಣ್ಣು', 1 ಬಿಲಿಯನ್ ಡಾಲರ್ ಹಣ ಕೊಡಿ; Uganda ಸೇನಾ ಮುಖ್ಯಸ್ಥನ ವಿಚಿತ್ರ ಬೇಡಿಕೆ, Turkey ಬೇಸ್ತು!

ಪಕ್ಷ ವಿರೋಧಿ ಚಟುವಟಿಕೆ: ಜಬ್ಬಾರ್ ರಾಜೀನಾಮೆ ಬೆನ್ನಲ್ಲೇ ಮತ್ತೊಂದು ಶಾಕ್, KPCC ಅಲ್ಪಸಂಖ್ಯಾತ ಘಟಕವನ್ನೇ ವಿಸರ್ಜಿಸಿದ DK Shivakumar

IPL 2026: ಬಟ್ಲರ್ 14,000 ರನ್ ದಾಖಲೆ; ಮಿಂಚಿದ ಶುಭ್ಮನ್ ಗಿಲ್, ಪ್ರಸಿದ್ಧ್ ಕೃಷ್ಣ; LSG ವಿರುದ್ಧ GT ಗೆಲುವು!

US-Iran ಶಾಂತಿ ಮಾತುಕತೆ ವಿಫಲ ಬೆನ್ನಲ್ಲೇ Pakistanಗೆ ಜಾಕ್‌ಪಾಟ್‌: ಕತಾರ್, ಸೌದಿಯಿಂದ 5 ಬಿಲಿಯನ್ ಡಾಲರ್ ಆರ್ಥಿಕ ನೆರವು!

SCROLL FOR NEXT