ಫಿರೋಜ್ ಖಾನ್ 
ದೇಶ

ಗಾಂಧಿ ಪ್ರತಿಮೆ ಕೆಳಗೆ ಎಸ್ಪಿ ಶಾಸಕನ ಕಣ್ಣೀರ ಧಾರೆ!ವಿಡಿಯೋ ವೈರಲ್ 

ಉತ್ತರ ಪ್ರದೇಶದ ಸಂಬಲ್ ಜಿಲ್ಲೆಯಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧಿ ಪ್ರತಿಮೆ ಕುಳಿತ ಸಮಾಜವಾದಿ ಪಕ್ಷದ ಶಾಸಕರೊಬ್ಬರ ಕಣ್ಣೀರ ಧಾರೆಯ ನಾಟಕ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಲಖನೌ:  ಉತ್ತರ ಪ್ರದೇಶದ ಸಂಬಲ್ ಜಿಲ್ಲೆಯಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧಿ ಪ್ರತಿಮೆ ಕುಳಿತ ಸಮಾಜವಾದಿ ಪಕ್ಷದ ಶಾಸಕರೊಬ್ಬರ ಕಣ್ಣೀರ ಧಾರೆಯ ನಾಟಕ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಚಂದೌಸಿ ಪಟ್ಟಣದ  ಪವಾರ ಚೌಕದಲ್ಲಿನ ಗಾಂಧಿ ಪ್ರತಿಮೆ ಕೆಳಗೆ  ಕುಳಿತ ಶಾಸಕ ಫಿರೋಜ್ ಖಾನ್ ಹಾಗೂ ಇತರ ಪಕ್ಷದ ಮುಖಂಡರು ಬಾಪು ಬಾಪು ಎನ್ನುತ್ತಾ ಅಳುತ್ತಿದ್ದ ದೃಶ್ಯ ವಿಡಿಯೋದಲ್ಲಿತ್ತು. ಶಾಸಕರು ಕರವಸ್ತ್ರದಿಂದ ಮುಖವನ್ನು ಒರೆಸಿಕೊಳ್ಳುತ್ತಾ ಅಳುವ ರೀತಿಯಲ್ಲಿ ನಾಟಕ ಮಾಡಿದ್ದರು. 

ಆದರೆ, ತಮ್ಮ ಈ ನಾಟಕವನ್ನು ಫಿರೋಜ್ ಖಾನ್ ಸಮರ್ಥಿಸಿಕೊಂಡಿದ್ದಾರೆ.ಸಮಾಜವಾದಿ ಸರ್ಕಾರ ಅಧಿಕಾರದಲ್ಲಿದ್ದಾಗ ಮಹಾತ್ಮ ಗಾಂಧಿ ಪ್ರತಿಮೆಯನ್ನು ಸ್ವಚ್ಛಗೊಳಿಸಲಾಗುತಿತ್ತು. ಆದರೆ, ಬಿಜೆಪಿ ಆಡಳಿತಾವಧಿಯಲ್ಲಿ ಮಹಾತ್ಮನ  ಪ್ರತಿಮೆಯನ್ನು ಕೂಡಾ ಸ್ವಚ್ಛಗೊಳಿಸುತ್ತಿಲ್ಲ. ಅವರ ಜವಾಬ್ದಾರಿಯನ್ನು ಪೂರ್ಣಗೊಳಿಸುವಲ್ಲಿ ವಿಫಲರಾಗಿದ್ದಾರೆ ಆದ್ದರಿಂದ ತಮ್ಮವರೊಂದಿಗೆ ಪ್ರತಿಮೆ ಸ್ವಚ್ಛಗೊಳಿಸಿದ್ದಾಗಿ ಹೇಳಿದ್ದಾರೆ. 

ಮಹಾತ್ಮ ಗಾಂಧಿಗೆ ಸಣ್ಣ ಗೌರವ ನೀಡದಿದ್ದರೂ ಅವರ ಹೆಸರಿನಲ್ಲಿ ಕೇಂದ್ರದ ಬಿಜೆಪಿ ಸರ್ಕಾರ ಕೋಟ್ಯಂತರ ರೂಪಾಯಿ ಹಣ ವೆಚ್ಚ ಮಾಡುತ್ತಿದೆ. ಗಾಂಧೀಜಿ ಅವರ ಪ್ರತಿಮೆಯನ್ನು ಸ್ವಚ್ಛಗೊಳಿಸಿದ್ದೇವೆ. ಆದರೆ, ಬಿಜೆಪಿಯವರು ಇದನ್ನು ನಾಟಕ ಎನ್ನುತ್ತಿದ್ದಾರೆ. ಇಂತರ ತಾರತಮ್ಯವನ್ನು ಸಹಿಸುವುದಿಲ್ಲ ಎಂದು ಅವರು ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT