ದೇಶ

ಅ.17ರವರೆಗೂ ಚಿದಂಬರಂಗೆ ಜೈಲೇ ಗತಿ

Nagaraja AB

ನವದೆಹಲಿ: ಐಎನ್ ಎಕ್ಸ್  ಮಾಧ್ಯಮ ಭ್ರಷ್ಟಾಚಾರ ಪ್ರಕರಣದಲ್ಲಿ ಕೇಂದ್ರದ ಮಾಜಿ ಸಚಿವ ಪಿ. ಚಿದಂಬರಂ ಅವರಿಗೆ ಅಕ್ಟೋಬರ್ 17ವರೆಗೂ ನ್ಯಾಯಾಂಗ ಬಂಧನ ಅವಧಿಯನ್ನು ದೆಹಲಿಯ ನ್ಯಾಯಾಲಯ ವಿಸ್ತರಿಸಿದೆ. 

ನ್ಯಾಯಾಂಗ ಬಂಧನ ಅವಧಿಯನ್ನು ವಿಸ್ತರಿಸಬೇಕೆಂಬ ಸಿಬಿಐ ಕೋರಿಕೆ ಹಿನ್ನೆಲೆಯಲ್ಲಿ ಅಕ್ಟೋಬರ್ 17ರವರೆಗೂ ಹಿರಿಯ ಕಾಂಗ್ರೆಸ್ ಮುಖಂಡ ಪಿ. ಚಿದಂಬರಂ ಅವರನ್ನು ವಿಶೇಷ ನ್ಯಾಯಾಧೀಶ ಅಜಯ್ ಕುಮಾರ್ ಕುಹಾರ್, ನ್ಯಾಯಾಂಗ ಬಂಧನ ಅವಧಿಯನ್ನು ವಿಸ್ತರಿಸಿ ಆದೇಶ ಪ್ರಕಟಿಸಿದ್ದಾರೆ. 

ವೈದ್ಯಕೀಯ ಕಾಯಿಲೆಗಳನ್ನು ಉಲ್ಲೇಖಿಸಿದ 74 ವರ್ಷದ ಚಿದಂಬರಂ, ಜೈಲಿನಲ್ಲಿ ತಮ್ಮಗೆ ಮನೆ ಊಟಕ್ಕೆ ಅವಕಾಶ ಕಲ್ಪಿಸಬೇಕೆಂದು ನ್ಯಾಯಾಧೀಶರ ಬಳಿ ಮನವಿ ಮಾಡಿಕೊಂಡಿದ್ದಾರೆ. 

ಯುಪಿಎ ಆಡಳಿತಾವಧಿಯಲ್ಲಿ 2004ರಿಂದ 2014ರವರೆಗೂ ಕೇಂದ್ರ ಸಚಿವರಾಗಿ ಕಾರ್ಯನಿರ್ವಹಿಸಿದ್ದ ಚಿದಂಬರಂ ಅವರನ್ನು ಆಗಸ್ಟ್ 21 ರಂದು ಸಿಬಿಐ ಬಂಧಿಸಿತ್ತು. 

SCROLL FOR NEXT