ದೆಹಲಿ-ಕತ್ರಾ 'ವಂದೇ ಭಾರತ್ ಎಕ್ಸ್'ಪ್ರೆಸ್'ಗೆ ಅಮಿತ್ ಶಾ ಚಾಲನೆ 
ದೇಶ

ದೆಹಲಿ-ಕತ್ರಾ 'ವಂದೇ ಭಾರತ್ ಎಕ್ಸ್'ಪ್ರೆಸ್'ಗೆ ಅಮಿತ್ ಶಾ ಚಾಲನೆ

ದೆಹಲಿಯಿಂದ ಜಮ್ಮು ಮತ್ತು ಕಾಶ್ಮೀರರ ಕತ್ರಾದಲ್ಲಿ ನೆಲೆಯೂರಿರುವ ವೈಷ್ಣೋದೇವಿ ದೇವಿ ದೇವಾಲಯದವರೆಗೂ ತೆರಳುವ 'ವಂದೇ ಭಾರತ್ ಎಕ್ಸ್'ಪ್ರೆಸ್'ಗೆ ಗೃಹ ಸಚಿವ ಅಮಿತ್ ಶಾ ಅವರು ಗುರುವಾರ ಚಾಲನೆ ನೀಡಿದ್ದಾರೆ. 

ನವದೆಹಲಿ: ದೆಹಲಿಯಿಂದ ಜಮ್ಮು ಮತ್ತು ಕಾಶ್ಮೀರರ ಕತ್ರಾದಲ್ಲಿ ನೆಲೆಯೂರಿರುವ ವೈಷ್ಣೋದೇವಿ ದೇವಿ ದೇವಾಲಯದವರೆಗೂ ತೆರಳುವ 'ವಂದೇ ಭಾರತ್ ಎಕ್ಸ್'ಪ್ರೆಸ್'ಗೆ ಗೃಹ ಸಚಿವ ಅಮಿತ್ ಶಾ ಅವರು ಗುರುವಾರ ಚಾಲನೆ ನೀಡಿದ್ದಾರೆ. 

ಕೇವಲ 8 ಗಂಟೆಗಳಲ್ಲಿ 655 ಕಿ.ಮೀ ತಲುಪುವ ವಂದೇ ಭಾರತ್ ಎಕ್ಸ್'ಪ್ರೆಸ್'ಗೆ ಅಮಿತ್ ಶಾ ಅವರು ರಾಜಧಾನಿ ದೆಹಲಿಯಲ್ಲಿ ಹಸಿರು ನಿಶಾನೆ ತೋರಿದ್ದಾರೆ. 

ಬಳಿಕ ಮಾತನಾಡಿರುವ ಅಮಿತ್ ಶಾ ಅವರು, ನವರಾತ್ರಿ ವಿಶೇಷ ಸಂದರ್ಭದಲ್ಲಿ ಜಮ್ಮು ಮತ್ತು ಕಾಶ್ಮೀರ ಜನತೆಗೆ ಇಂತಹ ದೊಡ್ಡ ಉಡುಗೊರೆ ನೀಡಿರುವ ಭಾರತೀಯ ರೈಲ್ವೇಗೆ ನನ್ನ ಹೃದಯ ಪೂರ್ವಕ ವಂದನೆಗಳನ್ನು ಸಲ್ಲಿಸುತ್ತೇನೆ. ಭಾರತದಲ್ಲಿ ರೈಲನ್ನು ನಿರ್ಮಾಣ ಮಾಡಿದ್ದಕ್ಕೆ ಹೆಮ್ಮೆಯಿದೆ. ತತ್ವಗಳು, ವೇಗ ಹಾಗೂ ಸೇವೆಗಳನ್ನೇ ಗುರಿಯಾಗಿರಿಸಿಕೊಂಡು ರೈಲ್ವೇ ಇಲಾಖೆ ಸಾಧನೆ ಮಾಡಿದೆ. ಸ್ಥಳೀಯ ಪ್ರವಾಸಕ್ಕೆ ಈ ಯೋಜನೆ ಸಹಾಯಕವಾಗಲಿದೆ. ಜಮ್ಮು ಮತ್ತು ಕಾಶ್ಮೀರ ಅಭಿವೃದ್ಧಿಗೆ ಸ್ಥಳೀಯ ಪ್ರವಾಸ ಅತ್ಯಂತ ದೊಡ್ಡ ಪಾತ್ರವಹಿಸಲಿದೆ. ಮಾತಾ ವೈಷ್ಣೋದೇವಿ ದೇಗುಲಕ್ಕೆ ಹೋಗುವುದಿಲ್ಲ ಎಂಬ ಯಾವುದೇ ಗ್ರಾಮ ಭಾರತದಲ್ಲಿಲ್ಲ ಎಂದು ತಿಳಿಸಿದ್ದಾರೆ. 

ಆಗಸ್ಟ್ 15ರಂದು ಲೋಕಾರ್ಪಣೆಗೊಂಡಿದ್ದ ಈ ರೈಲು ಭಾರೀ ಜನಮನ್ನಣೆ ಗಳಿಸಿತ್ತು. ವಂದೇ ಭಾರತ್ ಎಕ್ಸ್'ಪ್ರೆಸ್ ರೈಲು ಒಟ್ಟು 16 ಬೋಗಿಗಳನ್ನು ಹೊಂದಿದ್ದು, 1128 ಆಸನಗಳನ್ನು ಹೊಂದಿದೆ. ಇದರಲ್ಲಿ 14 ಬೋಗಿಗಳು ಜನರಲ್ ಚೇರ್ ಗಳಾಗಿವೆ. ಅದರಲ್ಲಿ 936 ಆಸನಗಳಿವೆ. 

ದೆಹಲಿಯಿಂದ ಲುಧಿಯಾನದ ನಡುವೆ 130 ಕಿಮೀ ವೇಗದಲ್ಲಿ ಚಲಿಸಲು ಅನುಮತಿ ನೀಡಲಾಗಿದ್ದು. ಲುಧಿಯಾನದಿಂದ ಕತ್ರಾವರೆಗೂ ಗಂಟೆಗೆ 75 ಕಿಮೀ ವೇಗದಲ್ಲಿ ಈ ರೈಲು ಚಲಿಸಲಿದೆ. 

ಇಂಜಿನ್ ರಹಿತವಾಗ ಈ ರೈಲು ಒಟ್ಟಾರೆ 16 ಕಿಮೀ ವೇಗದಲ್ಲಿ ಸಂಚರಿಸಲಿದೆ. ಶತಾಬ್ದಿ ಎಕ್ಸ್'ಪ್ರೆಸ್ ಗಿಂತಲೂ ವಂದೇ ಭಾರತ್ ರೈಲು ಸಂಚರಿಸಲಿದೆ. ರೈಲಿನಲ್ಲಿ ಅತ್ಯಾಧುನಿಕ ಸೌಲಭ್ಯಗಳನ್ನೂ ಕಲ್ಪಿಸಲಾಗಿದೆ. ಪ್ರತೀ ಬೋಗಿಗಳಲ್ಲೂ ಸಿಸಿಟಿವಿ ಕ್ಯಾಮೆರಾಗಳು, ವೈಫೈ ವ್ಯವಸ್ಥೆ ಕಲ್ಪಿಸಲಾಗಿದೆ. ಇದಲ್ಲದೆ, ಮನರಂಜನೆಗೆ ಅಗತ್ಯವಿರುವ ವ್ಯವಸ್ಥೆಗಳು, ಮೊಬೈಲ್ ಚಾರ್ಜಿಂಗ್ ಆಯ್ಕೆಗಳೂ ಕೂಡ ಇಲ್ಲಿವೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT