ಗಾಂಧೀಜಿ ಸ್ಮರಣೆಗೆ ರೂ.150 ಹೊಸ ನಾಣ್ಯ ಬಿಡುಗಡೆ 
ದೇಶ

ಗಾಂಧೀಜಿ ಸ್ಮರಣೆಗೆ ರೂ.150 ಮುಖಬೆಲೆಯ ಹೊಸ ನಾಣ್ಯ ಬಿಡುಗಡೆ 

ರಾಷ್ಟ್ರಪಿತ ಮಹಾತ್ಮ ಗಾಂಧೀಯವರ 150ನೇ ಜನ್ಮಶತಮಾನೋತ್ಸವದ ಸ್ಮರಣೆಗಾಗಿ ಭಾರತ ಸರ್ಕಾರ ರೂ.150 ಹೊಸ ನಾಣ್ಯವನ್ನು ಬುಧವಾರ ಬಿಡುಗಡೆ ಮಾಡಿದೆ. 

ಅಹಮದಾಬಾದ್: ರಾಷ್ಟ್ರಪಿತ ಮಹಾತ್ಮ ಗಾಂಧೀಯವರ 150ನೇ ಜನ್ಮಶತಮಾನೋತ್ಸವದ ಸ್ಮರಣೆಗಾಗಿ ಭಾರತ ಸರ್ಕಾರ ರೂ.150 ಹೊಸ ನಾಣ್ಯವನ್ನು ಬುಧವಾರ ಬಿಡುಗಡೆ ಮಾಡಿದೆ. 

ಅಹಮದಾಬಾದ್ ನಲ್ಲಿರುವ ಸಾಬರ್ ಮತಿ ಆಶ್ರಮದಲ್ಲಿ ನಡೆದ ವಿಶೇಷ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಈ ವಿಶೇಷ ನಾಣ್ಯವನ್ನು ಬಿಡುಗಡೆ ಮಾಡಿದ್ದಾರೆ. 

ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಧಾನಿ ಮೋದಿಯವರು, ಕೇವಲ ಶೌಚಾಲಯಗಳ ನಿರ್ಮಾಣವಾದರೆ ಸಾಲದು, ಅದರ ನಿಯಮಿತ ಬಳಕೆ ಅಗತ್ಯ ಎಂದು ಪ್ರತಿಪಾದಿಸುವ ಮೂಲಕ ಭಾರತವನ್ನು ಬಯಲು ಶೌಚ ಮುಕ್ತ ಎಂದು ಘೋಷಿಸಿದರು. 

ಇಂದು ಗ್ರಾಮೀಣ ಭಾರತ ಹಾಗೂ ಅದರ ಗ್ರಾಮಗಳು ತಮ್ಮ ಪ್ರದೇಶಗಳನ್ನು ಬಯಲು ಶೌಚ ಮುಕ್ತ ಎಂದು ಘೋಷಿಸಿಕೊಂಡಿವೆ. 2014 ರಲ್ಲಿ ಈ ಗುರಿಯನ್ನು ನಿಗದಿಪಡಿಸಲಾಗಿತ್ತು. ಇದಕ್ಕೆ ಸ್ವಯಂ ಪ್ರೇರಿತವಾಗಿ ನಡೆಯುತ್ತಿರುವ ಸ್ವಚ್ಛ ಭಾರತ ಅಭಿಯಾನ ಶಕ್ತಿ ಹಾಗೂ ಯಶಸ್ಸಿನ ಮೂಲ ಎಂದು ಹೇಳಿದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

SCROLL FOR NEXT