ಅಯೋಧ್ಯೆ ವಿವಾದ: ಅಕ್ಟೋಬರ್ 17 ಕ್ಕೆ ವಿಚಾರಣೆ ಅಂತ್ಯ-ಸುಪ್ರೀಂ ಮಹತ್ವದ ಹೇಳಿಕೆ 
ದೇಶ

ಅಯೋಧ್ಯೆ ವಿವಾದ: ಅಕ್ಟೋಬರ್ 17 ಕ್ಕೆ ವಿಚಾರಣೆ ಅಂತ್ಯ-ಸುಪ್ರೀಂ ಮಹತ್ವದ ಹೇಳಿಕೆ

ಅಕ್ಟೋಬರ್ 17 ರೊಳಗೆ ಅಯೋಧ್ಯೆ ರಾಮಜನ್ಮಭೂಮಿ-ಬಾಬರಿ ಮಸೀದಿ ಭೂ ವಿವಾದದ ವಿಚಾರಣೆಯನ್ನು ಮುಕ್ತಾಯಗೊಳಿಸುವುದಾಗಿ ಸುಪ್ರೀಂ ಕೋರ್ಟ್ ಶುಕ್ರವಾರ ಹೇಳಿದೆ.

ಅಕ್ಟೋಬರ್ 17 ರೊಳಗೆ ಅಯೋಧ್ಯೆ ರಾಮಜನ್ಮಭೂಮಿ-ಬಾಬರಿ ಮಸೀದಿ ಭೂ ವಿವಾದದ ವಿಚಾರಣೆಯನ್ನು ಮುಕ್ತಾಯಗೊಳಿಸುವುದಾಗಿ ಸುಪ್ರೀಂ ಕೋರ್ಟ್ ಶುಕ್ರವಾರ ಹೇಳಿದೆ.

ವಿಚಾರಣೆಯ 37 ನೇ ದಿನದ ಮುಕ್ತಾಯದಂದು ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ನೇತೃತ್ವದ ಪಂಚ ಸದಸ್ಯರ ಸಂವಿಧಾನ ಪೀಠ ಸುದೀರ್ಘ ವಾದಗಳ ಅಂತಿಮ ಹಂತದ ವೇಳಾಪಟ್ಟಿಯನ್ನು ನಿಗದಿಪಡಿಸಿತು.

ಅಕ್ಟೋಬರ್ 14 ರಂದು ಮುಸ್ಲಿಮರ ಪರ ಅರ್ಜಿದಾರರು ವಾದವನ್ನು ಮುಕ್ತಾಯಗೊಳಿಸಲಿದ್ದ್ರೆ.ಅದಾದ ನಂತರ ಹಿಂದೂ ಪಕ್ಷಗಳಿಗೆ ಅಕ್ಟೋಬರ್ 16 ರೊಳಗೆ ತಮ್ಮ ಪುನರ್ವಿಮರ್ಶೆಯನ್ನು ಸಂಕ್ಷಿಪ್ತವಾಗಿ ಹೇಳಬೇಕಿದೆ. ಅದಕ್ಕಾಗಿ ಅವರುಗಳಿಗೆ ಎರಡು ದಿನಗಳ ಕಾಲಾವಕಾಶವಿದೆ. ಅದಾಗಿ ಅಕ್ಟೋಬರ್ 17 ವಿಚಾರಣೆಯ ಕಡೆಯ ದಿನವಾಗಿರಲಿದೆ ಎಂದು ನ್ಯಾಯಪೀಠ ಹೇಳಿದೆ. 

ನ್ಯಾಯಮೂರ್ತಿಗಳಾದ ಎಸ್ ಎ ಬೊಬ್ಡೆ, ಡಿ ವೈ ಚಂದ್ರಚೂಡ್, ಅಶೋಕ್ ಭೂಷಣ್ ಮತ್ತು ಎಸ್ ಎ ನಜೀರ್ ಅವರನ್ನೊಳಗೊಂಡ ನ್ಯಾಯಪೀಠ, ಈ ಮೊದಲು ವಿಚಾರಣೆಯನ್ನು ಮುಕ್ತಾಯಗೊಳಿಸಲು ಅಕ್ಟೋಬರ್ 18ರ ಗಡುವನ್ನು ನಿಗದಿ ಮಾಡಿತ್ತು.

ಸಿಜೆಐ ನವೆಂಬರ್ 18ರಂದು ನಿವೃತ್ತರಾಗುತ್ತಿರುವ ಹಿನ್ನೆಲೆಯಲ್ಲಿ ಈ ವಿಷಯದ ತೀರ್ಪನ್ನು ನವೆಂಬರ್ 17ರೊಳಗೆ ಘೋಷಿಸಲಾಗುತ್ತದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

SCROLL FOR NEXT