ಅಯೋಧ್ಯೆ ವಿವಾದ: ಅಕ್ಟೋಬರ್ 17 ಕ್ಕೆ ವಿಚಾರಣೆ ಅಂತ್ಯ-ಸುಪ್ರೀಂ ಮಹತ್ವದ ಹೇಳಿಕೆ 
ದೇಶ

ಅಯೋಧ್ಯೆ ವಿವಾದ: ಅಕ್ಟೋಬರ್ 17 ಕ್ಕೆ ವಿಚಾರಣೆ ಅಂತ್ಯ-ಸುಪ್ರೀಂ ಮಹತ್ವದ ಹೇಳಿಕೆ

ಅಕ್ಟೋಬರ್ 17 ರೊಳಗೆ ಅಯೋಧ್ಯೆ ರಾಮಜನ್ಮಭೂಮಿ-ಬಾಬರಿ ಮಸೀದಿ ಭೂ ವಿವಾದದ ವಿಚಾರಣೆಯನ್ನು ಮುಕ್ತಾಯಗೊಳಿಸುವುದಾಗಿ ಸುಪ್ರೀಂ ಕೋರ್ಟ್ ಶುಕ್ರವಾರ ಹೇಳಿದೆ.

ಅಕ್ಟೋಬರ್ 17 ರೊಳಗೆ ಅಯೋಧ್ಯೆ ರಾಮಜನ್ಮಭೂಮಿ-ಬಾಬರಿ ಮಸೀದಿ ಭೂ ವಿವಾದದ ವಿಚಾರಣೆಯನ್ನು ಮುಕ್ತಾಯಗೊಳಿಸುವುದಾಗಿ ಸುಪ್ರೀಂ ಕೋರ್ಟ್ ಶುಕ್ರವಾರ ಹೇಳಿದೆ.

ವಿಚಾರಣೆಯ 37 ನೇ ದಿನದ ಮುಕ್ತಾಯದಂದು ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ನೇತೃತ್ವದ ಪಂಚ ಸದಸ್ಯರ ಸಂವಿಧಾನ ಪೀಠ ಸುದೀರ್ಘ ವಾದಗಳ ಅಂತಿಮ ಹಂತದ ವೇಳಾಪಟ್ಟಿಯನ್ನು ನಿಗದಿಪಡಿಸಿತು.

ಅಕ್ಟೋಬರ್ 14 ರಂದು ಮುಸ್ಲಿಮರ ಪರ ಅರ್ಜಿದಾರರು ವಾದವನ್ನು ಮುಕ್ತಾಯಗೊಳಿಸಲಿದ್ದ್ರೆ.ಅದಾದ ನಂತರ ಹಿಂದೂ ಪಕ್ಷಗಳಿಗೆ ಅಕ್ಟೋಬರ್ 16 ರೊಳಗೆ ತಮ್ಮ ಪುನರ್ವಿಮರ್ಶೆಯನ್ನು ಸಂಕ್ಷಿಪ್ತವಾಗಿ ಹೇಳಬೇಕಿದೆ. ಅದಕ್ಕಾಗಿ ಅವರುಗಳಿಗೆ ಎರಡು ದಿನಗಳ ಕಾಲಾವಕಾಶವಿದೆ. ಅದಾಗಿ ಅಕ್ಟೋಬರ್ 17 ವಿಚಾರಣೆಯ ಕಡೆಯ ದಿನವಾಗಿರಲಿದೆ ಎಂದು ನ್ಯಾಯಪೀಠ ಹೇಳಿದೆ. 

ನ್ಯಾಯಮೂರ್ತಿಗಳಾದ ಎಸ್ ಎ ಬೊಬ್ಡೆ, ಡಿ ವೈ ಚಂದ್ರಚೂಡ್, ಅಶೋಕ್ ಭೂಷಣ್ ಮತ್ತು ಎಸ್ ಎ ನಜೀರ್ ಅವರನ್ನೊಳಗೊಂಡ ನ್ಯಾಯಪೀಠ, ಈ ಮೊದಲು ವಿಚಾರಣೆಯನ್ನು ಮುಕ್ತಾಯಗೊಳಿಸಲು ಅಕ್ಟೋಬರ್ 18ರ ಗಡುವನ್ನು ನಿಗದಿ ಮಾಡಿತ್ತು.

ಸಿಜೆಐ ನವೆಂಬರ್ 18ರಂದು ನಿವೃತ್ತರಾಗುತ್ತಿರುವ ಹಿನ್ನೆಲೆಯಲ್ಲಿ ಈ ವಿಷಯದ ತೀರ್ಪನ್ನು ನವೆಂಬರ್ 17ರೊಳಗೆ ಘೋಷಿಸಲಾಗುತ್ತದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT