ಬಾಂಬೆ ಹೈಕೋರ್ಟ್ 
ದೇಶ

ಮೆಟ್ರೋಗಾಗಿ ಮರಗಳ ಮಾರಣಹೋಮ: ಆರೆ ಕಾಲೋನಿ ಮರ ಕಡಿಯುವಿಕೆಗೆ ತಡೆ ನೀಡಲು ಬಾಂಬೆ ಹೈಕೋರ್ಟ್ ನಕಾರ

ಮುಂಬೈನ ಪ್ರಮುಖ ಹಸಿರು ಪ್ರದೇಶವಾಗಿರುವ ಆರೆ ಕಾಲೋನಿಯಲ್ಲಿ ಮೆಟ್ರೋ ಕಾರ್ ಶೆಡ್ ಗಾಗಿ ಮರಗಳನ್ನು ಕಡಿಯುವುದಕ್ಕೆ ತಡೆ ನೀಡಲು ಬಾಂಬೆ ಹೈಕೋರ್ಟ್ ಶನಿವಾರ ನಿರಾಕರಿಸಿದೆ.

ಮುಂಬೈ: ಮುಂಬೈನ ಪ್ರಮುಖ ಹಸಿರು ಪ್ರದೇಶವಾಗಿರುವ ಆರೆ ಕಾಲೋನಿಯಲ್ಲಿ ಮೆಟ್ರೋ ಕಾರ್ ಶೆಡ್ ಗಾಗಿ ಮರಗಳನ್ನು ಕಡಿಯುವುದಕ್ಕೆ ತಡೆ ನೀಡಲು ಬಾಂಬೆ ಹೈಕೋರ್ಟ್ ಶನಿವಾರ ನಿರಾಕರಿಸಿದೆ.

ಮುಂಬೈನ ಟ್ರೀ ಅಥಾರಿಟಿಯ ನಿರ್ಧಾರವನ್ನು ಪ್ರಶ್ನಿಸಿ ಎನ್ಜಿಒಗಳು ಮತ್ತು ಕಾರ್ಯಕರ್ತರು ಸಲ್ಲಿಸಿದ ನಾಲ್ಕು ಅರ್ಜಿಗಳನ್ನು ಹೈಕೋರ್ಟ್ ವಜಾಗೊಳಿಸಿದ ಒಂದು ದಿನದ ನಂತರ, ಕೆಲವು ಹಸಿರು ಕಾರ್ಯಕರ್ತರು ಈ ಪ್ರದೇಶದಲ್ಲಿ 2656 ಮರಗಳನ್ನು ಕಡಿಯುವ ಮುಂಬೈ ಮೆಟ್ರೋ ರೈಲು  ಕಾರ್ಪೊರೇಶನ್ ಲಿಮಿಟೆಡ್  ಕ್ರಮವನ್ನು ತಡೆಯಲು ಕೋರಿ ಹೊಸ ಅರ್ಜಿಯನ್ನು ಸಲ್ಲಿಸಿದ್ದರು. ಮುಂಬೈ ನಗರಾಡಳಿತವು ಮರ ಕಡಿಯಲು ಅನುಮತಿ ನೀಡಿತ್ತು.

ಶುಕ್ರವಾರ ತಡರಾತ್ರಿ ಮರಗಳನ್ನು ಕಡಿಯಲು ಪ್ರಾರಂಭಿಸಿದ ಎಂಎಂಆರ್‌ಸಿಎಲ್‌ನ ಕ್ರಮಕ್ಕೆ ಆರೆ ಕಾಲೋನಿಯಲ್ಲಿ ಹಸಿರು ಕಾರ್ಯಕರ್ತರ ತೀವ್ರ ಪ್ರತಿರೋಧವನ್ನು ಒಡ್ಡಿದ್ದಾರೆ.

ಕಾರ್ಯಕರ್ತರು, ತಮ್ಮ ಅರ್ಜಿಯಲ್ಲಿ, ಎಂಎಂಆರ್ಸಿಎಲ್ ಕ್ರಮವನ್ನು ಒಂದು ವಾರ ತಡೆಹಿಡಿಯಲು ಕೋರಿದ್ದು ಇದರಿಂದ ಅವರು ಹೈಕೋರ್ಟ್ ಆದೇಶದ ವಿರುದ್ಧ ಸುರ್ಪೀಂ ಮೆಟ್ಟಿಲೇರಬಹುದಾಗಿದೆ.

ಶನಿವಾರ ಇವರ ಅರ್ಜಿಯನ್ನು ನ್ಯಾಯಮೂರ್ತಿಗಳಾದ ಎಸ್ ಸಿ ಧರ್ಮಾಧಿಕಾರಿ ಮತ್ತು ಎ ಕೆ ಮೆನನ್ ಅವರು ತುರ್ತು ವಿಚಾರಣೆಗೆ ತೆಗೆದುಕೊಂಡರು.ಸಂಕ್ಷಿಪ್ತ ವಾದಗಳ ನಂತರ, ನ್ಯಾಯಪೀಠವು ತಡೆಯಾಜ್ಞೆ ನೀಡಲು ನಿರಾಕರಿಸಿ ರ ಅರ್ಜಿಯನ್ನು ವಿಲೇವಾರಿ ಮಾಡಿತು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

20 ವರ್ಷ ಸಾಕಿ ಬೆಳೆಸಿದ 'ಅಶ್ವತ್ಥ'ಕ್ಕೆ ಕಿಡಿಗೇಡಿಗಳ ಕೊಡಲಿ ಪೆಟ್ಟು, ಬಿಕ್ಕಿ ಬಿಕ್ಕಿ ಅತ್ತ 'ವೃಕ್ಷಮಾತೆ', ಇಬ್ಬರ ಬಂಧನ, video viral

2nd Test, Day 3: ಮೊದಲ ಇನ್ನಿಂಗ್ಸ್ ನಲ್ಲಿ 248 ರನ್ ಗೆ ವಿಂಡೀಸ್ ಆಲೌಟ್, ಫಾಲೋಆನ್ ಹೇರಿದ ಭಾರತ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

SCROLL FOR NEXT