ಪ್ರಕಾಶ್ ಜಾವಡೇಕರ್ 
ದೇಶ

ಮೆಟ್ರೋಗಾಗಿ ಮರಗಳ ಮಾರಣಹೋಮಕ್ಕೆ ಕೇಂದ್ರ ಪರಿಸರ ಸಚಿವರ ಸಮರ್ಥನೆ: ದೆಹಲಿ ಮೆಟ್ರೋ ಉದಾಹರಣೆ!

ಮುಂಬೈನ ಪ್ರಮುಖ ಹಸಿರು ಪ್ರದೇಶವಾಗಿರುವ ಆರೆ ಕಾಲೋನಿಯಲ್ಲಿ ಮೆಟ್ರೋ ಕಾರ್ ಶೆಡ್ ಗಾಗಿ ಮರಗಳನ್ನು ಕಡಿಯುವುದನ್ನು ಕೇಂದ್ರ ಪರಿಸರ ಖಾತೆ ಸಚಿವ ಪ್ರಕಾಶ್ ಜಾವ್ಡೇಕರ್  ಸಮರ್ಥಿಸಿದ್ದಾರೆ. 

ನವದೆಹಲಿ: ಮುಂಬೈನ ಪ್ರಮುಖ ಹಸಿರು ಪ್ರದೇಶವಾಗಿರುವ ಆರೆ ಕಾಲೋನಿಯಲ್ಲಿ ಮೆಟ್ರೋ ಕಾರ್ ಶೆಡ್ ಗಾಗಿ ಮರಗಳನ್ನು ಕಡಿಯುವುದನ್ನು ಕೇಂದ್ರ ಪರಿಸರ ಖಾತೆ ಸಚಿವ ಪ್ರಕಾಶ್ ಜಾವ್ಡೇಕರ್  ಸಮರ್ಥಿಸಿದ್ದಾರೆ. 

ಮರಗಳನ್ನು ಕಡಿಯುವುದನ್ನು ವಿರೋಧಿಸಿದ 29 ಪರಿಸರ ಕಾರ್ಯಕರ್ತರನ್ನು ಬಂಧಿಸಲಾಗಿದ್ದು, ಈ ಬೆನ್ನಲ್ಲೇ ಪ್ರಕಾಶ್ ಜಾವ್ಡೇಕರ್ ಪ್ರತಿಕ್ರಿಯೆ ನೀಡಿದ್ದಾರೆ. 

ದೆಹಲಿಯಲ್ಲಿ ಮೊದಲ ಮೆಟ್ರೋ ನಿಲ್ದಾಣ ನಿರ್ಮಾಣವಾದಾಗ 20-25 ಮರಗಳನ್ನು ಕತ್ತರಿಸಲಾಗಿತ್ತು. ಆಗಲೂ ಜನ ಪ್ರತಿಭಟನೆ ನಡೆಸಿದ್ದರು. ಇಂದು ಅದು ವಿಶ್ವದಲ್ಲೇ ಅತ್ಯುತ್ತಮ ಮೆಟ್ರೋ ಆಗಿದೆ. ಮೆಟ್ರೋ ಅಂದು ಕತ್ತರಿಸಿದ್ದ ಒಂದೊಂದು ಮರಕ್ಕೂ ಬದಲಾಗಿ 5 ಮರಗಳನ್ನು ಬೆಳೆಸಿದೆ. ಈಗ 271 ನಿಲ್ದಾಣಗಳಿವೆ. ಇಂದು 30 ಲಕ್ಷ ಜನರು ಮೆಟ್ರೋ ಬಳಸುತ್ತಿದ್ದಾರೆ. ಪರಿಸರ ಸಂರಕ್ಷಣೆ ಹಾಗೂ ಅಭಿವೃದ್ಧಿ ಎರಡೂ ಒಟ್ಟಿಗೆ ನಡೆಯಬೇಕು ಎಂದು ಪ್ರಕಾಶ್ ಜಾವ್ಡೇಕರ್ ಹೇಳಿದ್ದಾರೆ. 

ಕೆಲವು ಹಸಿರು ಕಾರ್ಯಕರ್ತರು ಈ ಪ್ರದೇಶದಲ್ಲಿ 2656 ಮರಗಳನ್ನು ಕಡಿಯುವ ಮುಂಬೈ ಮೆಟ್ರೋ ರೈಲು  ಕಾರ್ಪೊರೇಶನ್ ಲಿಮಿಟೆಡ್  ಕ್ರಮವನ್ನು ತಡೆಯಲು ಕೋರಿ ಹೊಸ ಅರ್ಜಿಯನ್ನು ಸಲ್ಲಿಸಿದ್ದರು. ಮುಂಬೈ ನಗರಾಡಳಿತವು ಮರ ಕಡಿಯಲು ಅನುಮತಿ ನೀಡಿತ್ತು.  ಮರಗಳನ್ನು ಕಡಿಯುವುದಕ್ಕೆ ತಡೆ ನೀಡಲು ಬಾಂಬೆ ಹೈಕೋರ್ಟ್ ಶನಿವಾರ ನಿರಾಕರಿಸಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT