ಸಾಂದರ್ಭಿಕ ಚಿತ್ರ 
ದೇಶ

ಪಾಕ್‌ನಿಂದ ಮತ್ತೊಮ್ಮೆ ಕದನ ವಿರಾಮ ಉಲ್ಲಂಘನೆ: ಕೂಲಿಕಾರ್ಮಿಕ ಸಾವು

ಉತ್ತರ ಕಾಶ್ಮೀರ ಜಿಲ್ಲೆಯ ಉರಿ ಪ್ರದೇಶದ ಹೊರ ಠಾಣೆಗಳನ್ನು ಗುರಿಯಾಗಿಸಿ ಪಾಕಿಸ್ತಾನ ಸೈನಿಕರು ಗುಂಡಿನ ದಾಳಿ ನಡೆಸಿದ ಪರಿಣಾಮ ಓರ್ವ ಕೂಲಿ ಕಾರ್ಮಿಕ ಸಾವನ್ನಪ್ಪಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ

ಬಾರಾಮುಲ್ಲಾ:  ಉತ್ತರ ಕಾಶ್ಮೀರ ಜಿಲ್ಲೆಯ ಉರಿ ಪ್ರದೇಶದ ಹೊರ ಠಾಣೆಗಳನ್ನು ಗುರಿಯಾಗಿಸಿ ಪಾಕಿಸ್ತಾನ ಸೈನಿಕರು ಗುಂಡಿನ ದಾಳಿ ನಡೆಸಿದ ಪರಿಣಾಮ ಓರ್ವ ಕೂಲಿ ಕಾರ್ಮಿಕ ಸಾವನ್ನಪ್ಪಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.ಪಾಕ್ ಸೈನಿಕರು ಶುಕ್ರವಾರ ಕದನ ವಿರಾಮ ಉಲ್ಲಂಘಿಸಿ ಅಪ್ರಚೋದಿತ ಗುಂಡಿನ ಮತ್ತು ಶೆಲ್‌ ದಾಳಿಗಳನ್ನು ನಡೆಸಿದ್ದಾರೆ ಎಂದು ಅವು ತಿಳಿಸಿವೆ.

ಕೂಲಿಕಾರ್ಮಿಕರು ಕಾಮಲ್‌ಕೋಟ್ ಪ್ರದೇಶದ ಹೊರ ಠಾಣೆಗಳಿಗೆ ಅಗತ್ಯ ಸಾಮಗ್ರಿಗಳನ್ನು ಕೊಂಡೊಯ್ಯುತ್ತಿದ್ದಾಗ ಪಾಕ್‌ ಸೈನಿಕರು ಸಿಡಿಸಿದ ಶೆಲ್‌ವೊಂದು ಸ್ಫೋಟಗೊಂಡ ಪರಿಣಾಮ ಓರ್ವ ಕೂಲಿ ಕಾರ್ಮಿಕ ಮೃತಪಟ್ಟಿದ್ದಾರೆ.

ಸ್ಫೋಟದಲ್ಲಿ ಇಬ್ಬರು ಸ್ಥಳೀಯ ಪೋರ್ಟರ್‌ಗಳು( ಕೂಲಿ ಕಾರ್ಮಿಕರು) ತೀವ್ರವಾಗಿ ಗಾಯಗೊಂಡಿದ್ದಾರೆ, ಗಾಯಗೊಂಡ ಇಬ್ಬರನ್ನು ಕೂಡಲೇ ಆಸ್ಪತ್ರೆಗೆ ಸಾಗಿಸಲಾಗಿದೆ, ಅವರ ಪೈಕಿ ಓರ್ವ ಕೂಲಿ ಕಾರ್ಮಿಕ ಇಶ್ತಾಯಾಕ್ ಅಹ್ಮದ್ ಎಂಬವರು ಮೃತಪಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಭಾರತೀಯ ಪಡೆಗಳು ಪ್ರತಿ ದಾಳಿ ನಡೆಸಿದ್ದು, ಗಡಿ ನಿಯಂತ್ರಣ ರೇಖೆಯಾದ್ಯಂತ ಪಾಕಿಸ್ತಾನದ ಹೊರ ಠಾಣೆಗಳನ್ನು ಗುರಿಯಾಗಿಸಿ ದಾಳಿ ನಡೆಸಿವೆ. ಆದಾಗ್ಯೂ. ಪಾಕಿಸ್ತಾನದ ಕಡೆಯಿಂದ ಉಂಟಾದ ಹಾನಿಯ ಬಗ್ಗೆ ತಕ್ಷಣ ತಿಳಿದುಬಂದಿಲ್ಲ ಎಂದು ಮೂಲಗಳು ತಿಳಿಸಿವೆ.

ಹಿಮಪಾತದಿಂದಾಗಿ ಒಳನುಸುಳುವಿಕೆ ಮಾರ್ಗಗಳು ಮುಚ್ಚುವ ಮೊದಲು ಲಾಂಚ್‌ಪ್ಯಾಡ್‌ನಲ್ಲಿರುವ ಉಗ್ರರು ಈ ಭಾಗಕ್ಕೆ ನುಸುಳಲು ನೆರವಾಗುವ ಉದ್ದೇಶದಿಂದ ಪಾಕಿಸ್ತಾನ ಪಡೆಗಳು 2003ರ ಕದನ ವಿರಾಮವನ್ನು ಉಲ್ಲಂಘಿಸುತ್ತಿವೆ ಎಂದು ರಕ್ಷಣಾ ವಕ್ತಾರರು ತಿಳಿಸಿದ್ದಾರೆ.

ಎಲ್‌ಒಸಿಯಲ್ಲಿ ಭದ್ರತೆಗೆ ನಿಯೋಜನೆಗೊಂಡಿರುವ ಸೈನಿಕರು ಈಗಾಗಲೇ ಮುನ್ನೆಚ್ಚರಿಕಾ ಕ್ರಮವಹಿಸಿದ್ದು, ಪಿಒಕೆ ಯಿಂದ ಯಾವುದೇ ಒಳನುಸುಳುವಿಕೆ ಪ್ರಯತ್ನವನ್ನು ವಿಫಲಗೊಳಿಸಲು ಸಂಪೂರ್ಣವಾಗಿ ಸಿದ್ಧರಾಗಿದ್ದಾರೆ, ಅಲ್ಲಿ ಹೆಚ್ಚಿನ ಸಂಖ್ಯೆಯ ತರಬೇತಿ ಪಡೆದ ಉಗ್ರರು ಲಾಂಚ್ ಪ್ಯಾಡ್‌ನಲ್ಲಿ ಕಾಯುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT