ಸಂಸತು 
ದೇಶ

ಅಧಿಕೃತ ಬಂಗಲೆ ತೆರವು ಮಾಡದ 50 ಮಾಜಿ ಸಂಸದರು 

ಹಿಂದಿನ ಲೋಕಸಭೆ ವಿಸರ್ಜನೆಯಾಗಿ 5 ತಿಂಗಳ ಕಳೆದರೂ 50 ಮಾಜಿ ಸಂಸದರು ಲುಟಿಯನ್ಸ್ ದೆಹಲಿಯಲ್ಲಿನ  ತಮ್ಮ ಅಧಿಕೃತ ಬಂಗಲೆಗಳನ್ನು ಇನ್ನೂ ತೆರವುಗೊಳಿಸಿಲ್ಲ

ನವದೆಹಲಿ: ಹಿಂದಿನ ಲೋಕಸಭೆ ವಿಸರ್ಜನೆಯಾಗಿ 5 ತಿಂಗಳ ಕಳೆದರೂ 50 ಮಾಜಿ ಸಂಸದರು ಲುಟಿಯನ್ಸ್ ದೆಹಲಿಯಲ್ಲಿನ  ತಮ್ಮ ಅಧಿಕೃತ ಬಂಗಲೆಗಳನ್ನು ಇನ್ನೂ ತೆರವುಗೊಳಿಸಿಲ್ಲ

ಸಾರ್ವಜನಿಕ ಅವರಣ ಅತಿಕ್ರಮಣ ಕಾಯ್ದೆಯಡಿಯಲ್ಲಿ  ತ್ವರತಿಗತಿಯಲ್ಲಿ ಹೊರಹಾಕಲು ಅವರ  ವಿರುದ್ಧ ಕ್ರಮಕ್ಕೆ ಸರ್ಕಾರ ಮುಂದಾಗಿದೆ ಎಂಬುದು ಮೂಲಗಳಿಂದ ತಿಳಿದುಬಂದಿದೆ. 

ಮೂರು ದಿನಗಳಲ್ಲಿ ಪ್ರತಿಕ್ರಿಯೆ ನೀಡುವಂತೆ ಬಂಗಲೆ ಖಾಲಿ ಮಾಡದ ಮಾಜಿ ಸಂಸದರಿಗೆ ಸರ್ಕಾರ ಶೋಕಾಸ್ ನೋಟಿಸ್ ನೀಡಿದೆ.  50 ಮಾಜಿ ಸಂಸದರು ತಮ್ಮ ಅಧಿಕೃತ ಬಂಗಲೆಗಳನ್ನು ಖಾಲಿ ಮಾಡಿಲ್ಲ. ಕೆಲ ದಿನಗಳಲ್ಲಿ ಬಂಗಲೆಗಳನ್ನು ತೆರವುಗೊಳಿಸದಿದ್ದಲ್ಲಿ ಬಲವಂತದಿಂದ ತೆರವುಗೊಳಿಸಬೇಕಾಗುತ್ತದೆ  ಎಂದು ಎಚ್ಚರಿಕೆ ನೀಡಲಾಗಿದೆ. 

200 ಮಾಜಿ ಸಂಸದರು ಒಂದು ವಾರದೊಳಗೆ ಬಂಗಲೆಗಳನ್ನು ಖಾಲಿ ಮಾಡದಿದ್ದಲ್ಲೀ ವಿದ್ಯುತ್, ನೀರು ಹಾಗೂ ಅನಿಲ ಪೂರೈಕೆ ಸರಬರಾಜನ್ನು ಸ್ಥಗಿತಗೊಳಿಸಲಾಗುವುದು ಎಂದು ಸಿಆರ್ ಪಾಟೀಲ್ ನೇತೃತ್ವದ ಲೋಕಸಭಾ ವಸತಿ ಸಮಿತಿ ಆಗಸ್ಟ್ 19 ರಂದು ಎಚ್ಚರಿಕೆ ನೀಡಿತ್ತು. ಈ ಎಚ್ಚರಿಕೆ ಹೊರತಾಗಿಯೂ ಬಹುತೇಕ ಸಂಸದರು ಬಂಗಲೆಗಳನ್ನು ತೆರವು ಮಾಡಿಲ್ಲ. 

ನಿಯಮಗಳ ಪ್ರಕಾರ ಹಿಂದಿನ ಲೋಕಸಭೆ ವಿಸರ್ಜನೆಗೊಂಡ ಒಂದು ತಿಂಗಳೊಳಗೆ ಮಾಜಿ ಸಂಸದರು ತಮ್ಮ ಅಧಿಕೃತ ನಿವಾಸಗಳನ್ನು ತೆರವುಗೊಳಿಸಬೇಕಾಗುತ್ತದೆ. ಮೋದಿ ನೇತೃತ್ವದಲ್ಲಿ ಸರ್ಕಾರ ಎರಡನೇ ಬಾರಿಗೆ ಅಸ್ತಿತ್ವಕ್ಕೆ ಬಂದ ನಂತರ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಮೇ 25 ರಂದು 16 ನೇ ಲೋಕಸಭೆಯನ್ನು ವಿಸರ್ಜಿಸಿದ್ದರು.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT