ದೇಶ

ವಿದೇಶಕ್ಕೆ ರಾಹುಲ್‌ ಪ್ರಯಾಣ: ಕೈ ನಾಯಕರ ಕಂಗಾಲು!

Manjula VN

ನವದೆಹಲಿ: ಹರಿಯಾಣ ಮತ್ತು ಮಹಾರಾಷ್ಟ್ರ ರಾಜ್ಯಗಳ ವಿಧಾನಸಭಾ ಚುನಾವಣೆಗೆ ಇನ್ನು ಕೆಲವೇ ದಿನ ಬಾಕಿಯಿರುವಾಗಲೇ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷ, ಯುವ ನಾಯಕ ರಾಹುಲ್‌ ಗಾಂಧಿ ಬ್ಯಾಂಕಾಕ್‌ಗೆ ಪ್ರವಾಸ ಹೊರಟಿರುವುದು ಕೈ ನಾಯಕರನ್ನು ಕಂಗಾಲಾಗುವಂತೆ ಮಾಡಿದೆ.!

ಎರಡೂ ರಾಜ್ಯಗಳಲ್ಲಿ ಪ್ರಮುಖ ನಾಯಕರ ನಡುವೆ ಭಿನ್ನಮತ ಹೆಚ್ಚಾಗುತ್ತಿರುವ ಕಾರಣ ರಾಹುಲ್‌ ವಿದೇಶಕ್ಕೆ ಹೊರಟಿದ್ದಾರೆ ಎಂಬ ಮಾತು ರಾಜಕೀಯ ವಲಯದಲ್ಲಿ ಹರಿದಾಡುತ್ತಿದೆ.

ಹರಿಯಾಣ ಕಾಂಗ್ರೆಸ್‌ ಘಟಕದ ಮಾಜಿ ಅಧ್ಯಕ್ಷ ಅಶೋಕ್‌ ತನ್ವಾರ್‌ ಪಕ್ಷಕ್ಕೆ ರಾಜೀನಾಮೆ ನೀಡಿರುವುದು ರಾಜಕೀಯವಾಗಿ ಬಹಳ ದೊಡ್ಡ ಹೊಡೆತ ಎನ್ನಲಾಗಿದೆ. ಇದಕ್ಕೆ ಪೂರಕ ಎಂಬಂತೆ ಮಹಾರಾಷ್ಟ್ರ ನಾಯಕ ಸಂಜಯ್‌ ನಿರುಪಮ್‌ ಸಹ ಚುನಾವಣಾ ಪ್ರಚಾರದಿಂದ ದೂರ ಉಳಿಯುವುದಾಗಿ ಬೆದರಿಕೆ ಹಾಕಿದ್ದರು. 

SCROLL FOR NEXT