ಶ್ರೀನಗರದಲ್ಲಿ ಮಾಜಿ ಸಿಎಂ ಫಾರೂಕ್ ಅಬ್ದುಲ್ಲಾ ಅವರನ್ನು ಭೇಟಿ ಮಾಡಿದ ನ್ಯಾಷನಲ್ ಕಾನ್ಫರೆನ್ಸ್ ನಿಯೋಗ 
ದೇಶ

2 ತಿಂಗಳ ಗೃಹ ಬಂಧನ ನಂತರ ಸಾರ್ವಜನಿಕರಿಗೆ ಫಾರೂಕ್ ಅಬ್ದುಲ್ಲಾ ದರ್ಶನ; ನ್ಯಾಷನಲ್ ಕಾನ್ಫರೆನ್ಸ್ ನಿಯೋಗ ಭೇಟಿ 

ಜಮ್ಮು-ಕಾಶ್ಮೀರ ಮಾಜಿ ಮುಖ್ಯಮಂತ್ರಿ ಮತ್ತು ನ್ಯಾಷನಲ್ ಕಾನ್ಫರೆನ್ಸ್ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರನ್ನು ಮತ್ತು ಅವರ ಪತ್ನಿ ಮೊಲ್ಲಿಯವರನ್ನು ಶ್ರೀನಗರದಲ್ಲಿ ಭಾನುವಾರ ಅವರ ನಿವಾಸದಲ್ಲಿ ನ್ಯಾಷನಲ್ ಕಾನ್ಫರೆನ್ಸ್ ನಾಯಕರಾದ ಹಸ್ನೈನ್ ಮಸೂದಿ ಮತ್ತು ಅಕ್ಬರ್ ಲೊನೆ ಭೇಟಿ ಮಾಡಿದರು. 

ಶ್ರೀನಗರ: ಜಮ್ಮು-ಕಾಶ್ಮೀರ ಮಾಜಿ ಮುಖ್ಯಮಂತ್ರಿ ಮತ್ತು ನ್ಯಾಷನಲ್ ಕಾನ್ಫರೆನ್ಸ್ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರನ್ನು ಮತ್ತು ಅವರ ಪತ್ನಿ ಮೊಲ್ಲಿಯವರನ್ನು ಶ್ರೀನಗರದಲ್ಲಿ ಭಾನುವಾರ ಅವರ ನಿವಾಸದಲ್ಲಿ ನ್ಯಾಷನಲ್ ಕಾನ್ಫರೆನ್ಸ್ ನಾಯಕರಾದ ಹಸ್ನೈನ್ ಮಸೂದಿ ಮತ್ತು ಅಕ್ಬರ್ ಲೊನೆ ಭೇಟಿ ಮಾಡಿದರು.


ನಿನ್ನೆ ಜಮ್ಮು ಜಿಲ್ಲಾಡಳಿತ ಫಾರೂಕ್ ಅಬ್ದುಲ್ಲಾ ಅವರನ್ನು ಭೇಟಿ ಮಾಡಲು ಅವಕಾಶ ಕಲ್ಪಿಸಿತ್ತು. ಇದರಿಂದಾಗಿ ಜಮ್ಮುವಿನಿಂದ ಪಕ್ಷದ ನಿಯೋಗ ಹೊರಟು ಇಂದು ಫಾರೂಕ್ ಮತ್ತು ಅವರ ಪುತ್ರ ಒಮರ್ ಅಬ್ದುಲ್ಲಾ ಅವರನ್ನು ಭೇಟಿ ಮಾಡಿದರು.


ನಿಯೋಗದಲ್ಲಿ ಪ್ರಾಂತೀಯ ಅಧ್ಯಕ್ಷ ದೇವೇಂದರ್ ಸಿಂಗ್ ರಾಣಾ ಮತ್ತು ಪಕ್ಷದ ಮಾಜಿ ಶಾಸಕರುಗಳು ಇಂದು ಬೆಳಗ್ಗೆ ಫಾರೂಕ್ ಅಬ್ದುಲ್ಲಾ ಅವರನ್ನು ಭೇಟಿ ಮಾಡಿದ್ದಾರೆ ಎಂದು ಪಕ್ಷದ ವಕ್ತಾರ ಮದನ್ ಮಂಟೂ ತಿಳಿಸಿದ್ದಾರೆ. ಭೇಟಿಗೆ ರಾಜ್ಯಪಾಲ ಸತ್ಯಪಾಲ್ ಮಲಿಕ್ ಅವರಿಂದ ಅನುಮತಿ ಪಡೆದಿದ್ದರು.


81 ವರ್ಷದ ಫಾರೂಕ್ ಅಬ್ದುಲ್ಲಾ ಅವರನ್ನು ಪಿಎಸ್ಎಯಡಿ ಶ್ರೀನಗರದಲ್ಲಿ ಗೃಹ ಬಂಧನದಲ್ಲಿರಿಸಲಾಗಿದ್ದು ಅವರ ಪುತ್ರ ಒಮರ್ ನನ್ನು ರಾಜ್ಯ ಅತಿಥಿಗೃಹದಲ್ಲಿ ವಶದಲ್ಲಿಡಲಾಗಿದೆ. ಕಳೆದ ಆಗಸ್ಟ್ 5ರಂದು ಕೇಂದ್ರ ಸರ್ಕಾರ ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ತೆಗೆದುಹಾಕಿದ ನಂತರ ಜಮ್ಮು-ಕಾಶ್ಮೀರದ ಪ್ರಮುಖ ನಾಯಕರನ್ನು ಗೃಹ ಬಂಧನದಲ್ಲಿರಿಸಲಾಗಿದೆ. 


ಮಾಜಿ ಸಿಎಂ ಮೆಹಬೂಬ ಮುಫ್ತಿ ಮತ್ತು ಕಾಶ್ಮೀರ ಪೀಪಲ್ಸ್ ಕಾನ್ಫರೆನ್ಸ್ ಅಧ್ಯಕ್ಷ ಸಜ್ಜದ್ ಲೊನೆ ಕೂಡ ಗೃಹ ಬಂಧನದಲ್ಲಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT