ರಾಜನಾಥ್ ಸಿಂಗ್ 
ದೇಶ

ನಾಳೆ ಭಾರತಕ್ಕೆ ರಫೇಲ್ ಯುದ್ಧ ವಿಮಾನ: ಫ್ರಾನ್ಸ್'ನಲ್ಲೇ ರಕ್ಷಣಾ ಸಚಿವರಿಂದ ಆಯುಧ ಪೂಜೆ

ಬಹುನಿರೀಕ್ಷಿತ ರಫೇಲ್ ಯುದ್ಧ ವಿಮಾನ ಭಾರತಕ್ಕೆ ವಿಜಯದಶಮಿ ದಿನವಾದ ಮಂಗಳವಾರ ಹಸ್ತಾಂತರಗೊಳ್ಳಲಿದ್ದು, ಈ ಬಾರಿ ಫ್ರಾನ್ಸ್ ನಲ್ಲೇ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಆಯುಧಪೂಜೆಯನ್ನು ನೆರವೇರಿಸಲಿದ್ದಾರೆ.

ನವದೆಹಲಿ: ಬಹುನಿರೀಕ್ಷಿತ ರಫೇಲ್ ಯುದ್ಧ ವಿಮಾನ ಭಾರತಕ್ಕೆ ವಿಜಯದಶಮಿ ದಿನವಾದ ಮಂಗಳವಾರ ಹಸ್ತಾಂತರಗೊಳ್ಳಲಿದ್ದು, ಈ ಬಾರಿ ಫ್ರಾನ್ಸ್ ನಲ್ಲೇ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಆಯುಧಪೂಜೆಯನ್ನು ನೆರವೇರಿಸಲಿದ್ದಾರೆ. 

ದಸರಾ ಶಸ್ತ್ರಪೂಜೆಗೆ ಹೆಸರಾಗಿದ್ದು, ರಕ್ಷಣಾ ಸಚಿವರು ವಿಜಯದಶಮಿಯ ದಿನವಾದ ನಾಳೆ ಆಯುಧ ಪೂಜೆಯನ್ನು ನೆರವೇರಿಸಲಿದ್ದಾರೆ. 

ರಫೇಲ್ ಯುದ್ಧವಿಮಾನವನ್ನು ಸ್ವೀಕರಿಸುವ ರಾಜನಾಥ್ ಸಿಂಗ್ ಅವರು ಆಯುಧಪೂಜೆಯನ್ನೂ ಮಾಡಲಿದ್ದಾರೆ. ಈ ಹಿಂದೆ ಗೃಹ ಸಚಿವರಾಗಿದ್ದ ವೇಳೆಯೂ ಆಯುಧ ಪೂಜೆ ಮಾಡುತ್ತಿದ್ದರು. ಈ ಬಾರಿ ಫ್ರಾನ್ಸ್'ನಲ್ಲಿದ್ದರೂ ಸಂಪ್ರದಾಯವನ್ನು ಮುಂದುವರೆಸಲಿದ್ದಾರೆ. 

ವಿಮಾನ ಸ್ವೀಕರಿಸಿದ ಬಳಿಕ ರಫೇಲ್ ನಲ್ಲಿಯೇ ರಾಜನಾಥ್ ಅವರು ಹಾರಾಟ ನಡೆಸಲಿದ್ದಾರೆ. ಫ್ರೆಂಚ್ ಪೈಲಟ್ ಒಬ್ಬರು ರಾಜನಾಥ್ ಅವರನ್ನು ಹಿಂದಿನ ಸೀಟಿನಲ್ಲಿ ಕೂರಿಸಿ ರಫೇಲ್ ಹಾರಿಸಲಿದ್ದಾರೆ. ಭಾರತಕ್ಕೆ ರಷ್ಯಾ 36 ರಫೇಲ್ ಗಳನ್ನು ಹಸ್ತಾಂತರಿಸಬೇಕಿದ್ದು, ಮುಂದಿನ ದಿನಗಳಲ್ಲಿ ಬಾಕಿ 35 ವಿಮಾನಗಳನ್ನು ರವಾನೆಯಾಗಲಿವೆ. 

ಅಕ್ಟೋಬರ್ 8ರಂದು ರಾಜನಾಥ್ ಫ್ರಾನ್ಸ್ ತಲುಪಲಿದ್ದು, ಆ ದಿನ ದಸರೆಯ ದಿನ ಹಾಗೂ ಭಾರತೀಯ ವಾಯುಪಡೆಯ ದಿನವೂ ಆಗಲಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT