ಸಂಗ್ರಹ ಚಿತ್ರ 
ದೇಶ

ಕಾಶ್ಮೀರದಲ್ಲಿ ಪೊಲೀಸರ ಮಾರಣಹೋಮಕ್ಕೆ ಭಾರೀ ಸಂಚು: ಒಗ್ಗೂಡಿದ ಪಾಕ್ ಬೆಂಬಲಿತ 3 ಉಗ್ರ ಸಂಘಟನೆಗಳು!

ಕಾಶ್ಮೀರದಲ್ಲಿ ಪೊಲೀಸರ ಮಾರಣಹೋಮಕ್ಕೆ ಭಾರೀ ಸಂಚು ರೂಪಿಸಿಸುವ ಪಾಕಿಸ್ತಾನ, ವಿಧ್ವಂಸಕ ಕೃತ್ಯಕ್ಕೆ ವೆಸಗಲು ಮೂರು ಉಗ್ರ ಸಂಘಟನೆಗಳಿಗೆ ಜವಾಬ್ದಾರಿಗಳನ್ನು ನೀಡಿದೆ ಎಂದು ಮೂಲಗಳಿಂದ ತಿಳಿದುಬಂದಿದೆ. 

ನವದೆಹಲಿ: ಕಾಶ್ಮೀರದಲ್ಲಿ ಪೊಲೀಸರ ಮಾರಣಹೋಮಕ್ಕೆ ಭಾರೀ ಸಂಚು ರೂಪಿಸಿಸುವ ಪಾಕಿಸ್ತಾನ, ವಿಧ್ವಂಸಕ ಕೃತ್ಯಕ್ಕೆ ವೆಸಗಲು ಮೂರು ಉಗ್ರ ಸಂಘಟನೆಗಳಿಗೆ ಜವಾಬ್ದಾರಿಗಳನ್ನು ನೀಡಿದೆ ಎಂದು ಮೂಲಗಳಿಂದ ತಿಳಿದುಬಂದಿದೆ. 

ಕಾಶ್ಮೀರದಲ್ಲಿ ವಿಧ್ವಸಂಕ ಕೃತ್ಯವೆಸಗಲು ಪಾಕಿಸ್ತಾನ ಸೇನೆ ಹಾಗೂ ಐಎಸ್ಐ ಬೆಂಬಲಿತ ಮೂರು ಉಗ್ರ ಸಂಘಟನೆಗಳಾದ ಲಷ್ಕರ್-ಇ-ತೊಯ್ಬಾ, ಹಿಜ್ಬುಲ್ ಮುಜಾಹಿದ್ದೀನ್ ಹಾಗೂ ಜೈಷ್-ಇ-ಮೊಹಮ್ಮದ್ ಉಗ್ರ ಸಂಘಟನೆಗಳು ಒಗ್ಗೂಡಿದ್ದು, ಭಾರೀ ಸಂಚು ರೂಪಿಸಿವೆ ಎಂದು ವರದಿಗಳು ತಿಳಿಸಿವೆ. 

ಕಾಶ್ಮೀರದಲ್ಲಿ ಪೊಲೀಸರನ್ನು ಹತ್ಯೆ ಮಾಡುವ ಸಂಬಂಧ ಈಗಾಗಲೇ ಹೊಂಚು ಹಾಕಿರುವ ಮೂರು ಉಗ್ರ ಸಂಘಟನೆಗಳು ಕಳೆದ ವಾರ ಪುಲ್ವಾಮದಲ್ಲಿ ರಹಸ್ಯ ಸಭೆ ನಡೆಸಿದೆ. ಸಭೆಯಲ್ಲಿ ದಾಳಿ ಕುರಿತು ಮೂರು ಸಂಘಟನೆಗಳು ಜವಾಬ್ದಾರಿಗಳನ್ನು ಹೊತ್ತುಕೊಂಡಿವೆ ಎಂದು ಹೇಳಲಾಗುತ್ತಿದೆ. 

ಉಗ್ರರ ಸಂಘಟನೆಗಳು ಒಗ್ಗೂಡಿ ಭಾರೀ ಸಂಚು ರೂಪಿಸಿರುವ ಹಿನ್ನಲೆಯಲ್ಲಿ ಕಾಶ್ಮೀರದಲ್ಲಿ ಭಾರೀ ಕಟ್ಟೆಚ್ಚರದಿಂದ ಇರುವಂತೆ ಗುಪ್ತಚರ ಇಲಾಖೆ ಮಾಹಿತಿ ನೀಡಿದೆ ಎಂದು ವರದಿಗಳು ತಿಳಿಸಿವೆ. 

ಕಾಶ್ಮೀರದ ರಾಷ್ಟ್ರೀಯ ಹೆದ್ದಾರಿಯಲ್ಲಿ ದಾಳಿ ನಡೆಸಲು ಜೈಷ್-ಇ-ಮೊಹಮ್ಮದ್ ಉಗ್ರ ಸಂಘಟನೆಗೆ ಜವಾಬ್ದಾರಿ ನೀಡಲಾಗಿದ್ದು, ಆಂತರಿಕ ಭದ್ರತೆ ನಾಶಪಡಿಸಲು ಎಲ್ಇಟಿಗೆ ಜವಾಬ್ದಾರಿ ನೀಡಲಾಗಿದೆ. ಇದರಂತೆ ಪೊಲೀಸರು ಹಾಗೂ ರಾಜಕೀಯ ನಾಯಕರ ಹತ್ಯೆಗೆ ಹಿಜ್ಬುಲ್ ಮುಜಾಹಿದ್ದೀನ್'ಗೆ ಜವಾಬ್ದಾರಿ ನೀಡಲಾಗಿದೆ. ಇದಲ್ಲದೆ, ಜನ ಜೀವನ ಅಸ್ತವ್ಯಸ್ತಗೊಳ್ಳುವಂತೆ ಮಾಡಲು ಹಿಜ್ಬುಲ್ಗೆ ಜವಾಬ್ದಾರಿ ನೀಡಲಾಗಿದೆ. ಕಾಶ್ಮೀರದಲ್ಲಿ ಯಾವುದೇ ಧನಾತ್ಮಕ ಬೆಳವಣಿಗೆಗಳು ಕಂಡು ಬಂದ ಕೂಡಲೇ ದಾಳಿ ನಡೆಸಲುವಂತೆ ಸೂಚಿಸಲಾಗಿದೆ ಎಂದು ಹೇಳಲಾಗುತ್ತಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?