ಸಂಗ್ರಹ ಚಿತ್ರ 
ದೇಶ

ಕಾಶ್ಮೀರದಲ್ಲಿ ಪೊಲೀಸರ ಮಾರಣಹೋಮಕ್ಕೆ ಭಾರೀ ಸಂಚು: ಒಗ್ಗೂಡಿದ ಪಾಕ್ ಬೆಂಬಲಿತ 3 ಉಗ್ರ ಸಂಘಟನೆಗಳು!

ಕಾಶ್ಮೀರದಲ್ಲಿ ಪೊಲೀಸರ ಮಾರಣಹೋಮಕ್ಕೆ ಭಾರೀ ಸಂಚು ರೂಪಿಸಿಸುವ ಪಾಕಿಸ್ತಾನ, ವಿಧ್ವಂಸಕ ಕೃತ್ಯಕ್ಕೆ ವೆಸಗಲು ಮೂರು ಉಗ್ರ ಸಂಘಟನೆಗಳಿಗೆ ಜವಾಬ್ದಾರಿಗಳನ್ನು ನೀಡಿದೆ ಎಂದು ಮೂಲಗಳಿಂದ ತಿಳಿದುಬಂದಿದೆ. 

ನವದೆಹಲಿ: ಕಾಶ್ಮೀರದಲ್ಲಿ ಪೊಲೀಸರ ಮಾರಣಹೋಮಕ್ಕೆ ಭಾರೀ ಸಂಚು ರೂಪಿಸಿಸುವ ಪಾಕಿಸ್ತಾನ, ವಿಧ್ವಂಸಕ ಕೃತ್ಯಕ್ಕೆ ವೆಸಗಲು ಮೂರು ಉಗ್ರ ಸಂಘಟನೆಗಳಿಗೆ ಜವಾಬ್ದಾರಿಗಳನ್ನು ನೀಡಿದೆ ಎಂದು ಮೂಲಗಳಿಂದ ತಿಳಿದುಬಂದಿದೆ. 

ಕಾಶ್ಮೀರದಲ್ಲಿ ವಿಧ್ವಸಂಕ ಕೃತ್ಯವೆಸಗಲು ಪಾಕಿಸ್ತಾನ ಸೇನೆ ಹಾಗೂ ಐಎಸ್ಐ ಬೆಂಬಲಿತ ಮೂರು ಉಗ್ರ ಸಂಘಟನೆಗಳಾದ ಲಷ್ಕರ್-ಇ-ತೊಯ್ಬಾ, ಹಿಜ್ಬುಲ್ ಮುಜಾಹಿದ್ದೀನ್ ಹಾಗೂ ಜೈಷ್-ಇ-ಮೊಹಮ್ಮದ್ ಉಗ್ರ ಸಂಘಟನೆಗಳು ಒಗ್ಗೂಡಿದ್ದು, ಭಾರೀ ಸಂಚು ರೂಪಿಸಿವೆ ಎಂದು ವರದಿಗಳು ತಿಳಿಸಿವೆ. 

ಕಾಶ್ಮೀರದಲ್ಲಿ ಪೊಲೀಸರನ್ನು ಹತ್ಯೆ ಮಾಡುವ ಸಂಬಂಧ ಈಗಾಗಲೇ ಹೊಂಚು ಹಾಕಿರುವ ಮೂರು ಉಗ್ರ ಸಂಘಟನೆಗಳು ಕಳೆದ ವಾರ ಪುಲ್ವಾಮದಲ್ಲಿ ರಹಸ್ಯ ಸಭೆ ನಡೆಸಿದೆ. ಸಭೆಯಲ್ಲಿ ದಾಳಿ ಕುರಿತು ಮೂರು ಸಂಘಟನೆಗಳು ಜವಾಬ್ದಾರಿಗಳನ್ನು ಹೊತ್ತುಕೊಂಡಿವೆ ಎಂದು ಹೇಳಲಾಗುತ್ತಿದೆ. 

ಉಗ್ರರ ಸಂಘಟನೆಗಳು ಒಗ್ಗೂಡಿ ಭಾರೀ ಸಂಚು ರೂಪಿಸಿರುವ ಹಿನ್ನಲೆಯಲ್ಲಿ ಕಾಶ್ಮೀರದಲ್ಲಿ ಭಾರೀ ಕಟ್ಟೆಚ್ಚರದಿಂದ ಇರುವಂತೆ ಗುಪ್ತಚರ ಇಲಾಖೆ ಮಾಹಿತಿ ನೀಡಿದೆ ಎಂದು ವರದಿಗಳು ತಿಳಿಸಿವೆ. 

ಕಾಶ್ಮೀರದ ರಾಷ್ಟ್ರೀಯ ಹೆದ್ದಾರಿಯಲ್ಲಿ ದಾಳಿ ನಡೆಸಲು ಜೈಷ್-ಇ-ಮೊಹಮ್ಮದ್ ಉಗ್ರ ಸಂಘಟನೆಗೆ ಜವಾಬ್ದಾರಿ ನೀಡಲಾಗಿದ್ದು, ಆಂತರಿಕ ಭದ್ರತೆ ನಾಶಪಡಿಸಲು ಎಲ್ಇಟಿಗೆ ಜವಾಬ್ದಾರಿ ನೀಡಲಾಗಿದೆ. ಇದರಂತೆ ಪೊಲೀಸರು ಹಾಗೂ ರಾಜಕೀಯ ನಾಯಕರ ಹತ್ಯೆಗೆ ಹಿಜ್ಬುಲ್ ಮುಜಾಹಿದ್ದೀನ್'ಗೆ ಜವಾಬ್ದಾರಿ ನೀಡಲಾಗಿದೆ. ಇದಲ್ಲದೆ, ಜನ ಜೀವನ ಅಸ್ತವ್ಯಸ್ತಗೊಳ್ಳುವಂತೆ ಮಾಡಲು ಹಿಜ್ಬುಲ್ಗೆ ಜವಾಬ್ದಾರಿ ನೀಡಲಾಗಿದೆ. ಕಾಶ್ಮೀರದಲ್ಲಿ ಯಾವುದೇ ಧನಾತ್ಮಕ ಬೆಳವಣಿಗೆಗಳು ಕಂಡು ಬಂದ ಕೂಡಲೇ ದಾಳಿ ನಡೆಸಲುವಂತೆ ಸೂಚಿಸಲಾಗಿದೆ ಎಂದು ಹೇಳಲಾಗುತ್ತಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT