ಸಂಗ್ರಹ ಚಿತ್ರ 
ದೇಶ

ಕಾಶ್ಮೀರದಲ್ಲಿ ಪೊಲೀಸರ ಮಾರಣಹೋಮಕ್ಕೆ ಭಾರೀ ಸಂಚು: ಒಗ್ಗೂಡಿದ ಪಾಕ್ ಬೆಂಬಲಿತ 3 ಉಗ್ರ ಸಂಘಟನೆಗಳು!

ಕಾಶ್ಮೀರದಲ್ಲಿ ಪೊಲೀಸರ ಮಾರಣಹೋಮಕ್ಕೆ ಭಾರೀ ಸಂಚು ರೂಪಿಸಿಸುವ ಪಾಕಿಸ್ತಾನ, ವಿಧ್ವಂಸಕ ಕೃತ್ಯಕ್ಕೆ ವೆಸಗಲು ಮೂರು ಉಗ್ರ ಸಂಘಟನೆಗಳಿಗೆ ಜವಾಬ್ದಾರಿಗಳನ್ನು ನೀಡಿದೆ ಎಂದು ಮೂಲಗಳಿಂದ ತಿಳಿದುಬಂದಿದೆ. 

ನವದೆಹಲಿ: ಕಾಶ್ಮೀರದಲ್ಲಿ ಪೊಲೀಸರ ಮಾರಣಹೋಮಕ್ಕೆ ಭಾರೀ ಸಂಚು ರೂಪಿಸಿಸುವ ಪಾಕಿಸ್ತಾನ, ವಿಧ್ವಂಸಕ ಕೃತ್ಯಕ್ಕೆ ವೆಸಗಲು ಮೂರು ಉಗ್ರ ಸಂಘಟನೆಗಳಿಗೆ ಜವಾಬ್ದಾರಿಗಳನ್ನು ನೀಡಿದೆ ಎಂದು ಮೂಲಗಳಿಂದ ತಿಳಿದುಬಂದಿದೆ. 

ಕಾಶ್ಮೀರದಲ್ಲಿ ವಿಧ್ವಸಂಕ ಕೃತ್ಯವೆಸಗಲು ಪಾಕಿಸ್ತಾನ ಸೇನೆ ಹಾಗೂ ಐಎಸ್ಐ ಬೆಂಬಲಿತ ಮೂರು ಉಗ್ರ ಸಂಘಟನೆಗಳಾದ ಲಷ್ಕರ್-ಇ-ತೊಯ್ಬಾ, ಹಿಜ್ಬುಲ್ ಮುಜಾಹಿದ್ದೀನ್ ಹಾಗೂ ಜೈಷ್-ಇ-ಮೊಹಮ್ಮದ್ ಉಗ್ರ ಸಂಘಟನೆಗಳು ಒಗ್ಗೂಡಿದ್ದು, ಭಾರೀ ಸಂಚು ರೂಪಿಸಿವೆ ಎಂದು ವರದಿಗಳು ತಿಳಿಸಿವೆ. 

ಕಾಶ್ಮೀರದಲ್ಲಿ ಪೊಲೀಸರನ್ನು ಹತ್ಯೆ ಮಾಡುವ ಸಂಬಂಧ ಈಗಾಗಲೇ ಹೊಂಚು ಹಾಕಿರುವ ಮೂರು ಉಗ್ರ ಸಂಘಟನೆಗಳು ಕಳೆದ ವಾರ ಪುಲ್ವಾಮದಲ್ಲಿ ರಹಸ್ಯ ಸಭೆ ನಡೆಸಿದೆ. ಸಭೆಯಲ್ಲಿ ದಾಳಿ ಕುರಿತು ಮೂರು ಸಂಘಟನೆಗಳು ಜವಾಬ್ದಾರಿಗಳನ್ನು ಹೊತ್ತುಕೊಂಡಿವೆ ಎಂದು ಹೇಳಲಾಗುತ್ತಿದೆ. 

ಉಗ್ರರ ಸಂಘಟನೆಗಳು ಒಗ್ಗೂಡಿ ಭಾರೀ ಸಂಚು ರೂಪಿಸಿರುವ ಹಿನ್ನಲೆಯಲ್ಲಿ ಕಾಶ್ಮೀರದಲ್ಲಿ ಭಾರೀ ಕಟ್ಟೆಚ್ಚರದಿಂದ ಇರುವಂತೆ ಗುಪ್ತಚರ ಇಲಾಖೆ ಮಾಹಿತಿ ನೀಡಿದೆ ಎಂದು ವರದಿಗಳು ತಿಳಿಸಿವೆ. 

ಕಾಶ್ಮೀರದ ರಾಷ್ಟ್ರೀಯ ಹೆದ್ದಾರಿಯಲ್ಲಿ ದಾಳಿ ನಡೆಸಲು ಜೈಷ್-ಇ-ಮೊಹಮ್ಮದ್ ಉಗ್ರ ಸಂಘಟನೆಗೆ ಜವಾಬ್ದಾರಿ ನೀಡಲಾಗಿದ್ದು, ಆಂತರಿಕ ಭದ್ರತೆ ನಾಶಪಡಿಸಲು ಎಲ್ಇಟಿಗೆ ಜವಾಬ್ದಾರಿ ನೀಡಲಾಗಿದೆ. ಇದರಂತೆ ಪೊಲೀಸರು ಹಾಗೂ ರಾಜಕೀಯ ನಾಯಕರ ಹತ್ಯೆಗೆ ಹಿಜ್ಬುಲ್ ಮುಜಾಹಿದ್ದೀನ್'ಗೆ ಜವಾಬ್ದಾರಿ ನೀಡಲಾಗಿದೆ. ಇದಲ್ಲದೆ, ಜನ ಜೀವನ ಅಸ್ತವ್ಯಸ್ತಗೊಳ್ಳುವಂತೆ ಮಾಡಲು ಹಿಜ್ಬುಲ್ಗೆ ಜವಾಬ್ದಾರಿ ನೀಡಲಾಗಿದೆ. ಕಾಶ್ಮೀರದಲ್ಲಿ ಯಾವುದೇ ಧನಾತ್ಮಕ ಬೆಳವಣಿಗೆಗಳು ಕಂಡು ಬಂದ ಕೂಡಲೇ ದಾಳಿ ನಡೆಸಲುವಂತೆ ಸೂಚಿಸಲಾಗಿದೆ ಎಂದು ಹೇಳಲಾಗುತ್ತಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

ಪಕ್ಷದ ಮೇಲೆ ನನಗೆ ನಂಬಿಕೆ ಇದೆ: ದುಡ್ಡು- ಬ್ಲಡ್ ನಿರಂತರ ಚಲನೆಯಲ್ಲಿ ಇರಬೇಕು; ಅಕ್ಕಪಕ್ಕದಲ್ಲಿ ಇರುವವರೇ ಮೋಸ ಮಾಡುತ್ತಾರೆ, ಎಚ್ಚರ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT