ಒಕ್ಕೂಟ ನೌಕರರ ಪ್ರತಿಭಟನೆ 
ದೇಶ

ತೆಲಂಗಾಣದಲ್ಲಿ ರಾಜ್ಯ ಸಾರಿಗೆ ನಿಗಮ ನೌಕರರ ವಜಾ: ಒಕ್ಕೂಟ, ಬಿಜೆಪಿಯಿಂದ ವ್ಯಾಪಕ ಖಂಡನೆ 

ಸರ್ಕಾರ ನಿಗದಿಪಡಿಸಿದ ಅವಧಿಯೊಳಗೆ ಕರ್ತವ್ಯಕ್ಕೆ ಹಾಜರಾಗದೆ ಮುಷ್ಕರದಲ್ಲಿ ನಿರತರಾಗಿದ್ದ ಸಿಬ್ಬಂದಿಯನ್ನು ಸೇವೆಯಿಂದ ವಜಾಗೊಳಿಸುವ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ನೇತೃತ್ವದ ಸರ್ಕಾರದ ನಿರ್ಧಾರವನ್ನು ಸೋಮವಾರ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮ(ಟಿಎಸ್ಆರ್ ಟಿಸಿ) ನೌಕರರ ಒಕ್ಕೂಟ ಮತ್ತು ಬಿಜೆಪಿ ಖಂಡಿಸಿವೆ. 

ಹೈದರಾಬಾದ್(ತೆಲಂಗಾಣ): ಸರ್ಕಾರ ನಿಗದಿಪಡಿಸಿದ ಅವಧಿಯೊಳಗೆ ಕರ್ತವ್ಯಕ್ಕೆ ಹಾಜರಾಗದೆ ಮುಷ್ಕರದಲ್ಲಿ ನಿರತರಾಗಿದ್ದ ಸಿಬ್ಬಂದಿಯನ್ನು ಸೇವೆಯಿಂದ ವಜಾಗೊಳಿಸುವ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ನೇತೃತ್ವದ ಸರ್ಕಾರದ ನಿರ್ಧಾರವನ್ನು ಸೋಮವಾರ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮ(ಟಿಎಸ್ಆರ್ ಟಿಸಿ) ನೌಕರರ ಒಕ್ಕೂಟ ಮತ್ತು ಬಿಜೆಪಿ ಖಂಡಿಸಿವೆ.


ಟಿಎಸ್ಆರ್ ಟಿಸಿ ನೌಕರರ ಒಕ್ಕೂಟದ ಹೈದರಾಬಾದ್-ಗ್ರೇಟರ್ ಹೈದರಾಬಾದ್ ವಲಯ ಕಾರ್ಯದರ್ಶಿ ರಾಘವಲು ಮುಖ್ಯಮಂತ್ರಿಯ ತೀರ್ಮಾನವನ್ನು ಖಂಡಿಸಿದ್ದಾರೆ. ಸುಮಾರು 50 ಸಾವಿರ ನೌಕರರನ್ನು ಸೇವೆಯಿಂದ ತೆಗೆದುಹಾಕುವ ಮುಖ್ಯಮಂತ್ರಿಯವರ ನಿರ್ಧಾರವನ್ನು ನಾವು ವಿರೋಧಿಸುತ್ತೇವೆ, ಇದು ಅನ್ಯಾಯವಾಗಿದ್ದು ಕಾನೂನಿಗೆ ವಿರುದ್ಧವಾದ ಕ್ರಮ ಎಂದು ಹೇಳಿದರು.


ಮೊನ್ನೆ ಸೆಪ್ಟೆಂಬರ್ 3ರಂದು ಆರ್ ಟಿಸಿ ವ್ಯವಸ್ಥಾಪಕರಿಗೆ ನಾವು 26 ಅಂಶಗಳ ಮನವಿಯನ್ನು ಸಲ್ಲಿಸಿದ್ದೇವೆ. ಆದರೆ ಈ ಬಗ್ಗೆ ನಮ್ಮಲ್ಲಿ ಇದುವರೆಗೆ ಯಾರೂ ಸರ್ಕಾರದ ಕಡೆಯವರು ಚರ್ಚೆ ನಡೆಸಿಲ್ಲ ಎಂದರು.


ಸರ್ಕಾರಿ ನೌಕರರನ್ನು ವಜಾಗೊಳಿಸಿ ರಾಜ್ಯ ರಸ್ತೆ ಸಾರಿಗೆ ನಿಗಮವನ್ನು ಖಾಸಗೀಕರಣಗೊಳಿಸಲು ಮುಖ್ಯಮಂತ್ರಿಗಳು ಪ್ರಯತ್ನಿಸುತ್ತಿದ್ದಾರೆ. ಸರ್ಕಾರ ಹೊಸ ನೌಕರರನ್ನು ನೇಮಕ ಮಾಡುತ್ತದೆ. ನಾವು ಹಳೆ ನೌಕರರು ಜೀವನೋಪಾಯಕ್ಕೆ ಏನು ಮಾಡಬೇಕು, ನಮ್ಮ ಮಕ್ಕಳ ಭವಿಷ್ಯವೇನು ಎಂದು ಆರ್ ಟಿಸಿ ನೌಕರರ ವಲಯ ಪ್ರಚಾರ ಕಾರ್ಯದರ್ಶಿ ಮೊಹಮ್ಮದ್ ಆಜೀಜ್ ಹೇಳಿದ್ದಾರೆ.


ರಾಜ್ಯ ಬಿಜೆಪಿ ಕೂಡ ಸರ್ಕಾರದ ನಡೆಯನ್ನು ಖಂಡಿಸಿದ್ದು ಸರ್ಕಾರದ ನಿರ್ಧಾರವನ್ನು ಜಾರಿಗೆ ತರಲು ಬಿಡುವುದಿಲ್ಲ ಎಂದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್, ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

ಲೆಬನಾನ್ ನಲ್ಲಿ ಇಸ್ರೇಲ್ ಆರ್ಭಟ: ಮನೆಗಳ ಮೇಲೆ ಸ್ಫೋಟಕಗಳಿಂದ ದಾಳಿ; ಹಲವು ಹಳ್ಳಿಗಳು ನಾಮಾವಶೇಷ!

IPL 2026: MI vs RCB; ಫಿಲ್ ಸಾಲ್ಟ್, ಕೊಹ್ಲಿ, ಪಾಟಿದಾರ್ ಭರ್ಜರಿ ಬ್ಯಾಟಿಂಗ್, ಮುಂಬೈಗೆ ಗೆಲ್ಲಲು 241 ರನ್ ಬೃಹತ್ ಗುರಿ!

SCROLL FOR NEXT