ಪೊಲೀಸರಿಗೆ ಶರಣಾದ ನಕ್ಸಲರು 
ದೇಶ

ಮಹಾರಾಷ್ಟ್ರ: ಮತ್ತೆ ಏಳು ನಕ್ಸಲರ ಶರಣಾಗತಿ, ಹೊಸ ಬದುಕು ಕಟ್ಟಿಕೊಳ್ಳಲು ಪೊಲೀಸರ ನೆರವು 

ಮಹಾರಾಷ್ಟ್ರದಲ್ಲಿ ಮತ್ತೆ ಏಳು ಮಂದಿ ನಕ್ಸಲರು ಪೊಲೀಸರ ಬಳಿ ಶರಣಾಗಿದ್ದು, ಹೊಸ ಬದುಕು ಕಟ್ಟಿಕೊಳ್ಳಲು ಅವಕಾಶ ನೀಡುವಂತೆ ಕೋರಿದ್ದಾರೆ.

ಮುಂಬೈ: ಮಹಾರಾಷ್ಟ್ರದಲ್ಲಿ ಮತ್ತೆ ಏಳು ಮಂದಿ ನಕ್ಸಲರು ಪೊಲೀಸರ ಬಳಿ ಶರಣಾಗಿದ್ದು, ಹೊಸ ಬದುಕು ಕಟ್ಟಿಕೊಳ್ಳಲು ಅವಕಾಶ ನೀಡುವಂತೆ ಕೋರಿದ್ದಾರೆ.

ಮಹಾರಾಷ್ಟ್ರದ ನಕ್ಸಲ್ ಪೀಡಿತ ಗಡ್ ಚಿರೋಲಿಯಲ್ಲಿ ಇಂದು ಒಟ್ಟು ಏಳು ನಕ್ಸಲರು ಪೊಲೀಸರಿಗೆ ಶರಣಾಗಿದ್ದಾರೆ. ಶರಣಾದ ನಕ್ಸಲರ ಪೈಕಿ ಮೂವರು ಮಹಿಳೆಯರು ಕೂಡ ಇದ್ದು ಇವರನ್ನು ರಾಕೇಶ್ ಅಲಿಯಾಸ್ ಗಣೇಶ್ ಶಂಕು ಅಚಾಲಾ (ವಯಸ್ಸು -34), ದೇವಿದಾಸ್ ಅಲಿಯಾಸ್ ಮಣಿರಾಮ್ ಸೋನು ಆಚಾಲಾ (ವಯಸ್ಸು -25), ರೇಷ್ಮಾ ಅಲಿಯಾಸ್ ಜೈ ದುಲ್ಸು ಕೋವಾಚಿ (ವಯಸ್ಸು -19), ಅಖಿಲಾ ಅಲಿಯಾಸ್ ರಾಧೆ ಜುರೆ (ವಯಸ್ಸು -27), ಶಿವ ವಿಜಯ್ ಪೊಟವಿ (ವಯಸ್ಸು -22). ), ಕರುಣಾ ಅಲಿಯಾಸ್ ಕುಮ್ಮೆ ರಾಮ್‌ಸಿಂಗ್ ಮಡವಿ (ವಯಸ್ಸು -22) ಮತ್ತು ರಾಹುಲ್ ಅಲಿಯಾಸ್ ದಮ್ಜಿ ಸೊಮ್ಜಿ ಪಲ್ಲೆ (ವಯಸ್ಸು -25) ಎಂದು ಗುರುತಿಸಲಾಗಿದೆ.

ಇನ್ನು ಇಂದು ಶರಣಾದ ನಕ್ಸಲರ ಮೇಲೆ ಒಟ್ಟು 33 ಲಕ್ಷ ಬಹುಮಾನ ನಿಗದಿ ಪಡಿಸಲಾಗಿತ್ತು. ಈ ಹಿಂದೆ ಹಲವು ಕುಕೃತ್ಯಗಳಲ್ಲಿ ಪಾಲ್ಗೊಂಡಿದ್ದ ಇವರು, ಇದೀಗ ಮಹಾರಾಷ್ಟ್ರ ನಕ್ಸಲ್ ನಿಗ್ರಹ ಪಡೆಯ ಅಧಿಕಾರಿಗಳ ಮನವಿಗೆ ಸ್ಪಂದಿಸಿ ನಕ್ಸಲ್ ವಾದ ತೊರೆದು ಸಮಾಜದ ಮುಖ್ಯವಾಹಿನಿಗೆ ಬರಲು ನಿರ್ಧರಿಸಿದ್ದಾರೆ.

ಕಳೆದ ಜುಲೈನಲ್ಲೂ ಕೂಡ ನಾಲ್ಕು ಮಹಿಳೆಯರು ಸೇರಿದಂತೆ ಒಟ್ಟು 6 ಮಂದಿ ನಕ್ಸಲರು ಪೊಲೀಸರಿಗೆ ಶರಣಾಗಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT