ಪೊಲೀಸರಿಗೆ ಶರಣಾದ ನಕ್ಸಲರು 
ದೇಶ

ಮಹಾರಾಷ್ಟ್ರ: ಮತ್ತೆ ಏಳು ನಕ್ಸಲರ ಶರಣಾಗತಿ, ಹೊಸ ಬದುಕು ಕಟ್ಟಿಕೊಳ್ಳಲು ಪೊಲೀಸರ ನೆರವು 

ಮಹಾರಾಷ್ಟ್ರದಲ್ಲಿ ಮತ್ತೆ ಏಳು ಮಂದಿ ನಕ್ಸಲರು ಪೊಲೀಸರ ಬಳಿ ಶರಣಾಗಿದ್ದು, ಹೊಸ ಬದುಕು ಕಟ್ಟಿಕೊಳ್ಳಲು ಅವಕಾಶ ನೀಡುವಂತೆ ಕೋರಿದ್ದಾರೆ.

ಮುಂಬೈ: ಮಹಾರಾಷ್ಟ್ರದಲ್ಲಿ ಮತ್ತೆ ಏಳು ಮಂದಿ ನಕ್ಸಲರು ಪೊಲೀಸರ ಬಳಿ ಶರಣಾಗಿದ್ದು, ಹೊಸ ಬದುಕು ಕಟ್ಟಿಕೊಳ್ಳಲು ಅವಕಾಶ ನೀಡುವಂತೆ ಕೋರಿದ್ದಾರೆ.

ಮಹಾರಾಷ್ಟ್ರದ ನಕ್ಸಲ್ ಪೀಡಿತ ಗಡ್ ಚಿರೋಲಿಯಲ್ಲಿ ಇಂದು ಒಟ್ಟು ಏಳು ನಕ್ಸಲರು ಪೊಲೀಸರಿಗೆ ಶರಣಾಗಿದ್ದಾರೆ. ಶರಣಾದ ನಕ್ಸಲರ ಪೈಕಿ ಮೂವರು ಮಹಿಳೆಯರು ಕೂಡ ಇದ್ದು ಇವರನ್ನು ರಾಕೇಶ್ ಅಲಿಯಾಸ್ ಗಣೇಶ್ ಶಂಕು ಅಚಾಲಾ (ವಯಸ್ಸು -34), ದೇವಿದಾಸ್ ಅಲಿಯಾಸ್ ಮಣಿರಾಮ್ ಸೋನು ಆಚಾಲಾ (ವಯಸ್ಸು -25), ರೇಷ್ಮಾ ಅಲಿಯಾಸ್ ಜೈ ದುಲ್ಸು ಕೋವಾಚಿ (ವಯಸ್ಸು -19), ಅಖಿಲಾ ಅಲಿಯಾಸ್ ರಾಧೆ ಜುರೆ (ವಯಸ್ಸು -27), ಶಿವ ವಿಜಯ್ ಪೊಟವಿ (ವಯಸ್ಸು -22). ), ಕರುಣಾ ಅಲಿಯಾಸ್ ಕುಮ್ಮೆ ರಾಮ್‌ಸಿಂಗ್ ಮಡವಿ (ವಯಸ್ಸು -22) ಮತ್ತು ರಾಹುಲ್ ಅಲಿಯಾಸ್ ದಮ್ಜಿ ಸೊಮ್ಜಿ ಪಲ್ಲೆ (ವಯಸ್ಸು -25) ಎಂದು ಗುರುತಿಸಲಾಗಿದೆ.

ಇನ್ನು ಇಂದು ಶರಣಾದ ನಕ್ಸಲರ ಮೇಲೆ ಒಟ್ಟು 33 ಲಕ್ಷ ಬಹುಮಾನ ನಿಗದಿ ಪಡಿಸಲಾಗಿತ್ತು. ಈ ಹಿಂದೆ ಹಲವು ಕುಕೃತ್ಯಗಳಲ್ಲಿ ಪಾಲ್ಗೊಂಡಿದ್ದ ಇವರು, ಇದೀಗ ಮಹಾರಾಷ್ಟ್ರ ನಕ್ಸಲ್ ನಿಗ್ರಹ ಪಡೆಯ ಅಧಿಕಾರಿಗಳ ಮನವಿಗೆ ಸ್ಪಂದಿಸಿ ನಕ್ಸಲ್ ವಾದ ತೊರೆದು ಸಮಾಜದ ಮುಖ್ಯವಾಹಿನಿಗೆ ಬರಲು ನಿರ್ಧರಿಸಿದ್ದಾರೆ.

ಕಳೆದ ಜುಲೈನಲ್ಲೂ ಕೂಡ ನಾಲ್ಕು ಮಹಿಳೆಯರು ಸೇರಿದಂತೆ ಒಟ್ಟು 6 ಮಂದಿ ನಕ್ಸಲರು ಪೊಲೀಸರಿಗೆ ಶರಣಾಗಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT