ಸಂಗ್ರಹ ಚಿತ್ರ 
ದೇಶ

ರಫೆಲ್ ಶಸ್ತ್ರ ಪೂಜೆ ನಾಟಕ ಹೇಳಿಕೆ; ಖರ್ಗೆ ನಾಸ್ತಿಕ ಎಂದ 'ಕೈ' ಮುಖಂಡ ಸಂಜಯ್ ನಿರುಪಮ್

ರಾಹುಲ್ ಗಾಂಧಿ ಕಾಂಗ್ರೆಸ್ ಪಕ್ಷದ ಸಾರಥ್ಯ ವಹಿಸಿಕೊಂಡು ನಿಭಾಯಿಸುತ್ತಿದ್ದ  ಸಮಯದಲ್ಲಿ ಕೆಲವರು ಏಐಸಿಸಿ  ಕಾರ್ಯಾಲಯದಲ್ಲಿ ಕುಳಿತುಕೊಂಡು ಅವರು ವಿಫಲಗೊಳ್ಳಲು ಪಿತೂರಿ ನಡೆಸಿದ್ದರು ಎಂದು  ಹೇಳುವ ನೀಡುವ ಮೂಲಕ  ಕಾಂಗ್ರೆಸ್ ನಾಯಕ ಸಂಜಯ್ ನಿರುಪಮ್,  ಸ್ವಪಕ್ಷೀಯ  ಹಿರಿಯ ನಾಯಕರ ವಿರುದ್ದವೇ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮುಂಬೈ: ರಾಹುಲ್ ಗಾಂಧಿ ಕಾಂಗ್ರೆಸ್ ಪಕ್ಷದ ಸಾರಥ್ಯ ವಹಿಸಿಕೊಂಡು ನಿಭಾಯಿಸುತ್ತಿದ್ದ  ಸಮಯದಲ್ಲಿ ಕೆಲವರು ಏಐಸಿಸಿ  ಕಾರ್ಯಾಲಯದಲ್ಲಿ ಕುಳಿತುಕೊಂಡು ಅವರು ವಿಫಲಗೊಳ್ಳಲು ಪಿತೂರಿ ನಡೆಸಿದ್ದರು ಎಂದು  ಹೇಳುವ ನೀಡುವ ಮೂಲಕ  ಕಾಂಗ್ರೆಸ್ ನಾಯಕ ಸಂಜಯ್ ನಿರುಪಮ್,  ಸ್ವಪಕ್ಷೀಯ  ಹಿರಿಯ ನಾಯಕರ ವಿರುದ್ದವೇ ಅಸಮಧಾನ ವ್ಯಕ್ತಪಡಿಸಿದ್ದಾರೆ.

ಅಂತೆಯೇ ಫ್ರಾನ್ಸ್ ನಲ್ಲಿ ರಫೆಲ್ ಯುದ್ಧ ವಿಮಾನ ಹಸ್ತಾಂತರ ವೇಳೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ನಡೆಸಿದ್ದ ಆಯುಧಪೂಜೆ ಒಂದು ತಮಾಷೆ  ಎಂದು ಬಣ್ಣಿಸಿರುವ  ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕೆ ಸರಿಯಲ್ಲ ಎಂದೂ ಸಂಜಯ್ ನಿರುಪಮ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನಮ್ಮ ದೇಶದಲ್ಲಿ ಆಯುಧ ಪೂಜೆ ಅನಾದಿಕಾಲದಿಂದಲೂ ನಡೆದುಕೊಂಡು ಬಂದ ಸಂಪ್ರದಾಯ, ನಿಜವಾದ ಸಮಸ್ಯೆ ಏನೆಂದರೆ ಅವರು (ಖರ್ಗೆ) ನಾಸ್ತಿಕವಾಗಿರುವುದು ಕಾರಣ ಎಂದು ದೂರಿದ್ದಾರೆ.  ಕಾಂಗ್ರೆಸ್ ಪಕ್ಷದಲ್ಲಿರುವ ಎಲ್ಲರೂ ನಾಸ್ತಿಕರೇನು ಅಲ್ಲ ಎಂದು ಅವರು ಮಾಧ್ಯಮಗಳಿಗೆ  ನಿರುಪಮ್ ತಿಳಿಸಿದ್ದಾರೆ.

ಆಯುಧಪೂಜೆ ಕುರಿತು ಮಲ್ಲಿಕಾರ್ಜುನ ಖರ್ಗೆ ನೀಡಿರುವ ಹೇಳಿಕೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರೂ ಆಗಿರುವ,  ಕೇಂದ್ರ ಗೃಹ ಸಚಿವ ಅಮಿತ್ ಷಾ  ಅಸಮಾಧಾನ  ವ್ಯಕ್ತಪಡಿಸಿದ್ದು,  ಕಾಂಗ್ರೆಸ್ ಸಂಪ್ರದಾಯ ಪರಿಹಾಸ್ಯ  ಮಾಡುತ್ತಿದೆ.  ಆಯುಧ ಪೂಜೆ ಕಾಂಗ್ರೆಸ್ ಪಕ್ಷಕ್ಕೆ ಇಷ್ಟವಿಲ್ಲವೆಂದು ಕಾಣಿಸುತ್ತಿದೆ.  ಕಾಂಗ್ರೆಸ್ ನಾಯಕರು ವಿಜಯದಶಮಿಯದಿನ  ಆಯುಧಪೂಜೆ ಮಾಡುವುದಿಲ್ಲವೆ? ಎಂದು ಅವರು ಪ್ರಶ್ನಿಸಿದ್ದಾರೆ.  ಸಂಪ್ರದಾಯಗಳ ಕುರಿತು  ಟೀಕೆಗಳು ಸರಿಯಲ್ಲ, ಇಂತಹ ಹೇಳಿಕೆಗಳ ಬಗ್ಗೆ  ಕಾಂಗ್ರೆಸ್ ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT