ರಾಜನಾಥ್ ಸಿಂಗ್ ಪೂಜೆ 
ದೇಶ

'ಬರೀ ನಾಟಕ': ರಾಜನಾಥ್ ಸಿಂಗ್ ರಫೆಲ್ ಶಸ್ತ್ರ ಪೂಜೆಗೆ ಮಲ್ಲಿಕಾರ್ಜುನ್ ಖರ್ಗೆ ಟಾಂಗ್

ವಿಜಯದಶಮಿಯಂದು ಫ್ರಾನ್ಸ್ ಸರ್ಕಾರ ಭಾರತಕ್ಕೆ ಹಸ್ತಾಂತರಿಸಿದ ರಫೆಲ್ ಯುದ್ಧ ವಿಮಾನಕ್ಕೆ ಶಸ್ತ್ರ ಪೂಜೆ ಸಲ್ಲಿಸಿ ನಾಟಕ ಮಾಡುವ ಅಗತ್ಯವಿರಲಿಲ್ಲ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ್ ಖರ್ಗೆ ಅವರು ಬುಧವಾರ...

ಬೆಂಗಳೂರು: ವಿಜಯದಶಮಿಯಂದು ಫ್ರಾನ್ಸ್ ಸರ್ಕಾರ ಭಾರತಕ್ಕೆ ಹಸ್ತಾಂತರಿಸಿದ ರಫೆಲ್ ಯುದ್ಧ ವಿಮಾನಕ್ಕೆ ಶಸ್ತ್ರ ಪೂಜೆ ಸಲ್ಲಿಸಿ ನಾಟಕ ಮಾಡುವ ಅಗತ್ಯವಿರಲಿಲ್ಲ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ್ ಖರ್ಗೆ ಅವರು ಬುಧವಾರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಗೆ ಟಾಂಗ್ ನೀಡಿದ್ದಾರೆ.

ಈ ಹಿಂದೆ ನಾವು ಬೋಪೋರ್ಸ್ ಗನ್ ನಂತಹ ಶಸ್ತ್ರಾಸ್ತ್ರಗಳನ್ನು ಖರೀದಿಸಿದಾಗ ಅವುಗಳನ್ನು ತರಲು ಮತ್ತು ಪ್ರಚಾರ ಗಿಟ್ಟಿಸಿಕೊಳ್ಳಲು ಯಾರೂ ಹೋಗಿರಲಿಲ್ಲ.. ಆದರೆ ರಾಜನಾಥ್ ಸಿಂಗ್ ಅವರು ವಿಮಾನಕ್ಕೆ ಆಯುಧ ಪೂಜೆ ಮಾಡುವ ಮೂಲಕ ನಾಟಕ ಮಾಡುವ ಅಗತ್ಯ ಇರಲಿಲ್ಲ ಎಂದಿದ್ದಾರೆ.

ಭಾರತೀಯ ವಾಯುಪಡೆಯ ಅಧಿಕಾರಿಗಳು, ಆ ವಿಮಾನಗಳು ಸಮರ್ಥವಾಗಿಯೇ ಅಥವಾ ಇಲ್ಲವೇ ಎಂಬುದನ್ನು ನಿರ್ಧರಿಸಿದ್ದಾರೆ. ಆದರೆ ಇವರು ಅಲ್ಲಿಗೆ ಹೋಗಿ, ಆ ವಿಮಾನದಲ್ಲಿ ಕುಳಿತು ಪ್ರಚಾರ ತೆಗೆದುಕೊಳ್ಳುತ್ತಿದ್ದಾರೆ ಎಂದು ಖರ್ಗೆ ಹೇಳಿರುವುದಾಗಿ ಎಎನ್ಐ ಟ್ವೀಟ್ ಮಾಡಿದೆ.

ನಿನ್ನೆಯಷ್ಟೇ ಅಧಿಕೃತವಾಗಿ ಮೊದಲ ರಫೆಲ್ ಯುದ್ಧ ವಿಮಾನ ಸ್ವೀಕರಿಸಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಅದಕ್ಕೆ ಆಯುಧ ಪೂಜೆ ಮಾಡಿದ್ದರು. ಅಲ್ಲದೆ ಓಂ ಎಂದು ಬರೆದಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT