ನಮೋ ವೆಂಕಟೇಶ್ವರ 
ದೇಶ

ತಿರುಮಲ ತಿಮ್ಮಪ್ಪನಿಗೂ ತಟ್ಟಿದ ಆರ್ಥಿಕ ಕುಸಿತ; ಹುಂಡಿ ಕಲೆಕ್ಷನ್ ಡಲ್!

ಭಾರತದ ಕುಸಿಯುತ್ತಿರುವ ಆರ್ಥಿಕತೆಯ ಪ್ರಭಾವ ತಿರುಮಲ ತಿರುಪತಿಯ ಶ್ರೀವಾರಿ ಹುಂಡಿಗೂ ತಟ್ಟಿದೆ. 

ತಿರುಮಲ: ಭಾರತದ ಕುಸಿಯುತ್ತಿರುವ ಆರ್ಥಿಕತೆಯ ಪ್ರಭಾವ ತಿರುಮಲ ತಿರುಪತಿಯ ಶ್ರೀವಾರಿ ಹುಂಡಿಗೂ ತಟ್ಟಿದೆ. 

ಮಂಗಳವಾರ ಕೊನೆಗೊಂಡ ತಿರುಪತಿ ತಿಮ್ಮಪ್ಪನ ಒಂಭತ್ತು ದಿನಗಳ ಬ್ರಹ್ಮೋತ್ಸವಕ್ಕೆ ಭಕ್ತರ ಸಂಖ್ಯೆ ಕಳೆದ ವರ್ಷಕ್ಕೆ ಹೋಲಿಸಿದರೆ ಹೆಚ್ಚಾಗಿದ್ದರೂ ಶ್ರೀವಾರಿ ಹುಂಡಿ ಸಂಗ್ರಹ ತೀವ್ರವಾಗಿ ಇಳಿಕೆ ಕಂಡಿದೆ. 

ಒಂಭತ್ತು ದಿನಗಳ ಬ್ರಹ್ಮೋತ್ಸವದ ಸಂದರ್ಭದಲ್ಲಿ ಸುಮಾರು 7.074 ಲಕ್ಷ ಯಾತ್ರಿಕರು ತಿರುಮಲದ ಶ್ರೀವೇಂಕಟೇಶ್ವರನ ದರ್ಶನ ಪಡೆದಿದ್ದಾರೆ. ಕಳೆದ ವರ್ಷದ ಬ್ರಹ್ಮೋತ್ಸವದ ಸಂದರ್ಭದಲ್ಲಿ 5.9 ಲಕ್ಷ ಯಾತ್ರಿಕರು ಭೇಟಿ ನೀಡಿದ್ದರು. ಯಾತ್ರಿಕರ ಸಂಖ್ಯೆ ಹೆಚ್ಚಾಗಿದ್ದರೂ ಹುಂಡಿ ಸಂಗ್ರಹ ಕಡಿಮೆಯಾಗಿದೆ. ಕಳೆದ ವರ್ಷ ಹುಂಡಿ ಸಂಗ್ರಹ 20.52 ಕೋಟಿ ರೂ ಇದ್ದು ಈ ವರ್ಷ 20.40 ಕೋಟಿ ರೂ ಗೆ ಇಳಿಕೆಯಾಗಿದೆ. 

ಕಳೆದ ವರ್ಷ ಬ್ರಹ್ಮೋತ್ಸವದ ಸಂದರ್ಭದಲ್ಲಿ 2.17 ಲಕ್ಷ ಜನರು ಮುಡಿ ಕೊಟ್ಟಿದ್ದರೆ ಈ ವರ್ಷ 3.23 ಲಕ್ಷ ಭಕ್ತರು ಮುಡಿ ಅರ್ಪಿಸಿದ್ದು ಈ ಸಂಖ್ಯೆ ಶೇಕಡ 50 ರಷ್ಟು ಹೆಚ್ಚಳ ಕಂಡಿದೆ.

ಈ ವರ್ಷ 34.01 ಲಕ್ಷ ಲಾಡು ಪ್ರಸಾದ ಮಾರಾಟವಾಗಿದ್ದು ಕಳೆದ ವರ್ಷ ಬ್ರಹ್ಮೋತ್ಸವದ ಸಂದರ್ಭದಲ್ಲಿ ಹತ್ತು ಲಕ್ಷ ಕಡಿಮೆ ಅಂದರೆ 24.01 ಲಕ್ಷ ಲಾಡು ವಿತರಿಸಲಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT