ಕೆಎನ್ ರಾಜಣ್ಣ 
ದೇಶ

ಲಕ್ಷ್ಮಿ ಹೆಬ್ಬಾಳ್ಕರ್ ಗೆ ಅಪಾರ ಪ್ರಮಾಣದಲ್ಲಿ ಸಾಲ: ಇಡಿ ಅಧಿಕಾರಿಗಳಿಂದ ಕೆ.ಎನ್ ರಾಜಣ್ಣ ತೀವ್ರ ವಿಚಾರಣೆ

ಕಾಂಗ್ರೆಸ್ ಬಂಡಾಯ ನಾಯಕ ಕೆ.ಎನ್ ರಾಜಣ್ಣ ಅವರನ್ನು ನಿನ್ನೆ ಲೋಕನಾಯಕ ಭವನದಲ್ಲಿರುವ ಇಡಿ ಕಚೇರಿಯಲ್ಲಿ ವಿಚಾರಣೆಗೆ ಒಳಪಡಿಸಲಾಗಿತ್ತು.

ತುಮಕೂರು: ಕಾಂಗ್ರೆಸ್ ಬಂಡಾಯ ನಾಯಕ ಕೆ.ಎನ್ ರಾಜಣ್ಣ ಅವರನ್ನು ನಿನ್ನೆ ಲೋಕನಾಯಕ ಭವನದಲ್ಲಿರುವ ಇಡಿ ಕಚೇರಿಯಲ್ಲಿ ವಿಚಾರಣೆಗೆ ಒಳಪಡಿಸಲಾಗಿತ್ತು.

ಹರ್ಷ ಶುಗರ್ಸ್ ಕಾರ್ಖಾನೆಗೆ ಸಾಲ ನೀಡಿದ ವಿಚಾರದ ಹಿನ್ನೆಲೆಯಲ್ಲಿ ಇಡಿ ಅಧಿಕಾರಿಗಳು ಮಾಜಿ ಶಾಸಕ ಕೆ.ಎನ್.ರಾಜಣ್ಣ ಅವರನ್ನು ವಿಚಾರಣೆಗೆ ಒಳಪಡಿಸಿದ್ದರು.

ಬೆಳಗಾವಿ ಗ್ರಾಮಾಂತರ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಒಡೆತನದ ಹರ್ಷ ಶುಗರ್ಸ್ ಕಾರ್ಖಾನೆಗೆ ಅಪೆಕ್ಸ್ ಬ್ಯಾಂಕ್‍ನಡಿ ಬರುವ ಕೆಲವು ಬ್ಯಾಂಕ್‍ಗಳಿಂದ ಸಾಲ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ರಾಜಣ್ಣ ಅವರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎನ್ನಲಾಗಿದೆ

ಉತ್ತರ ಕನ್ನಡ ಶಾಖೆ ಸೇರಿದಂತೆ ಜಿಲ್ಲಾ ಕೇಂದ್ರ ಕೋ ಆಪರೇಟಿವ್ ಬ್ಯಾಂಕ್ 100 ಕೋಟಿ, ಬಾಗಲಕೋಟೆ  ಡಿಸಿಸಿ ಬ್ಯಾಂಕ್ ನಿಂದ 10 ಕೋಟಿ ಸಾಲ ಪಡೆದಿದ್ದಾರೆ.

ಬೆಳಗ್ಗೆ 11.30ರಿಂದ ಸಂಜೆ 7 ಗಂಟೆವರೆಗೂ ಇಡಿ ಅಧಿಕಾರಿಗಳು ರಾಜಣ್ಣ ಅವರನ್ನು ವಿಚಾರಣೆಗೊಳಪಡಿಸಿದ್ದಾರೆ. ಸಾಲಕ್ಕಾಗಿ ಲಕ್ಷ್ಮಿ ಹೆಬ್ಬಾಳ್ಕರ್ ನೀಡಿರುವ ಶ್ಯೂರಿಟಿ ಬಗ್ಗೆಯೂ ಇಡಿ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ.

215 ಕೋಟಿ ಸಾಲ ನೀಡಿರುವ ಬಗ್ಗೆಯೂ ವಿಚಾರಣೆ ತೀವ್ರಗೊಳಿಸಿದ್ದು ಅಕ್ಟೋಬರ್ 16 ಕ್ಕೆ ಮತ್ತೆ ಸಮನ್ಸ್ ನೀಡಲಾಗಿದೆ ಎನ್ನಲಾಗಿದೆ,

ವಿಚಾರಣೆ ಬಳಿಕ ಮಾತನಾಡಿದ ರಾಜಣ್ಣ, ಹರ್ಷ ಶುಗರ್ಸ್ ಗೆ ನೀಡಿರುವ ಸಾಲದ ಬಗ್ಗೆ ಎಲ್ಲಾ ದಾಖಲೆಗಳನ್ನು ಸಲ್ಲಿಸಿದ್ದೇನೆ,  ನನ್ನ ಕುಟುಂಬದ ಸದಸ್ಯರ ಹಣಕಾಸು ವಹಿವಾಟಿನ ಬಗ್ಗೆ ಇಡಿ ಅಧಿಕಾರಿಗಳು ಮಾಹಿತಿ ಕೇಳಿದ್ದಾರೆ, ಹೀಗಾಗಿ ಕೆಲ ಸಮಯ ನೀಡುವಂತೆ ಅವರನ್ನು ಕೋರಿರುವುದಾಗಿ ತಿಳಿಸಿದ್ದಾರೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

ಶಿಬು ಸೊರೇನ್ 'ರಾಜ್ಯದ ಪಿತಾಮಹ' ಎಂದು ಘೋಷಿಸುವಂತೆ ಜೆಎಂಎಂ ಆಗ್ರಹ

SCROLL FOR NEXT