ಮಾಜಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ 
ದೇಶ

ಕರ್ತಾರ್‌ಪುರ ಕಾರಿಡಾರ್ ಉದ್ಘಾಟನೆಗೆ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಗೆ ಅಧಿಕೃತ ಆಹ್ವಾನ ನೀಡಿದ ಪಾಕ್ ಪ್ರಧಾನಿ

ಗುರು ನಾನಕ್‌ ಅವರ 550ನೇ ಜನ್ಮದಿನದ ಅಂಗವಾಗಿ ನಿರ್ಮಾಣವಾಗುತ್ತಿರುವ ಕರ್ತಾರ್‌ಪುರ ಕಾರಿಡಾರ್‌ ಉದ್ಘಾಟನೆಗೆ ಮಾಜಿ ಪ್ರಧಾನಿ ಡಾ.ಮನಮೋಹನ್‌ ಸಿಂಗ್‌ ಅವರಿಗೆ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಅವರು...

ಇಸ್ಲಾಮಾಬಾದ್: ಗುರು ನಾನಕ್‌ ಅವರ 550ನೇ ಜನ್ಮದಿನದ ಅಂಗವಾಗಿ ನಿರ್ಮಾಣವಾಗುತ್ತಿರುವ ಕರ್ತಾರ್‌ಪುರ ಕಾರಿಡಾರ್‌ ಉದ್ಘಾಟನೆಗೆ ಮಾಜಿ ಪ್ರಧಾನಿ ಡಾ.ಮನಮೋಹನ್‌ ಸಿಂಗ್‌ ಅವರಿಗೆ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಅವರು ಅಧಿಕೃತ ಆಹ್ವಾನ ನೀಡಿದ್ದಾರೆ ಎಂದು ಗುರುವಾರ ಪಾಕಿಸ್ತಾನ ವಿದೇಶಾಂಗ ಸಚಿವಾಲಯ ತಿಳಿಸಿದೆ.

ಇದಕ್ಕು ಮುನ್ನ, ನವೆಂಬರ್ 9 ರಂದು ಆಯೋಜಿನೆಯಾಗಿರುವ ಕರ್ತಾರ್‌ಪುರ ಕಾರಿಡಾರ್ ಉದ್ಘಾಟನೆ ಕಾರ್ಯಕ್ರಮಕ್ಕೆ ಪಾಕಿಸ್ತಾನ ಆಹ್ವಾನ ನೀಡಿರುವ ಬಗ್ಗೆ ನಮಗೆ ಇದುವರೆಗೂ ಯಾವುದೇ ಮಾಹಿತಿ ಇಲ್ಲ ಎಂದು ಮಾಜಿ ಪ್ರಧಾನಿಯ ಕಚೇರಿ ತಿಳಿಸಿತ್ತು ಮತ್ತು ಮೂಲಗಳ ಪ್ರಕಾರ ಮನಮೋಹನ್ ಸಿಂಗ್ ಅವರು ಪಾಕ್ ಆಹ್ವಾನವನ್ನು ತಿರಸ್ಕರಿಸಲಿದ್ದಾರೆ ಎನ್ನಲಾಗಿದೆ.

"ಕರ್ತಾರ್‌ಪುರ ಕಾರಿಡಾರ್‌ನ ಉದ್ಘಾಟನಾ ಕಾರ್ಯಕ್ಕಾಗಿ ಭಾರತದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ನಾವು ಆಹ್ವಾನವನ್ನು ನೀಡಲು ಬಯಸುತ್ತೇವೆ. ಅವರು ಸಿಖ್ಖ್ ಸಮುದಾಯವನ್ನು ಪ್ರತಿನಿಧಿಸುವವರೂ ಆಗಿದ್ದಾರೆ. ನಾವು ಅವರಿಗೆ ಅಧಿಕೃತ ಆಹ್ವಾನವನ್ನು ಕಳುಹಿಸುತ್ತೇವೆ" ಎಂದು ಇತ್ತೀಚಿಗೆ ಪಾಕಿಸ್ತಾನ ವಿದೇಶಾಂಗ ಸಚಿವ ಶಾ ಮಹಮೂದ್ ಖುರೇಷಿ ಅವರು ಹೇಳಿದ್ದರು. ಈಗ ಪಾಕ್ ಪ್ರಧಾನಿ ಅಧಿಕೃತ ಆಹ್ವಾನ ನೀಡಿದ್ದಾರೆ.

ಕಾರಿಡಾರ್ ಉದ್ಘಾಟನಾ ಸಮಾರಂಭ ಗುರುನಾನಕ್ ದೇವ್ ಅವರ 550 ನೇ ಜನ್ಮ ದಿನಾಚರಣೆಯ ಮೂರು ದಿನಗಳ ಮೊದಲು ನಡೆಯಲಿದೆ. ಆರಂಭದಲ್ಲಿ, ಭಾರತದಿಂದ ಪ್ರತಿದಿನ 5,000 ಯಾತ್ರಾರ್ಥಿಗಳಿಗೆ ಭೇಟಿ ನೀಡಲು ಅವಕಾಶವಿರುತ್ತದೆ ಆದರೆ ನಂತರ ದಿನಕ್ಕೆ 10,000 ಯಾತ್ರಾರ್ಥಿಗಳಿಗೆ ಅವಕಾಶ ನೀಡಲಾಗುವುದು ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ.

ಈ ಕಾರಿಡಾರ್ ಕರ್ತಾರ್‌ಪುರದ ದರ್ಬಾರ್ ಸಾಹಿಬ್ ಅನ್ನು ಪಂಜಾಬ್‌ನ ಗುರುದಾಸ್‌ಪುರ ಜಿಲ್ಲೆಯ ಡೇರಾ ಬಾಬಾ ನಾನಕ್ ದೇಗುಲದೊಂದಿಗೆ ಸಂಪರ್ಕಿಸುತ್ತದೆ ಮತ್ತು ಭಾರತೀಯ ಯಾತ್ರಿಕರ ವೀಸಾ ಮುಕ್ತ ಸಂಚಾರಕ್ಕೆ ಅನುಕೂಲವಾಗಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

KPSC ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: ಎಲ್ಲಾ 329 ಅಭ್ಯರ್ಥಿಗಳಿಗೆ CID ಶಾಕ್, ಇಂದೇ ವಿಚಾರಣೆಗೆ ಹಾಜರಾಗುವಂತೆ ನೋಟಿಸ್!

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!