ಸಾಂದರ್ಭಿಕ ಚಿತ್ರ 
ದೇಶ

ಅಯೋಧ್ಯ ವಿವಾದ: ಹಿಂದೂಗಳಿಗೆ ಭೂಮಿ ' ಗಿಫ್ಟ್' ನೀಡಲು ಮುಸ್ಲಿಂ ಬೌದ್ಧಿಕ ಗುಂಪು ಸಲಹೆ 

ಅಯೋಧ್ಯ ವಿವಾದವನ್ನು ನ್ಯಾಯಾಲಯದ ಹೊರಗಡೆ ಬಗೆಹರಿಸಿಕೊಳ್ಳಲು  ಮುಸ್ಲಿಂ ಸಮುದಾಯದ ಬೌದ್ಧಿಕ ಗುಂಪೊಂದು ಒಲವು ತೋರಿಸಿದ್ದು,  ಮುಸ್ಲಿಂರು ವಿವಾದಿತ ಜಾಗವನ್ನು ಸ್ನೇಹಪೂರ್ವಕವಾಗಿ ಕೇಂದ್ರ ಸರ್ಕಾರಕ್ಕೆ ನೀಡಿದರೆ ದೇಶದಲ್ಲಿ ಶಾಂತಿ ನೆಲೆಸಲು ಸಹಕಾರಿಯಾಗಲಿದೆ ಎಂದು ಸಲಹೆ ನೀಡಿದೆ. 

ನವದೆಹಲಿ: ಅಯೋಧ್ಯ ವಿವಾದವನ್ನು ನ್ಯಾಯಾಲಯದ ಹೊರಗಡೆ ಬಗೆಹರಿಸಿಕೊಳ್ಳಲು  ಮುಸ್ಲಿಂ ಸಮುದಾಯದ ಬೌದ್ಧಿಕ ಗುಂಪೊಂದು ಒಲವು ತೋರಿಸಿದ್ದು,  ಮುಸ್ಲಿಂರು ವಿವಾದಿತ ಜಾಗವನ್ನು ಸ್ನೇಹಪೂರ್ವಕವಾಗಿ ಕೇಂದ್ರ ಸರ್ಕಾರಕ್ಕೆ ನೀಡಿದರೆ ದೇಶದಲ್ಲಿ ಶಾಂತಿ ನೆಲೆಸಲು ಸಹಕಾರಿಯಾಗಲಿದೆ ಎಂದು ಸಲಹೆ ನೀಡಿದೆ. 

ರಾಮ ಜನ್ಮಭೂಮಿ - ಬಾಬ್ರಿ ಮಸೀದಿ ಭೂ ವಿವಾದವನ್ನು ನ್ಯಾಯಾಲಯದ ಹೊರಗಡೆ ಬಗೆಹರಿಸಿಕೊಳ್ಳುವ ಸಂಬಂಧ ನಿನ್ನೆ ನಿರ್ಣಯವೊಂದನ್ನು ಕೈಗೊಳ್ಳಲಾಗಿದೆ ಎಂದು ನೂತನ ಸ್ಥಾಪಿತ ಶಾಂತಿಗಾಗಿ ಭಾರತೀಯರು ಮುಸ್ಲಿಂರು ವೇದಿಕೆ  ಸಂಚಾಲಕ ಕಲಾಂ ಖಾನ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. 

ನ್ಯಾಯಾಲಯದ ಹೊರಗಡೆ ವಿವಾದವನ್ನು ಬಗೆಹರಿಸಿಕೊಳ್ಳುವುದರಿಂದ ಹಿಂದೂ- ಮುಸ್ಲಿಂರು ಸಂತೋಷದಿಂದ ಇರಬಹುದು, ಯಾವುದೇ ಸಮುದಾಯವು ಆಕ್ರಮಣಕಾರಿ ಭಾವನೆ ತಾಳಬಾರದು ಎಂದರು. 

ಹಿಂದೂ- ಮುಸ್ಲಿಂ ನಡುವಿನ ಸಂಬಂಧಕ್ಕೆ ಶತಮಾನದ ಇತಿಹಾಸವಿದೆ. ಜಾತ್ಯತೀತ ಹಾಗೂ ಪ್ರಜಾಸತಾತ್ಮಕ ತತ್ವಗಳನ್ನು ಗಮನದಲ್ಲಿಟ್ಟುಕೊಂಡು ವಿವಾದಿತ ಜಾಗವನ್ನು ಸೌಹಾರ್ದತೆಯ ಭಾವನೆಯೊಂದಿಗೆ ಸುಪ್ರೀಂಕೋರ್ಟ್ ಮೂಲಕ ಕೇಂದ್ರ ಸರ್ಕಾರಕ್ಕೆ ಹಸ್ತಂತರಿಸಬೇಕು ಎಂದು ಅವರು ಮುಸ್ಲಿಂ ಸಮುದಾಯಕ್ಕೆ  ಸಲಹೆ ನೀಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT