ಸಾಂದರ್ಭಿಕ ಚಿತ್ರ 
ದೇಶ

ಅಯೋಧ್ಯ ವಿವಾದ: ಹಿಂದೂಗಳಿಗೆ ಭೂಮಿ ' ಗಿಫ್ಟ್' ನೀಡಲು ಮುಸ್ಲಿಂ ಬೌದ್ಧಿಕ ಗುಂಪು ಸಲಹೆ 

ಅಯೋಧ್ಯ ವಿವಾದವನ್ನು ನ್ಯಾಯಾಲಯದ ಹೊರಗಡೆ ಬಗೆಹರಿಸಿಕೊಳ್ಳಲು  ಮುಸ್ಲಿಂ ಸಮುದಾಯದ ಬೌದ್ಧಿಕ ಗುಂಪೊಂದು ಒಲವು ತೋರಿಸಿದ್ದು,  ಮುಸ್ಲಿಂರು ವಿವಾದಿತ ಜಾಗವನ್ನು ಸ್ನೇಹಪೂರ್ವಕವಾಗಿ ಕೇಂದ್ರ ಸರ್ಕಾರಕ್ಕೆ ನೀಡಿದರೆ ದೇಶದಲ್ಲಿ ಶಾಂತಿ ನೆಲೆಸಲು ಸಹಕಾರಿಯಾಗಲಿದೆ ಎಂದು ಸಲಹೆ ನೀಡಿದೆ. 

ನವದೆಹಲಿ: ಅಯೋಧ್ಯ ವಿವಾದವನ್ನು ನ್ಯಾಯಾಲಯದ ಹೊರಗಡೆ ಬಗೆಹರಿಸಿಕೊಳ್ಳಲು  ಮುಸ್ಲಿಂ ಸಮುದಾಯದ ಬೌದ್ಧಿಕ ಗುಂಪೊಂದು ಒಲವು ತೋರಿಸಿದ್ದು,  ಮುಸ್ಲಿಂರು ವಿವಾದಿತ ಜಾಗವನ್ನು ಸ್ನೇಹಪೂರ್ವಕವಾಗಿ ಕೇಂದ್ರ ಸರ್ಕಾರಕ್ಕೆ ನೀಡಿದರೆ ದೇಶದಲ್ಲಿ ಶಾಂತಿ ನೆಲೆಸಲು ಸಹಕಾರಿಯಾಗಲಿದೆ ಎಂದು ಸಲಹೆ ನೀಡಿದೆ. 

ರಾಮ ಜನ್ಮಭೂಮಿ - ಬಾಬ್ರಿ ಮಸೀದಿ ಭೂ ವಿವಾದವನ್ನು ನ್ಯಾಯಾಲಯದ ಹೊರಗಡೆ ಬಗೆಹರಿಸಿಕೊಳ್ಳುವ ಸಂಬಂಧ ನಿನ್ನೆ ನಿರ್ಣಯವೊಂದನ್ನು ಕೈಗೊಳ್ಳಲಾಗಿದೆ ಎಂದು ನೂತನ ಸ್ಥಾಪಿತ ಶಾಂತಿಗಾಗಿ ಭಾರತೀಯರು ಮುಸ್ಲಿಂರು ವೇದಿಕೆ  ಸಂಚಾಲಕ ಕಲಾಂ ಖಾನ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. 

ನ್ಯಾಯಾಲಯದ ಹೊರಗಡೆ ವಿವಾದವನ್ನು ಬಗೆಹರಿಸಿಕೊಳ್ಳುವುದರಿಂದ ಹಿಂದೂ- ಮುಸ್ಲಿಂರು ಸಂತೋಷದಿಂದ ಇರಬಹುದು, ಯಾವುದೇ ಸಮುದಾಯವು ಆಕ್ರಮಣಕಾರಿ ಭಾವನೆ ತಾಳಬಾರದು ಎಂದರು. 

ಹಿಂದೂ- ಮುಸ್ಲಿಂ ನಡುವಿನ ಸಂಬಂಧಕ್ಕೆ ಶತಮಾನದ ಇತಿಹಾಸವಿದೆ. ಜಾತ್ಯತೀತ ಹಾಗೂ ಪ್ರಜಾಸತಾತ್ಮಕ ತತ್ವಗಳನ್ನು ಗಮನದಲ್ಲಿಟ್ಟುಕೊಂಡು ವಿವಾದಿತ ಜಾಗವನ್ನು ಸೌಹಾರ್ದತೆಯ ಭಾವನೆಯೊಂದಿಗೆ ಸುಪ್ರೀಂಕೋರ್ಟ್ ಮೂಲಕ ಕೇಂದ್ರ ಸರ್ಕಾರಕ್ಕೆ ಹಸ್ತಂತರಿಸಬೇಕು ಎಂದು ಅವರು ಮುಸ್ಲಿಂ ಸಮುದಾಯಕ್ಕೆ  ಸಲಹೆ ನೀಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ವಿದೇಶಿ ಮಹಿಳೆಗೆ ಪತ್ರ ಬರೆದು ಅಂಬೇಡ್ಕರ್ ಸೋಲನ್ನು ನೆಹರು ಸಂಭ್ರಮಿಸಿದ್ದು ನಿಜವಲ್ಲವೇ? 'ಗೂಗಲ್ ಬೇಬಿ'ಯಂತೆ ವರ್ತಿಸಬೇಡಿ!

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

SCROLL FOR NEXT