ಸಾಂದರ್ಭಿಕ ಚಿತ್ರ 
ದೇಶ

ಮಲಗಿದ್ದ ಭಕ್ತಾದಿಗಳ ಮೇಲೆ ಹರಿದ ಬಸ್: ಮೂರು ಮಕ್ಕಳು ಸೇರಿದಂತೆ 7ಮಂದಿ ದುರ್ಮರಣ

ಮಲಗಿದ್ದ ಭಕ್ತಾದಿಗಳ ಮೇಲೆ ಬಸ್ ಹರಿದ ಪರಿಣಾಮ  ನಾಲ್ವರು ಮಹಿಳೆಯರು, ಮೂರು ಮಕ್ಕಳು ಸೇರಿದಂತೆ ಏಳು ಜನರು ಮೃತಪಟ್ಟಿರುವ ದಾರುಣ ಘಟನೆ ಉತ್ತರಪ್ರದೇಶದ ಬುಲಂದ್ ಶಹರ್ ನಲ್ಲಿ ನಡೆದಿದೆ.

ಬುಲಂದ್ ಶಹರ್: ಮಲಗಿದ್ದ ಭಕ್ತಾದಿಗಳ ಮೇಲೆ ಬಸ್ ಹರಿದ ಪರಿಣಾಮ  ನಾಲ್ವರು ಮಹಿಳೆಯರು, ಮೂರು ಮಕ್ಕಳು ಸೇರಿದಂತೆ ಏಳು ಜನರು ಮೃತಪಟ್ಟಿರುವ ದಾರುಣ ಘಟನೆ ಉತ್ತರಪ್ರದೇಶದ ಬುಲಂದ್ ಶಹರ್ ನಲ್ಲಿ ನಡೆದಿದೆ.

ತೀರ್ಥಯಾತ್ರೆಗೆಂದು ಗಂಗಾಘಾಟ್ ಗೆ ಬಂದಿದ್ದ ಜನರು ಪಾದಚಾರಿ ಮಾರ್ಗದಲ್ಲಿ ಮಲಗಿದ್ದರು. ಈ ವೇಳೆ ಖಾಸಗಿ ಬಸ್ಸೊಂದು ಅವರ ಮೇಲೆ ಹರಿದು ಏಳು ಜನರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮೃತರೆಲ್ಲರೂ ಉತ್ತರಪ್ರದೇಶದ ಹತ್ರಾಸ್ ಮೂಲದವರು ಎಂದು ತಿಳಿದುಬಂದಿದೆ. ವೈಷ್ಣೋದೇವಿ ದರ್ಶನ ಪಡೆದು ವಾಪಸ್ ಆಗುತ್ತಿದ್ದ ವೇಳೆ ಈ ಅಪಘಾತ ನಡೆದಿದೆ, ಅಪಘಾತದ ನಂತರ ಬಸ್ ಚಾಲಕ ಪರಾರಿಯಾಗಿದ್ದು ಉತ್ತರ ಪ್ರದೇಶ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

'ಒಬ್ಬ ಅಲ್ಲ.. ಭಾರತದ ಮೇಲೆ ದಾಳಿಗೆ ಸಾವಿರಾರು ಆತ್ಮಹತ್ಯಾ ಬಾಂಬರ್‌ಗಳು ಸಿದ್ಧ': ಪಾಕ್ ಮೂಲದ ಉಗ್ರ Masood Azhar ಆಡಿಯೋ ವೈರಲ್!

SCROLL FOR NEXT