ಸಾಂದರ್ಭಿಕ ಚಿತ್ರ 
ದೇಶ

ಮಲಗಿದ್ದ ಭಕ್ತಾದಿಗಳ ಮೇಲೆ ಹರಿದ ಬಸ್: ಮೂರು ಮಕ್ಕಳು ಸೇರಿದಂತೆ 7ಮಂದಿ ದುರ್ಮರಣ

ಮಲಗಿದ್ದ ಭಕ್ತಾದಿಗಳ ಮೇಲೆ ಬಸ್ ಹರಿದ ಪರಿಣಾಮ  ನಾಲ್ವರು ಮಹಿಳೆಯರು, ಮೂರು ಮಕ್ಕಳು ಸೇರಿದಂತೆ ಏಳು ಜನರು ಮೃತಪಟ್ಟಿರುವ ದಾರುಣ ಘಟನೆ ಉತ್ತರಪ್ರದೇಶದ ಬುಲಂದ್ ಶಹರ್ ನಲ್ಲಿ ನಡೆದಿದೆ.

ಬುಲಂದ್ ಶಹರ್: ಮಲಗಿದ್ದ ಭಕ್ತಾದಿಗಳ ಮೇಲೆ ಬಸ್ ಹರಿದ ಪರಿಣಾಮ  ನಾಲ್ವರು ಮಹಿಳೆಯರು, ಮೂರು ಮಕ್ಕಳು ಸೇರಿದಂತೆ ಏಳು ಜನರು ಮೃತಪಟ್ಟಿರುವ ದಾರುಣ ಘಟನೆ ಉತ್ತರಪ್ರದೇಶದ ಬುಲಂದ್ ಶಹರ್ ನಲ್ಲಿ ನಡೆದಿದೆ.

ತೀರ್ಥಯಾತ್ರೆಗೆಂದು ಗಂಗಾಘಾಟ್ ಗೆ ಬಂದಿದ್ದ ಜನರು ಪಾದಚಾರಿ ಮಾರ್ಗದಲ್ಲಿ ಮಲಗಿದ್ದರು. ಈ ವೇಳೆ ಖಾಸಗಿ ಬಸ್ಸೊಂದು ಅವರ ಮೇಲೆ ಹರಿದು ಏಳು ಜನರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮೃತರೆಲ್ಲರೂ ಉತ್ತರಪ್ರದೇಶದ ಹತ್ರಾಸ್ ಮೂಲದವರು ಎಂದು ತಿಳಿದುಬಂದಿದೆ. ವೈಷ್ಣೋದೇವಿ ದರ್ಶನ ಪಡೆದು ವಾಪಸ್ ಆಗುತ್ತಿದ್ದ ವೇಳೆ ಈ ಅಪಘಾತ ನಡೆದಿದೆ, ಅಪಘಾತದ ನಂತರ ಬಸ್ ಚಾಲಕ ಪರಾರಿಯಾಗಿದ್ದು ಉತ್ತರ ಪ್ರದೇಶ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್​ಗೆ 61 ರನ್ ಗಳ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ್ದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

Ranji Trophy final: ಕರ್ನಾಟಕ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಬೃಹತ್ ಮೊತ್ತ; 527/6

SCROLL FOR NEXT